ಅನ್ನಭಾಗ್ಯ ಅಕ್ಕಿ ಕಡಿತ ಖಂಡಿಸಿ ಪತ್ರ ಚಳವಳಿ


Team Udayavani, Mar 8, 2020, 5:32 PM IST

mysuru-tdy-1

ಮೈಸೂರು: ಅನ್ನಭಾಗ್ಯ ಯೋಜನೆಯ ಅಕ್ಕಿ ಕಡಿತಗೊಳಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಪತ್ರ ಚಳವಳಿ ನಡೆಸಲಾಯಿತು.

ಮಹಾ ನಗರಪಾಲಿಕೆ ಎದುರಿನ ಅಂಚೆ ಡಬ್ಬಕ್ಕೆ ಪತ್ರ ಹಾಕಿ ಚಳಿವಳಿ ನಡೆಸಿದ ಸಂಘಟನೆಗಳ ಮುಖಂಡರು ಸರ್ಕಾರದ ನಡೆಯನ್ನು ಖಂಡಿಸಿದರು.

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಹಸಿವಿನಿಂದ ಸಾಯುವ ಲಕ್ಷಾಂತರ ಜನರ ಅಮೂಲ್ಯ ಜೀವಗಳನ್ನು ಉಳಿಸಲು ಅನ್ನಭಾಗ್ಯ ಯೋಜನೆ ಘೋಷಿಸಿ, ತಮ್ಮ ಅಧಿಕಾರಾವಧಿಯಲ್ಲಿ ಅಲಕ್ಷಿತ ಜನರ ಹಸಿವು ನೀಗಿಸಿ ನಿಜವಾದ ಅರ್ಥದಲ್ಲಿ ಅನ್ನಭಾಗ್ಯದಾತ ಎಂಬ ಗೌರವಕ್ಕೆ ಭಾಜನರಾದರು. ಆದರೆ, ಈಗಿನ ಮುಖ್ಯಮಂತ್ರಿ ಯಡಿಯೂರಪ್ಪ ಆರ್ಥಿಕ ಸಂಪನ್ಮೂಲಗಳ ಕೊರತೆಯ ನೆಪದಲ್ಲಿ ಪ್ರಜೆಗಳ ಆಹಾರ ಭದ್ರತೆಗೆ ವಿರುದ್ಧವಾಗಿ ಬಜೆಟ್‌ ಮಂಡಿಸಿ ಅಸಂಖ್ಯಾತ ಬಡವರ ಬದುಕುವ ಮೂಲಭೂತ ಹಕ್ಕನ್ನು ಕಸಿದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಬಾರಿಯ ಬಜೆಟ್‌ನಲ್ಲಿ ಅನ್ನಭಾಗ್ಯ ಯೋಜನೆಯಲ್ಲಿ ನೀಡುತ್ತಿದ್ದ 7 ಕೆ.ಜಿ. ಅಕ್ಕಿ ಬದಲಾಗಿ 2 ಕೆ.ಜಿ. ಅಕ್ಕಿ ಕಡಿತಗೊಳಿಸಿ, 2 ಕೆ.ಜಿ. ಗೋಧಿ-ರಾಗಿ ನೀಡಲು ಹೊರಟಿರುವುದು ಖಂಡನೀಯ. ಬಡವರ ಬಗ್ಗೆ ಕಾಳಜಿಯಿದ್ದರೆ, 2 ಕೆ.ಜಿ. ಅಕ್ಕಿ ಕಡಿತ ಮಾಡದೆ ಗೋಧಿ- ರಾಗಿ ಕೊಡಬಹುದಿತ್ತು. ಯಡಿಯೂರಪ್ಪ, ಯಾವುದೋ ಹುನ್ನಾರಕ್ಕೆ ಬಲಿಯಾಗಿ ಬಡವರ ಅನ್ನ ಕೀಳುವ ಕಾರ್ಯಕ್ಕೆ ಕೈಹಾಕಿರುವುದು ತೀವ್ರ ಖಂಡನೀಯ. ಬಡವರ ಪರ ಕಾಳಜಿ, ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆ ಮುಖ್ಯಮಂತ್ರಿ ಯವರಿಗಿದ್ದರೆ, ಈ ಕೂಡಲೇ ರಾಗಿ-ಗೋಧಿ ಜೊತೆಗೆ ಇನ್ನು ಮುಂದೆ 10 ಕೆ.ಜಿ. ಅಕ್ಕಿ ನೀಡಿ ಆ ವರ್ಗಗಳ ಬಗೆಗೆ ನಿಜ ಕಾಳಜಿ ವ್ಯಕ್ತಪಡಿಸ ಬೇಕು ಎಂದು ಆಗ್ರಹಿಸಿದರು.

ನಿವೃತ್ತ ಪ್ರಾಧ್ಯಾಪಕ ಮಹೇಶ್‌ಚಂದ್ರ ಗುರು, ವೇದಿಕೆ ರಾಜಾಧ್ಯಕ್ಷ ಕೆ.ಎಸ್‌.ಶಿವರಾಮು, ಮುಖಂಡ ರಾದ ಪಿ.ರಾಜು, ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಆರ್‌.ಕೆ.ರವಿ, ಹಿನಕಲ್‌ ಉದಯ್‌, ಕೆ.ಪಿ. ಚಿಕ್ಕಸ್ವಾಮಿ, ಕಾಡನಹಳ್ಳಿ ಸ್ವಾಮಿ, ಪ್ರಸನ್ನ ದೊಡ್ಡುಂಡಿ, ತ್ಯಾಗರಾಜ್‌, ನಿಹಾಲ್‌, ಲೋಕೇಶ್‌ಕುಮಾರ್‌, ಸತ್ಯನಾರಾಯಣ, ಬೀರೇಶ್‌, ರೂಪೇಶ್‌, ಪುನಿತ್‌,ಕುರುಬರಹಳ್ಳಿ ಧನಪಾಲ್‌, ಸುರೇಶ್‌ ಬಾಬು ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.