ಇಂದು ಬಿಜೆಪಿ-2 ಸರಕಾರದ ಚೊಚ್ಚಲ ಬಜೆಟ್‌ : ಬಿಎಸ್‌ವೈ ಕೃಪೆ ಯಾರಿಗೆ?


Team Udayavani, Mar 5, 2020, 7:15 AM IST

ಇಂದು ಬಿಜೆಪಿ-2 ಸರಕಾರದ ಚೊಚ್ಚಲ ಬಜೆಟ್‌

ಬೆಂಗಳೂರು: ಸಮ್ಮಿಶ್ರ ಸರಕಾರ ಪತನದ ಬಳಿಕ ಮತ್ತೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರಕಾರದ ನಾಯಕತ್ವ ವಹಿಸಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಗುರುವಾರ ಈ ಅವಧಿಯ ಚೊಚ್ಚಲ ಮತ್ತು ತಮ್ಮ ಏಳನೇ ಬಜೆಟ್‌ ಮಂಡಿಸಲಿದ್ದಾರೆ. ನೀರಾವರಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಿ ಹಳೆಯ ಯೋಜನೆಗಳ ಸ್ವರೂಪ, ಹೆಸರು ಬದಲಾವಣೆ ಜತೆಗೆ ಕೆಲವು ಜನಪ್ರಿಯ ಯೋಜನೆಗಳು ಘೋಷಣೆಯಾಗುವ ನಿರೀಕ್ಷೆ ಇದೆ.

ಜನಪ್ರಿಯ ಕಾರ್ಯಕ್ರಮಗಳನ್ನು ಪ್ರಕಟಿಸಿ ಜನರ ಮನಸ್ಸಿನಲ್ಲಿ ಛಾಪು ಒತ್ತುವಂತೆ ಕೆಲಸ ಮಾಡಬೇಕು ಎಂಬುದು ಯಡಿಯೂರಪ್ಪ ಅವರ ಕನಸು. ಆದರೆ ಆರ್ಥಿಕ ಇತಿಮಿತಿಗಳು, ದುಬಾರಿ ಆಡಳಿತ ನಿರ್ವಹಣ ವೆಚ್ಚ, ನೆರೆ ಪರಿಹಾರ ಕಾರ್ಯ ಸಹಿತ ಇತರ ಕಾರಣಗಳಿಂದ ಲೆಕ್ಕಾಚಾರದ ಬಜೆಟ್‌ ಮಂಡಿಸುವುದು ಅನಿವಾರ್ಯವಾಗಿದೆ. ಸಾಲ ಹಾಗೂ ಹೆಚ್ಚುವರಿ ತೆರಿಗೆ ವಿಧಿಸುವ ಮೂಲಕ ಆದಾಯ ವೃದ್ಧಿಸಿಕೊಳ್ಳಬಹುದಾಗಿದ್ದು, ಯಡಿಯೂರಪ್ಪ ಅವರು ಇದರಲ್ಲಿ ಯಾವುದಕ್ಕೆ ಹೆಚ್ಚಿನ ಒತ್ತು ನೀಡಲಿದ್ದಾರೆ ಎಂಬ ಕುತೂಹಲ ಮೂಡಿದೆ.

ಕ್ಷಿಪ್ರ ರಾಜಕೀಯ ಬೆಳವಣಿಗೆ ತರುವಾಯ ಬಿಜೆಪಿ ಸರಕಾರ ರಚನೆಯಾದಾಗ ಹೊಸ ಬಜೆಟ್‌ ಮಂಡಿಸುವ ಚಿಂತನೆಯಲ್ಲಿದ್ದ ಯಡಿಯೂರಪ್ಪ ಅವರು ನೆರೆ ಕಾರಣಕ್ಕೆ ಆ ಚಿಂತನೆ ಕೈಬಿಟ್ಟರು. ವೆಚ್ಚ ಹೊಂದಾಣಿಕೆ ಮಾಡಿಕೊಂಡು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಡಿ ಸಿದ ಆಯವ್ಯಯವನ್ನೇ ಜಾರಿಗೊಳಿಸಿದರು. ಈ ಬಾರಿ ಪೂರ್ಣಾವಧಿ ಬಜೆಟ್‌ ಮಂಡಿಸಲು ಸಿದ್ಧರಾಗಿದ್ದಾರೆ.

ಸಾಲದ ಮೊರೆ
ಕೇಂದ್ರದ ತೆರಿಗೆ ಮೂಲದಿಂದ ರಾಜ್ಯಕ್ಕೆ ಬರಬೇಕಾದ ಪಾಲಿನಲ್ಲಿ ಇಳಿಕೆ, ಅನುದಾನ ಹಂಚಿಕೆಯಲ್ಲಿ ಕಡಿತದಿಂದಾಗಿ ಹಣಕಾಸು ಲೆಕ್ಕಾಚಾರ ಏರುಪೇರಾಗಿದೆ. 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5,495 ಕೋಟಿ ರೂ.ಗಳ ವಿಶೇಷ ಅನುದಾನ ನೀಡಬೇಕೆಂದು ಕೋರಿ ಯಡಿಯೂರಪ್ಪ ಅವರು ಕೇಂದ್ರ ಸರಕಾರಕ್ಕೆ ಬರೆದ ಪತ್ರಕ್ಕೂ ಈವರೆಗೆ ಪ್ರತಿಕ್ರಿಯೆ ಬಂದಂತಿಲ್ಲ. ಇದರಿಂದಾಗಿ ಹೆಚ್ಚಿನ ಪ್ರಮಾಣದ ಸಾಲಕ್ಕೆ ಮೊರೆ ಹೋಗುವುದು ಅನಿವಾರ್ಯವಾಗಬಹುದು. ರಾಜ್ಯದ ಒಟ್ಟು ಆಂತರಿಕ ಉತ್ಪನ್ನ (ಜಿಎಸ್‌ಡಿಪಿ) ಪ್ರಮಾಣದ ಶೇ.3ರಷ್ಟು ಸಾಲ ಪಡೆಯಲು ಅವಕಾಶವಿದ್ದು, ವಿಶೇಷ ಅವಕಾಶ ಬಳಸಿಕೊಂಡು ಶೇ.3.5ರಷ್ಟು ಸಾಲ ಪಡೆಯಲು ಮುಂದಾಗುವರೇ ಎಂಬುದು ಗುರುವಾರ ಮಂಡನೆಯಾಗುವ ಬಜೆಟ್‌ನಲ್ಲಿ ಸ್ಪಷ್ಟವಾಗಲಿದೆ.

ತೈಲ ಉಪಕರ ಏರಿಕೆ?
ದೇಶಾದ್ಯಂತ ಜಿಎಸ್‌ಟಿ ವ್ಯವಸ್ಥೆ ಜಾರಿಯಾದ ಬಳಿಕ ವಾಣಿಜ್ಯ ತೆರಿಗೆ ಪ್ರಮಾಣ ಹೆಚ್ಚಿಸಲು ಅವಕಾಶವಿಲ್ಲ. ಹಾಗಾಗಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ವಿಧಿಸುವ ಉಪಕರ ಪ್ರಮಾಣ ಹೆಚ್ಚಿಸುವುದು ಇಲ್ಲವೇ ಅಬಕಾರಿ ಸುಂಕವನ್ನಷ್ಟೇ ಏರಿಕೆ ಮಾಡಬಹುದಾಗಿದೆ. ಉಳಿದಂತೆ ಮುದ್ರಾಂಕ ಮತ್ತು ನೋಂದಣಿ ಶುಲ್ಕ, ವಾಹನ ಮಾರಾಟ ತೆರಿಗೆ ಪ್ರಮಾಣ ಹೆಚ್ಚಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಬಿಎಸ್‌ವೈ ಏಳನೇ ಬಜೆಟ್‌
ಬಿ.ಎಸ್‌. ಯಡಿಯೂರಪ್ಪ ಅವರು ಮಂಡಿಸುವ ಏಳನೇ ಬಜೆಟ್‌ ಇದಾಗಿದೆ. ಬಿಜೆಪಿ- ಜೆಡಿಎಸ್‌ ಸಮ್ಮಿಶ್ರ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಯಾಗಿ ಎರಡು ಬಜೆಟ್‌ಗಳನ್ನು ಮಂಡಿಸಿದ್ದ ಯಡಿಯೂರಪ್ಪ ಅವರು ಅನಂತರ ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ನಾಲ್ಕು ಬಜೆಟ್‌ಗಳನ್ನು ಮಂಡಿಸಿದ್ದರು. ಒಟ್ಟಾರೆ ಏಳನೇ ಬಜೆಟ್‌, ಮುಖ್ಯಮಂತ್ರಿಯಾಗಿ ಐದನೇ ಬಜೆಟ್‌ ಇದಾಗಿದೆ.

ಗಾತ್ರ ಕೊಂಚ ಏರಿಕೆ!
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು 2019-20ನೇ ಸಾಲಿಗೆ ಮಂಡಿಸಿದ ಬಜೆಟ್‌ ಗಾತ್ರ 2.34 ಲಕ್ಷ ಕೋಟಿ ರೂ.ಗಳಷ್ಟಿತ್ತು. ರಾಜ್ಯದ ಸದ್ಯದ ಆರ್ಥಿಕತೆಯನ್ನು ಗಮನಿಸಿದರೆ ಬಜೆಟ್‌ ಗಾತ್ರ ಅಷ್ಟೇ ಅಥವಾ ಅದಕ್ಕಿಂತ ಇಳಿಕೆಯಾಗುವ ಸಂಭವ ಇತ್ತು. ಆದರೆ ಆರೂವರೆ ವರ್ಷಗಳ ಬಳಿಕ ರಚನೆಯಾಗಿರುವ ಬಿಜೆಪಿ ಸರಕಾರದ ಬಜೆಟ್‌ ಗಾತ್ರ ಇಳಿಕೆಯಾದರೆ ಅಪಖ್ಯಾತಿಗೆ ಗುರಿಯಾಗಬೇಕಾದೀತು ಎಂಬ ಆತಂಕದಿಂದ ಗಾತ್ರವನ್ನು ಕೊಂಚ ಹಿಗ್ಗಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಹಾಗಾಗಿ ಈ ಬಾರಿ ಶೇ.10ರಷ್ಟು ಹೆಚ್ಚಬಹುದು ಎಂಬ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Zakir

Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್‌ ನಾಯ್ಕ್‌!

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ

mutalik (2)

Israel ಮಾದರಿಯಲ್ಲಿ ಹೊರ ಮತ್ತು ಆಂತರಿಕ ಶತ್ರುಗಳ ವಿರುದ್ಧ ಹೋರಾಡಬೇಕು : ಮುತಾಲಿಕ್

Veerashaiva Lingayat Mahasabha’s opposition to caste census: Shamanur Shivshankarappa

Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Zakir

Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್‌ ನಾಯ್ಕ್‌!

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.