ತೀವ್ರಗೊಂಡ ಬಿಬಿಎಂಪಿ ಕಸದ ಕಿಚ್ಚು


Team Udayavani, Mar 9, 2020, 5:42 PM IST

BR-TDY-1

ದೊಡ್ಡಬಳ್ಳಾಪುರ: ತಾಲೂಕಿಗೆ ಬಿಬಿಎಂಪಿ ಕಸದ ಲಾರಿ ಬರಲು ಬಿಡುವುದಿಲ್ಲ. ಕೂಡಲೇ ಕಸ ವಿಲೇವಾರಿ ಘಟಕಗಳನ್ನು ಮುಚ್ಚಬೇಕು ಎಂದು ಆಗ್ರಹಿಸಿ ಬಿಬಿಎಂಪಿ ತ್ಯಾಜ್ಯ ಸಂಗ್ರಹಣಾ ಘಟಕ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ತಾಲೂಕಿನ ಮೂಗೇನಹಳ್ಳಿ ಗೇಟ್‌ ಬಳಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ಮುಂದುವರಿದಿದೆ.

ಧರಣಿಯಲ್ಲಿ ಮಾತನಾಡಿದ ಎಲೆರಾಂಪುರ ಕುಂಚಿಗರ ಮಠದ ಡಾ.ಹನುಮಂತನಾಥಸ್ವಾಮೀಜಿ, ಟೆರ್ರಾಫರ್ಮಾ ಕಸ ವಿಲೇವಾರಿ ಘಟಕವನ್ನು ಮತ್ತೆ ಆರಂಭಿಸುವುದಿಲ್ಲ, ಎಂಎಸ್‌ಜಿಪಿ ಕಸ ವಿಲೇವಾರಿ ಘಟಕವನ್ನು ಒಂದು ಅಥವಾ 2 ತಿಂಗಳ ಒಳಗಾಗಿ ಸ್ಥಗಿತಗೊಳಿಸುವ ಬಗ್ಗೆ ಲಿಖೀತ ಭರವಸೆ ನೀಡದ ಹೊರತು ಸಿಎಂ ಸೇರಿದಂತೆ ಯಾರೊಂದಿಗೂ ಚರ್ಚಿಸುವ ಅಗತ್ಯವೇ ಇಲ್ಲ ಎಂದು ಹೇಳಿದರು.

ಆಯುಕ್ತರಿಂದ ಆಹ್ವಾನ: ಧರಣಿ ಸ್ಥಳಕ್ಕೆ ಭಾನುವಾರ ಸಂಜೆ ಭೇಟಿ ನೀಡಿದ್ದ ಬಿಬಿಎಂಪಿ ಆಯುಕ್ತ ಗೌರವ್‌ ಗುಪ್ತ ಅವರು ಧರಣಿನಿರತ ಮುಖಂಡರು, ಶಾಸಕರು ಹಾಗೂ ಸ್ವಾಮೀಜಿಗಳೊಂದಿಗೆ ಸೋಮವಾರ ಬೆಳಗ್ಗೆ 9ಕ್ಕೆ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಲು ಬರುವಂತೆ ಆಹ್ವಾನ ನೀಡಿದರು.

ಧರಣಿ ಹಿಂಪಡೆಯಲ್ಲ: ಬಿಬಿಎಂಪಿ ಆಯುಕ್ತರ ಮನವಿ ತಿರಸ್ಕರಿಸಿದ ಡಾ.ಹನುಮಂತನಾಥಸ್ವಾಮೀಜಿ, ಬಿಬಿಎಂಪಿ ಕಸ ವಿಲೇವಾರಿ ಘಟಕ ಇಲ್ಲಿ ಸೃಷ್ಟಿಸಿರುವ ಅವಾಂತರದ ಸಂಪೂರ್ಣ ವರದಿ ಮುಖ್ಯಮಂತ್ರಿಗಳ ಬಳಿ ಈಗಾಗಲೇ ಇದೆ. ಮತ್ತೆ ಇದೇ ವಿಷಯದ ಬಗ್ಗೆ ಚರ್ಚಿಸುವ ಅಗತ್ಯ ಇಲ್ಲ. ನಮ್ಮ ಬೇಡಿಕೆ ಈಡೇರದ ಹೊರತು ಶಾಂತಿಯುತ ಧರಣಿಯನ್ನು ಹಿಂದಕ್ಕೆ ಪಡೆಯುವ ಅಗತ್ಯವೇ ಇಲ್ಲ. ಬಿಬಿಎಂಪಿ ಹಾಗೂ ಸಚಿವರು ಇಲ್ಲಿನ ಕಸ ವಿಲೇವಾರಿ ಘಟಕಗಳ ಸುತ್ತಲಿನ ಗ್ರಾಮಗಳಲ್ಲಿ ಬಂದು 24 ಗಂಟೆಗಳ ಕಾಲ ವಾಸ ಮಾಡಿಹೋಗಲಿ. ಇಲ್ಲಿ ಮನುಷ್ಯರು ವಾಸ ಮಾಡಲು ಯೋಗ್ಯವಾಗಿದೆ ಎಂದು ಹೇಳಿದರೆ ನಮ್ಮ ಹೋರಾಟ ಹಿಂದಕ್ಕೆ ಪಡೆಯುತ್ತೇವೆ. ಕಸ ಇಲ್ಲಿಗೆ ಬರುವುದಿಲ್ಲ ಎಂದು ಲಿಖೀತವಾಗಿ ನೀಡಿದ ಕ್ಷಣದಿಂದಲೇ ನಮ್ಮ ಹೋರಾಟವನ್ನು ನಿಲ್ಲಿಸುತ್ತೇವೆ ಎಂದು ಹೇಳಿದರು. ಬಿಬಿಎಂಪಿ ಆಯುಕ್ತರು ಹಾಗೂ ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಅವರು ಕಸ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿನೆ ನಡೆಸಿದರು.

ಲಾರಿಗಳ ಸುಳಿವಿಲ್ಲ: ಬಿಬಿಎಂಪಿ ಕಸ ವಿಲೇವಾರಿ ವಿರುದ್ಧ ಮಾ.6 ರಿಂದ ಪ್ರತಿಭಟನಾ ಧರಣಿ ಆರಂಭವಾದ ನಂತರ ಕಸ ತುಂಬಿದ ಯಾವುದೇ ಲಾರಿಗಳು ಈ ಕಡೆಗೆ ಸುಳಿದಿಲ್ಲ. ಪ್ರತಿದಿನ ಸುಮಾರು 170ಕ್ಕೂ ಹೆಚ್ಚಿನ ಲಾರಿಗಳು ಬಿಬಿಎಂಪಿ ಯಿಂದ ಇಲ್ಲಿಗೆ ಕಸ ತುಂಬಿಕೊಂಡು ಬಂದು ಸುರಿಯುತ್ತಿದ್ದು ಕಸದ ದಾರಿಗಳಿಗೆ ಪ್ರವೇಶ ಇಲ್ಲದಂತಾಗಿದೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.