ರೈಲು ನಿಲ್ದಾಣದಲ್ಲಿ ಸೈಕಲ್‌ ಪ್ಯೂರ್‌ ಅಗರ್‌ಬತ್ತೀಸ್‌ ಮಳಿಗೆ ಆರಂಭ


Team Udayavani, Mar 10, 2020, 3:00 AM IST

railu-nildana

ಮೈಸೂರು: ವಿಶ್ವದ ಅತಿದೊಡ್ಡ ಅಗರಬತ್ತಿ ಮತ್ತು ಪೂಜಾ ಉತ್ಪನ್ನ ತಯಾರಿಕಾ ಸಂಸ್ಥೆಯಾಗಿರುವ ಸೈಕಲ್‌ ಪ್ಯೂರ್‌ ಅಗರ್‌ಬತ್ತೀಸ್‌ ಇದೀಗ ಮೈಸೂರು ರೈಲು ನಿಲ್ದಾಣದಲ್ಲಿ ಸೈಕಲ್‌ ಇನ್‌ ಹೆಸರಿನಲ್ಲಿ ಸ್ಟೋರ್‌ ತೆರೆದಿದೆ. ಸ್ಟೋರನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ಮ್ಯಾನೇಜರ್‌ ಅಪರ್ಣ ಗಾರ್ಗ್‌ ಮತ್ತು ಸೈಕಲ್‌ ಪ್ಯೂರ್‌ ಅಗರಬತ್ತೀಸ್‌ನ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್‌ ರಂಗ ಉದ್ಘಾಟಿಸಿದರು.

ಬಳಿಕ ಮಾತನಾಡಿದ ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ಮ್ಯಾನೇಜರ್‌ ಅಪರ್ಣ ಗಾರ್ಗ್‌, ರೈಲು ನಿಲ್ದಾಣದಲ್ಲಿ ಸ್ಟೋರ್‌ ಆರಂಭಿಸಿರುವ ಸೈಕಲ್‌ ಪ್ಯೂರ್‌ನ ಕ್ರಮ ಶ್ಲಾಘನೀಯ. ಗ್ರಾಹಕರ ನಿರೀಕ್ಷೆಗಳಿಗೆ ತಕ್ಕಂತೆ ಸಂಸ್ಥೆಯು ಉತ್ಪನ್ನಗಳನ್ನು ಪೂರೈಸುತ್ತಾ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸೈಕಲ್‌ ಪ್ಯೂರ್‌ ಅಗರ್‌ಬತ್ತೀಸ್‌ನ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್‌ರಂಗ ಮಾತನಾಡಿ, ನಾವು ಅತ್ಯುತ್ತಮ್ಮ ಗುಣಮಟ್ಟದ ಪೂಜಾ ಉತ್ಪನ್ನಗಳನ್ನು ನೀಡುವುದು ಮತ್ತು ನಮ್ಮ ಗ್ರಾಹಕರಿಗೆ ಮತ್ತಷ್ಟು ಹತ್ತಿರವಾಗುವ ಉದ್ದೇಶದಿಂದ ಈ ಸ್ಟೋರ್‌ ತೆರೆದಿದ್ದೇವೆ. ಮಹಿಳಾ ದಿನಾಚರಣೆ ಸಂಭ್ರಮದಲ್ಲಿ ಸ್ತ್ರೀ ಸಬಲೀಕರಣಕ್ಕೂ ಇದು ದಾರಿ ಮಾಡಕೊಡಲಿದೆ.

ರೈಲ್ವೆ ಸಾರಿಗೆ ದೇಶದ ದೊಡ್ಡ ಸಾರಿಗೆ ವ್ಯವಸ್ಥೆ. ಇಂತಹ ಸ್ಥಳದಲ್ಲಿ ಸ್ಟೋರ್‌ ತೆರೆಯಲು ಸಂತಸವಾಗುತ್ತಿದೆ. ಸ್ಟೋರ್‌ ಮೂಲಕ ನಾವು ನಮ್ಮ ಗ್ರಾಹಕರ ಇನ್ನೂ ಉತ್ತಮ ಮತ್ತು ಸರಳವಾದ ರೀತಿಯಲ್ಲಿ ಎಲ್ಲಾ ಬಗೆಯ ಪೂಜಾ ಅಗತ್ಯತೆಗಳನ್ನು ಪೂರೈಸಲಿದ್ದೇವೆ ಎಂದು ಹೇಳಿದರು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂತಹ ಸ್ಟೋರ್‌ ಆರಂಭವಾಗಿರುವುದು ಇದೇ ಮೊದಲು. ನಗರದ ನಾಗರಿಕರು ಮತ್ತು ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಪೂಜೆಗೆ ಬಳಸುವ ಎಲ್ಲಾ ಸಾಮಗ್ರಿಗಳನ್ನು ಈ ಸ್ಟೋರ್‌ ಪೂರೈಸಲಿದೆ.

ದೈನಂದಿನ ಪೂಜೆ ಮತ್ತು ಹಬ್ಬಗಳಿಗೆ ಅಗತ್ಯವಾದ ಗುಣಮಟ್ಟದ ಪೂಜಾ ಉತ್ಪನ್ನಗಳನ್ನು ಮತ್ತು ಇತರೆ ಪರಿಕರಗಳನ್ನು ಸ್ಟೋರ್‌ ಒದಗಿಸಲಿದೆ. ನಗರದ ಹೃದಯ ಭಾಗದಲ್ಲಿ ಆರಂಭವಾಗಿರುವ ಈ ಸ್ಟೋರ್‌ ಮನೆಯ ಪ್ರಾರ್ಥನಾ ಸೇವೆಗೆ ಬೇಕಾದ ಸಾಮಗ್ರಿಗಳನ್ನು ಗ್ರಾಹಕರಿಗೆ ಪೂರೈಸಲಿದೆ. ಆ ಮೂಲಕ ಪ್ರತಿಯೊಬ್ಬ ವ್ಯಕ್ತಿಯ ಪ್ರಾರ್ಥನೆಯಲ್ಲಿ ಭಾಗಿಯಾಗಲಿದೆ.

ಏನೇನು ಸಿಗಲಿದೆ: ಸೈಕಲ್‌ ಇನ್‌ ಸ್ಟೋರ್‌ನಲ್ಲಿ ಅಗರಬತ್ತಿಗಳು, ಪೂಜಾ ಉತ್ಪನ್ನಗಳು, ಐಆರ್‌ಐಎಸ್‌ನಿಂದ ಮನೆಯ ಸುಗಂಧಗಳು ಸೇರಿದಂತೆ ಮತ್ತಿತರ ಉತ್ಪನ್ನಗಳನ್ನು ಗ್ರಾಹಕರಿಗೆ ಪೂರೈಸುತ್ತದೆ. ವಿವಾಹ ವಾರ್ಷಿಕೋತ್ಸವ ಮತ್ತು ಹುಟ್ಟುಹಬ್ಬಗಳಿಗೆಂದೇ ವಿಶಿಷ್ಟವಾದ ಪೂಜ ಪ್ಯಾಕ್‌ಗಳನ್ನು ಗ್ರಾಹಕರಿಗೆ ಒದಗಿಸಲಿದೆ.

ಬೆಂಗಳೂರು ಮತ್ತು ತಮಿಳುನಾಡಿನ ನಂತರ ಸಂಸ್ಥೆಯು ಮೈಸೂರಿನ ರೈಲು ನಿಲ್ದಾಣದಲ್ಲಿ ತನ್ನ ಎರಡನೇ ಸ್ಟೋರ್‌ ಆರಂಭಿಸಿದೆ. ಪ್ರಸ್ತುತ ಸೈಕಲ್‌.ಇನ್‌ ಮೈಸೂರಿನ ವಾಣಿವಿಲಾಸ ಡಬಲ್‌ ರೋಡ್‌, ಬೆಂಗಳೂರಿನ ರಾಜಾಜಿನಗರ, ಜಯನಗರ ಮತ್ತು ಬಸವೇಶ್ವರ ನಗರದಲ್ಲಿ ಸ್ಟೋರ್‌ಗಳನ್ನು ಹೊಂದಿದೆ.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.