ಹಾಲು ಉತ್ಪಾದನೆಯ ಪ್ರಮಾಣದಲ್ಲಿ ಕುಸಿತ
Team Udayavani, Mar 4, 2020, 7:00 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳೂ ಸೇರಿದಂತೆ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಮತ್ತು ಖರೀದಿಯಲ್ಲಿ ಕುಸಿತ ಕಂಡುಬಂದಿದ್ದು, ಕೆಎಂಎಫ್ಗೆ ನಿರೀಕ್ಷಿತ ಪ್ರಮಾಣದ ಗುರಿ ತಲುಪಲು ಸಾಧ್ಯವಾಗುತ್ತಿಲ್ಲ. ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಹಾಲು ಉತ್ಪಾದನೆಯ ಬೆಳವಣಿಗೆಯ ಗತಿ ಸತತವಾಗಿ ಇಳಿಕೆ ಕಂಡಿದೆ. ಪ್ರಸ್ತುತ ರಾಜ್ಯದಲ್ಲಿ ಹಾಲು ಸಂಗ್ರಹದಲ್ಲಿ ಒಟ್ಟಾರೆ ಶೇ.4ರಷ್ಟು ಋಣಾತ್ಮಕ ಪ್ರಗತಿ (ನೆಗೆಟಿವ್ ಗ್ರೋತ್) ದಾಖಲಾಗುತ್ತಿದೆ. ಇದು ಹೈನು ಉದ್ಯಮದಲ್ಲಿ ತೊಡಗಿಸಿಕೊಂಡವರ ಅನುಕೂಲ ಕರ ಬೆಳವಣಿಗೆಗೆ ಪೂರಕವಾಗಿಲ್ಲ.
ಹೀಗಾಗಿ ಒಟ್ಟಾರೆಯಾಗಿ ಹಾಲಿನ ಉತ್ಪಾದನೆ ಅಧಿಕವಾಗುತ್ತಿದ್ದರೂ ಒಕ್ಕೂಟಗಳು ಹಾಕಿಕೊಂಡ ನಿರೀಕ್ಷಿತ ಬೆಳವಣಿಗೆ ದರ ತಲುಪಲು ಸಾಧ್ಯವಾಗುತ್ತಿಲ್ಲ. ಅದರಲ್ಲಿಯೂ ಈ ಆರ್ಥಿಕ ವರ್ಷದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಉಡುಪಿ ಮತ್ತು ದ.ಕ. ಜಿಲ್ಲೆಗಳ ವ್ಯಾಪ್ತಿಯನ್ನೊಳಗೊಂಡ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವ್ಯಾಪ್ತಿಯಲ್ಲಿ ಈ ಬಾರಿ ಶೇ.6ರಷ್ಟು ಬೆಳವಣಿಗೆ ಗತಿ ನಿರೀಕ್ಷಿಸಲಾಗಿತ್ತು. ಆದರೆ ಆರ್ಥಿಕ ವರ್ಷದ ಅಂತ್ಯ ಸಮೀಪಿಸಿದರೂ ನಿರೀಕ್ಷಿತ ಗುರಿಯ ಶೇ.1ರಷ್ಟು ಮಾತ್ರ ತಲುಪಲು ಸಾಧ್ಯವಾಗಿದೆ.
ಸೀಸನ್ನಲ್ಲಿಯೂ ಕುಸಿತ
ಸಾಮಾನ್ಯವಾಗಿ ಸೆಪ್ಟಂಬರ್-ಡಿಸೆಂಬರ್ಅವಧಿ ದನಗಳು ಕರು ಹಾಕುವ ಸಮಯ. ಈ ಸಮಯದಲ್ಲಿ ದೇಸೀ ತಳಿ ದನಗಳು ಕೂಡ ಹೆಚ್ಚಿನ ಸಂಖ್ಯೆ ಯಲ್ಲಿ ಕರು ಹಾಕುತ್ತವೆ. ಹಾಗಾಗಿ ಹಾಲಿನ ಉತ್ಪಾದನೆ ಹೆಚ್ಚು. ಕಳೆದ ವರ್ಷ ಈ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 86 ಲಕ್ಷ ಲೀ. ಹಾಲು ಸಂಗ್ರಹವಾಗಿತ್ತು. ಆದರೆ ಈ ಬಾರಿ ಈ ಅವಧಿಯಲ್ಲೂ ಕುಸಿತ ವಾಗಿದ್ದು, 76 ಲಕ್ಷ ಲೀ.ಗಿಂತಲೂ ಕಡಿಮೆ ಸಂಗ್ರಹವಾಗಿದೆ.
ಕಾರಣವೇನು?
3 ವರ್ಷಗಳಿಂದ ರೈತರಿಗೆ ನೀಡುವ ಹಾಲಿನ ದರದಲ್ಲಿ ಏರಿಕೆ ಮಾಡದಿರುವುದು, ಈ ಬಾರಿ ಉಂಟಾದ ಪ್ರವಾಹ ಇತ್ಯಾದಿ ಕಾರಣಗಳಿವೆ. ಹೆಚ್ಚು ಹಾಲು ಉತ್ಪಾದಿಸುವ ಹೈನುಗಾರರು ನಿರಾಸಕ್ತಿ ತೋರಿಸಿರುವುದು ಪ್ರಮುಖ ಕಾರಣ ಎನ್ನಲಾಗಿದೆ.
ಗುಜರಾತ್ ಸೇರಿದಂತೆ ರಾಷ್ಟ್ರದ ಹಲವೆಡೆ ಹಾಲು ಉತ್ಪಾದನೆ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ. ಈ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಾಮಾನ್ಯವಾಗಿ 4 ವರ್ಷಗಳಿಗೊಮ್ಮೆ ಈ ರೀತಿಯ ಇಳಿಕೆ ಕಂಡುಬರುತ್ತದೆ. ಆದರೆ ಈ ವರ್ಷ ತುಂಬಾ ಇಳಿಕೆ ಕಂಡುಬಂದಿದೆ. ಮುಂದಿನ ವರ್ಷ ಏರಿಕೆಯಾಗದಿದ್ದರೆ ಹೆಚ್ಚಿನ ಗಮನಹರಿಸುವ ಅಗತ್ಯ ಉಂಟಾಗಲಿದೆ.
-ಡಾ| ಜಿ.ವಿ. ಹೆಗ್ಡೆ, ದ.ಕ. ಜಿಲ್ಲಾ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕರು
ನಮ್ಮ ಒಕ್ಕೂಟ ವ್ಯಾಪ್ತಿಯಲ್ಲಿಯೂ ಹಾಲು ಉತ್ಪಾದನೆ ಬೆಳವಣಿಗೆ ದರ ನಿರೀಕ್ಷಿತ ಮಟ್ಟದ ಲ್ಲಿಲ್ಲ. ರೈತರಿಗೆ ಹಾಲಿನ ಬೆಲೆ ಹೆಚ್ಚಿಸುವುದು, ಪಶು ಆಹಾರದ ಬೆಲೆ ಇಳಿಸುವುದೇ ಮೊದಲಾದ ಉತ್ತೇಜನ ಕ್ರಮಗಳು ಅಗತ್ಯ. ನಮ್ಮ ಒಕ್ಕೂಟವು ಹಸಿರು ಹುಲ್ಲು ಬೆಳೆಸುವವರಿಗೆ ಸಬ್ಸಿಡಿ, ಕಡಿಮೆ ದರಕ್ಕೆ ಜೋಳದ ಕಡ್ಡಿಗಳ ಪೂರೈಕೆ ಮೊದಲಾದ ಕ್ರಮಗಳನ್ನು ಕೈಗೊಳ್ಳುತ್ತಿದೆ.
-ಕೆ. ರವಿರಾಜ್ ಹೆಗ್ಡೆ, ಅಧ್ಯಕ್ಷರು, ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ
– ಸಂತೋಷ್ ಬೊಳ್ಳೆಟ್ಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?
Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು
D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ
Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ
Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.