ಹಂಗಾರಕಟ್ಟೆ ಬಂದರಿನ ಅಭಿವೃದ್ಧಿಗೆ ಸರಕಾರದ ಒತ್ತು

ಮೂರು ಕಿರುಬಂದರುಗಳ ಸಮಸ್ಯೆ ಏಕ ಕಾಲಕ್ಕೆ ಪರಿಹಾರ

Team Udayavani, Mar 9, 2020, 5:55 AM IST

ಹಂಗಾರಕಟ್ಟೆ ಬಂದರಿನ ಅಭಿವೃದ್ಧಿಗೆ ಸರಕಾರದ ಒತ್ತು

ಕೋಟ: ಶತಮಾನಗಳ ಇತಿಹಾಸದ ಹಂಗಾರಕಟ್ಟೆಯ ಬಂದರು ವ್ಯವಸ್ಥಿತವಾಗಿ ಅಭಿವೃದ್ಧಿಗೊಳ್ಳಬೇಕು ಎನ್ನವುದು ಹಲವು ದಶಕಗಳ ಬೇಡಿಕೆ. ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಈ ಬಜೆಟ್‌ನಲ್ಲಿ 130 ಕೋಟಿ ರೂ. ಮೀಸಲಿರಿಸಿದ್ದು ಹೊಸ ಭರವಸೆ ಮೂಡಿದೆ.

ಮೂರು ಕಿರು ಬಂದರಿನ ಸಮಸ್ಯೆ
ಬ್ರಹ್ಮಾವರ ತಾಲೂಕು ವ್ಯಾಪ್ತಿಗೆ ಒಳಪಡುವ ಹಂಗಾರಕಟ್ಟೆ, ಕೋಡಿಕನ್ಯಾಣ, ಕೋಡಿಬೆಂಗ್ರೆ ಈ ಮೂರು ಬಂದರುಗಳು ಪರಸ್ಪರ ಒಂದಕ್ಕೊಂದು ಹೊಂದಿಕೊಂಡಿವೆ ಹಾಗೂ ಒಂದೇ ಅಳಿವೆ ಇವುಗಳಿಗೆ ಸಂಪರ್ಕ ಬೆಸೆಯುತ್ತದೆ. ಆದರೆ ಅಳಿವೆಗೆ ಬ್ರೇಕ್‌ ವಾಟರ್‌ ತಡೆಗೋಡೆ ಇಲ್ಲದಿರುವುದು ಇಲ್ಲಿನ ಪ್ರಮುಖ ಸಮಸ್ಯೆ. ಇದರಿಂದ ಬೋಟ್‌ ಸಂಚಾರ ಅಸಾಧ್ಯವಾಗಿತ್ತು ಮತ್ತು ಉಬ್ಬರ ಇಳಿತವನ್ನು ಗಮನಿಸಿ ಜಟ್ಟಿಯಿಂದ ಹೊರ ಹೋಗಬೇಕಿತ್ತು. ಹೀಗಾಗಿ ಮೀನುಗಾರಿಕೆ ಅವಧಿ ಆರಂಭಗೊಂಡು ಎರಡು-ಮೂರು ತಿಂಗಳು ಕಳೆದರು ಇಲ್ಲಿನ ಬೋಟ್‌ಗಳಿಗೆ ಮೀನುಗಾರಿಕೆಗೆ ತೆರಳಲು ಸಾಧ್ಯವಾಗುತ್ತಿರಲಿಲ್ಲ. ಪ್ರಸ್ತುತ ಬಿಡುಗಡೆಯಾದ ಹಣವನ್ನು ಸಂಪೂರ್ಣವಾಗಿ ಬ್ರೇಕ್‌ ವಾಟರ್‌ ಕಾಮಗಾರಿಗೆ ಮೀಸಲಿರಿಸುವುದರಿಂದ ಮೂರು ಕಿರು ಬಂದರುಗಳ ಸಮಸ್ಯೆ ಏಕ ಕಾಲದಲ್ಲಿ ಪರಿಹಾರವಾಗಲಿದೆ.

ಪಾರಂಪರಿಕ ಬಂದರು
ವಿಜಯನಗರ ಸಾಮ್ರಾಜ್ಯದ ಆಡಳಿತಾವಧಿಯಲ್ಲಿ ಬಾರಕೂರು ಅರಸರು ಹಾಗೂ ಬ್ರಿಟಿಷ್‌ ಸರಕಾರದ ಕಾಲದಲ್ಲಿ ಹಂಗಾರಕಟ್ಟೆ ಬಂದರು ವಿದೇಶಗಳಿಗೆ ಆಹಾರ ವಸ್ತುಗಳ ಆಮದು, ರಪು¤ ನಡೆಸುವ ಪ್ರಮುಖ ವ್ಯಾಪಾರ ತಾಣವಾಗಿ ಪ್ರಸಿದ್ಧಿ ಪಡೆದಿತ್ತು.

ಸಾರ್ವಕಾಲಿಕ ಬಂದರಾಗುವ ಅವಕಾಶ
ಪ್ರಸ್ತುತ ಕೋಡಿ ಬೆಂಗ್ರೆಯಲ್ಲಿ 100ಕ್ಕೂ ಹೆಚ್ಚು ಬೋಟ್‌ಗಳು ಹಾಗೂ ಹಂಗಾರಕಟ್ಟೆಯಲ್ಲಿ 150, ಕೋಡಿಕನ್ಯಾಣದಲ್ಲಿ 200ಕ್ಕೂ ಹೆಚ್ಚು ಬೋಟ್‌ಗಳು ಮೀನುಗಾರಿಕೆ ನಡೆಸುತ್ತಿದೆ ಹಾಗೂ ಈ ಭಾಗದ ಸುಮಾರು 600ಕ್ಕೂ ಹೆಚ್ಚು ಬೋಟ್‌ಗಳು ಮಲ್ಪೆಯ ಬಂದರನ್ನು ಆಶ್ರಯಿಸಿವೆೆ. ಇಲ್ಲಿ ತಡೆಗೋಡೆ ನಿರ್ಮಾಣವಾದರೆ ಸಾರ್ವಕಾಲಿಕ ಬಂದರಾಗಿ ಮಲ್ಪೆಯ ಒತ್ತಡವೂ ಕಡಿಮೆಯಾಗುತ್ತದೆ.

ಸೀ ವಾಕ್‌ ಕುರಿತು ಚಿಂತನೆ ಅಗತ್ಯ
ಬ್ರೇಕ್‌ ವಾಟರ್‌ ತಡೆಗೋಡೆ ನಿರ್ಮಿಸುವ ಸಂದರ್ಭ ಮಲ್ಪೆಯ ಮಾದರಿ ಭವಿಷ್ಯದಲ್ಲಿ ಸೀ ವಾಕ್‌ ನಿರ್ಮಾಣ ಕೈಗೊಳ್ಳುವ ಬಗ್ಗೆ ಮುಂದಾಲೋಚನೆ ಅಗತ್ಯವಿದೆ. ಮೂರು ಕಡೆಗಳಲ್ಲಿ ಕಿರು ಬಂದರು, ದ್ವೀಪ, ಸೀತಾನದಿ ಸಮುದ್ರ ಸೇರುವ ಸಂಗಮ ಸ್ಥಳ ಹಾಗೂ ಅಪ್ರತಿಮ ಪ್ರಕೃತಿ ಸೌಂದರ್ಯದ ತಾಣವಾಗಿರುವುದರಿಂದ ಪ್ರವಾಸಿ ತಾಣವಾಗಿ ಬೆಳೆಯಲು ಅವಕಾಶವಿದೆ.

ಅಭಿವೃದ್ಧಿಗೆ ಅವಕಾಶ
ಹಂಗಾರಕಟ್ಟೆಯ ಬ್ರೇಕ್‌ ವಾಟರ್‌ ಕಾಮಗಾರಿಗೆ ಸರಕಾರ ಬಜೆಟ್‌ನಲ್ಲಿ 130ಕೋಟಿ ಮೀಸಲಿರಿಸಿರುವುದು ತುಂಬಾ ಸಂತಸ ತಂದಿದೆ. ಭವಿಷ್ಯದಲ್ಲಿ ಮೂರು ಕಿರುಬಂದರುಗಳು ಸಾರ್ವಕಾಲಿಕ ಬಂದರಾಗಿ ಅಭಿವೃದ್ಧಿಗೆ ಇದು ಸಹಾಯಕವಾಗಲಿದೆ.
-ರಾಜೇಂದ್ರ ಸುವರ್ಣ, ಹಂಗಾರಕಟ್ಟೆ ಬಂದರು ಅಭಿವೃದ್ಧಿ ಸಮಿತಿ ಅಧ್ಯಕ್ಷರು

ಟಾಪ್ ನ್ಯೂಸ್

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.