ವಿದೇಶದಿಂದ ಬಂದವರ ತಪಾಸಿಸಿ


Team Udayavani, Mar 6, 2020, 6:24 PM IST

6-March-34

ಹುಮನಾಬಾದ: ಕೊರೊನಾ ವೈರಸ್‌ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತೆ ಕ್ರಮವಾಗಿ ಕಂದಾಯ ಇಲಾಖೆ, ಪಂಚಾಯತ ರಾಜ್‌ ಹಾಗೂ ಅಂಗನವಾಡಿ ಸಿಬ್ಬಂದಿ ಆಯಾ ಪ್ರದೇಶದಲ್ಲಿ ವಿದೇಶದಿಂದ ಬಂದ ಜನರನ್ನು ಗುರುತಿಸಿ ಅವರಿಗೆ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ತಿಳಿಸಬೇಕು ಎಂದು ತಹಶೀಲ್ದಾರ್‌ ನಾಗಯ್ನಾ ಹಿರೇಮಠ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಕೊರೊನಾ ಮುಂಜಾಗ್ರತೆ ಕುರಿತು ಮಾತನಾಡಿದ ಅವರು, ವಿದೇಶದಿಂದ ಹಾಗೂ ನೆರೆ ರಾಜ್ಯಗಳಿಂದ ಬಂದ ಜರನ್ನು ಗುರುತಿಸಿ ಪಟ್ಟಿ ತಯಾರಿಸಬೇಕು. ಬೇರೆಡೆಯಿಂದ ಬಂದವರು ಖುದ್ದು ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವಂತೆ ಪ್ರೇರಣೆ ನೀಡಬೇಕು. ಇಲ್ಲವಾದರೆ ಆರೋಗ್ಯ ಅಧಿ ಕಾರಿಗಳೆ ಅವರ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸುತ್ತಾರೆ ಎಂದು ತಿಳಿಸಿದರು.

ಕೊರೊನಾ ಭಯ ಬೇಡ: ಕೊರೊನಾ ವೈರಸ್‌ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ರೋಗದ ಲಕ್ಷಣಗಳನ್ನು ತಿಳಿದುಕೊಂಡು ಮುಂಜಾಗ್ರತೆ ವಹಿಸಿದರೆ ವೈರಸ್‌ ಬರುವುದಿಲ್ಲ. ನಮ್ಮ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ಖಚಿತವಾಗಿಲ್ಲ. ಕಾರಣ ಇಲ್ಲಿನ ಜನರು ಭಯ ಪಡುವ ಅಗತ್ಯ ಇಲ್ಲ. ಆದರೆ, ಪ್ರತಿಯೊಬ್ಬರು ಸ್ವತ್ಛತೆಗೆ ಹೆಚ್ಚಿನ ಆದತ್ಯೆ ನೀಡಬೇಕು ಎಂದು ಸಲಹೆ ನೀಡಿದರು.

ಜಾಗೃತಿ ಮೂಡಿಸಿ: ಅಂಗನವಾಡಿ, ಪಂಚಾಯತ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ಎಲ್ಲಕಡೆಗಳಲ್ಲಿ ಜನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜನರಿಗೆ ರೋಗದ ಲಕ್ಷಣಗಳು, ರೋಗ ಹರಡದಂತೆ ಮಾಡಬೇಕಾದ ನಿಯಮಗಳ ಕುರಿತು ತಿಳಿವಳಿಕೆ ನೀಡಬೇಕು. ಶಾಲಾ ಕಾಲೇಜು ಹಾಗೂ ಗ್ರಾಮೀಣ ಭಾಗದಲ್ಲಿ ಈ ಕುರಿತು ಹೆಚ್ಚಿನ ಪ್ರಚಾರ ನಡೆಸಬೇಕು. ಹುಮನಾಬಾದ, ಚಿಟಗುಪ್ಪ ಹಾಗೂ ಹಳ್ಳಿಖೇಡ(ಬಿ) ಪುರಸಭೆ ವ್ಯಾಪ್ತಿಯಲ್ಲಿ ಪುರಸಭೆ ವಾಹನಗಳ ಮೂಲಕ ಜನರಿಗೆ ತಿಳಿವಳಿಕೆ ನೀಡುವ ಮೂಲಕ ಭಯ ಬೇಡ ಎಂಬ ಸಂದೇಶ ಸಾರಬೇಕು ಎಂದು  ತಹಶೀಲ್ದಾರ್‌ ಮಾಹಿತಿ ನೀಡಿದರು.

ರಜೆ ಪಡೆಯಬೇಡಿ: ಮುಂದಿನ ಕೆಲ ದಿನಗಳಲ್ಲಿ ಬೇಸಿಗೆ ರಜೆ ಆರಂಭವಾಗಲ್ಲಿದ್ದು, ಕೊರೊನಾ ಜಾಗೃತಿಗಾಗಿ ಹಾಗೂ ನಿರ್ವಹಣೆಗಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ರಜೆ ಪಡೆಯುವಂತಿಲ್ಲ. ಜಿಲ್ಲಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದು, ರಜೆ ಪಡೆಯದೇ ಅಧಿಕಾರಿಗಳು ಜನ ಜಾಗೃತಿ ಮೂಡಿಸಿ ಕೊರೊನಾ ಬರದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಇದು ನಮ್ಮ ಕರ್ತವ್ಯ ಎಂದು ಭಾವಿಸಿ ಕೆಲಸ ಮಾಡಬೇಕು ಎಂದು ಹೇಳಿದರು.

ಕೈ ತೊಳೆಯುವ ಅಭಿಯಾನ: ಎಲ್ಲ ಶಾಲಾ, ಕಾಲೇಜು, ವಸತಿ ನಿಲಯಗಳಲ್ಲಿ ಮತ್ತು ವಿವಿಧ ಪಟ್ಟಣ, ಗ್ರಾಮೀಣ ಭಾಗದ ಜನರಿಗೆ ಕೈ ತೊಳೆಯುವ ಕುರಿತು ಮಾಹಿತಿ ನೀಡಬೇಕು. ಇದು ಅಭಿಯಾನದ ಮಾದರಿಯಲ್ಲಿ ಕೆಲಸ ಮಾಡಬೇಕು. ಊಟ ಮಾಡುವ ಮುನ್ನ, ಶೌಚಾಲಯಯದ ನಂತರ ಪ್ರತಿ ಎರಡು ಗಂಟೆಗಳಿಗೆ ಒಮ್ಮೆ ತಪ್ಪದೆ ಕೈ ತೊಳೆಯುವ ಕಾರ್ಯ ಮಾಡಿದರೆ ವೈರಸ್‌ ಬರದಂತೆ ಮಾಡಬಹುದು.

ಆಸ್ಪತ್ರೆಗಳಲ್ಲಿ ಸಿದ್ಧತೆ ಮಾಡಿಕೊಳ್ಳಿ: ಕೊರೊನಾ ವೈರಸ್‌ ಬರುವ ಮುನ್ನವೇ ಎಲ್ಲ ಸಮುದಾಯ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ ಮೈಲಾರೆ ಹೇಳಿದರು.

ಕೊರೊನಾ ರೋಗಿ ಬಂದ ನಂತರ ಸಿದ್ಧತೆ ಮಾಡಿಕೊಳ್ಳುವ ಬದಲಿಗೆ ಕೂಡಲೇ ಎಲ್ಲ ಕಡೆ ಮುನ್ನೆಚ್ಚರಿಕೆ ಕ್ರಮಗಳು ವಹಿಸಬೇಕು. ಮಾಸ್ಕ್ಸೇ ರಿದಂತೆ ಒಂದು ಸೇಟ್‌ ಸಮವಸ್ತ್ರ ಖರೀದಿಸಿ. ಅಲ್ಲದೆ, ಎರಡು ಹಾಸಿಗೆಗಳ ಘಟಕ ಸ್ಥಾಪಿಸಿಕೊಳ್ಳಿ ಎಂದು ತಿಳಿಸಿದರು. ಈ ಮಧ್ಯದಲ್ಲಿ ಹಳ್ಳಿಖೇಡ(ಬಿ) ಆಸ್ಪತ್ರೆಯ ವೈದ್ಯ ಮಾತನಾಡಿ, ಕೊರೊನಾ ಘಟಕ ಸ್ಥಾಪನೆ ಕೂರಿತು ಸೂಕ್ತ ನಿಯಮಾವಳಿಗಳನ್ನು ನೀಡಿ ಎಂದು ಹೇಳಿದರು. ಇದಕ್ಕೆ ತಹಶೀಲ್ದಾರ್‌ ಉತ್ತರಿಸಿ, ಜಿಲ್ಲಾಧಿಕಾರಿಗಳು ಮೌಖೀಕ ಆದೇಶ ನೀಡಿದ್ದು, ಎಲ್ಲ ಸಂದರ್ಭದಲ್ಲಿ ಆದೇಶಗಳನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಪ್ರಯಾಣಿಕರಿಗೆ ತಪಾಸಣೆ ಮಾಡಿ: ನೆರೆ ರಾಜ್ಯದಿಂದ ಇಲ್ಲಿಗೆ ಬರುವ ಪ್ರಯಾಣಿಕರನ್ನು ತಪಾಸಣೆ ನಡೆಸುವುದರಿಂದ ಬೇರೆ ಕಡೆಯಿಂದ ರೋಗ ಬರದಂತೆ ಎಚ್ಚರಿಕೆ ವಹಿಸಬಹುದಾಗಿದೆ. ದಿನಕ್ಕೆ ನೂರಾರು ಬಸ್‌ ಸಂಚಾರ ಇದ್ದು, ಬಸ್‌ ನಿಲ್ದಾಣ ಅಥವಾ ಇತರೆ ಕಡೆಗಳಲ್ಲಿ ಕಡ್ಡಾಯ ತಪಾಸಣೆ ಮಾಡಿದರೆ ಸೂಕ್ತ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಪ್ರಶಾಂತ ಕನಕಟ್ಟೆ ಕೊರೊನಾ ಕುರಿತು ವಿವರಣೆ ನೀಡಿದರು. ತಾಲೂಕು ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವೈಜಿನಾಥ ಫುಲೆ, ಸಿಡಿಪಿಒ ಶೋಭಾ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.