ಅಳದಂಗಡಿ: ಕುದ್ಯಾಡಿ ಗ್ರಾಮದಲ್ಲಿ ಚಿರತೆ ಹಾವಳಿ

ಸ್ಥಳೀಯರಿಗೆ ಆತಂಕ,ಮರದಲ್ಲಿ ಅವಿತಿದ್ದ ಚಿರತೆ ಕಂಡ ಮಹಿಳೆ

Team Udayavani, Mar 10, 2020, 5:30 AM IST

ಅಳದಂಗಡಿ: ಕುದ್ಯಾಡಿ ಗ್ರಾಮದಲ್ಲಿ ಚಿರತೆ ಹಾವಳಿ

ವಿಶೇಷ ವರದಿ-ಬೆಳ್ತಂಗಡಿ: ಇಲ್ಲಿನ ಅಳದಂಗಡಿ ಸಮೀಪದ ಕುದ್ಯಾಡಿ ಗ್ರಾಮದಲ್ಲಿ ಮೂರು ವರ್ಷಗಳಿಂದ ಚಿರತೆ ಸುತ್ತಾಡುತ್ತಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಕಳೆದ ಒಂದು ವಾರದ ಅವಧಿಯಲ್ಲಿ ಈ ಪರಿಸರದ ಮಹಿಳೆಯೋರ್ವರು ಎರಡು ಬಾರಿ ಚಿರತೆಯನ್ನು ಪ್ರತ್ಯಕ್ಷ ಕಂಡ ಬಳಿಕ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಹಲೆಕ್ಕಿ ಪರಿಸರದ ಅರಣ್ಯ ಪ್ರದೇಶದಲ್ಲಿ ಚಿರತೆ ವಾಸಿಸುತ್ತಿದ್ದು, ಡಿಸೆಂಬರ್‌ ತಿಂಗಳಲ್ಲಿ ರಾತ್ರಿ ವೇಳೆ ರಸ್ತೆ ಬದಿ ಚಿರತೆ ಮಲಗಿದ್ದುದನ್ನು ಸ್ಥಳೀಯರು ಗಮನಿಸಿದ್ದರು. ಕಾಡಂಚಿನಲ್ಲಿ ವಾಸವಾಗಿರುವ ಇಲ್ಲಿಯ ಮನೆಯೊಂದರ ಮಹಿಳೆಯೋರ್ವರು ಕೆಲವು ದಿನಗಳ ಹಿಂದೆ ಮರದಲ್ಲಿ ಚಿರತೆಯನ್ನು ಕಂಡಿರುವುದಾಗಿ ತಿಳಿಸಿದ್ದಾರೆ. ಕಾಡಿನಲ್ಲಿ ಚಿರತೆ ಕೂಗುವುದೂ ಕೇಳಿಸಿದೆ ಎಂದು ಭಯದಿಂದಲೇ ಸ್ಥಳೀಯರ ಗಮನಕ್ಕೆ ತಂದಿದ್ದರು. ಸಂಜೆ ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುವ ಮಹಿಳೆಯರು, ಶಾಲಾ ಮಕ್ಕಳು ಆತಂಕಗೊಂಡಿದ್ದಾರೆ.

ಬಾವಿಗೆ ಬಿದ್ದಿತ್ತು
ಸ್ಥಳೀಯರು ಹೇಳುವಂತೆ ಸುಮಾರು ಐದು ವರ್ಷಗಳ ಹಿಂದೆ ಇದೇ ಗ್ರಾಮದ ನೊಚ್ಚನಾಡಿ ಎಂಬಲ್ಲಿ ಮನೆಯೊಂದರ ಬಾವಿಗೆ ಚಿರತೆ ಮರಿಯೊಂದು ಬಿದ್ದಿತ್ತು. ಅರಣ್ಯ ಇಲಾಖೆ ಸಿಬಂದಿ ಅದನ್ನು ರಕ್ಷಿಸಿದ್ದರು. ಅದು ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದು, ಅದೇ ಚಿರತೆ ಈಗ ಬೆಳೆದು ಗ್ರಾಮದಲ್ಲಿ ಸುತ್ತಾಡುತ್ತಿದೆ ಎನ್ನಲಾಗಿದೆ. ಹಲವು ಬಾರಿ ನಾಯಿ – ಕೋಳಿಗಳನ್ನು ಹೊತ್ತೂಯ್ದಿತ್ತು. ಕಾಡಿನಲ್ಲಿರುವ ಮಂಗಳನ್ನು ಹಿಡಿದು ತಿನ್ನುವ ಕುರಿತು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಕೃಷಿಕರಾಗಿರುವ ಸ್ಥಳೀಯರು ಭೀತರಾಗಿದ್ದು, ಕಾಡಿನಿಂದ ಕಟ್ಟಿಗೆ, ತರಗೆಲೆ ತರಲು ಹಿಂದೇಟು ಹಾಕುತ್ತಿದ್ದಾರೆ.

ಚಿರತೆ ಹೆಜ್ಜೆ?
ಕುದ್ಯಾಡಿ- ಅಂಡಿಂಜೆ- ವೇಣೂರು ಸಂಪರ್ಕಿಸುವ ಕಚ್ಚಾ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಡಾಮರು ಕಾಮಗಾರಿ ನಡೆಯುತ್ತಿದೆ. ಇಲ್ಲಿನ ಹಲೆಕ್ಕಿ ಬಳಿ ರಸ್ತೆಗೆ ಮೋರಿ ನಿರ್ಮಿಸಲಾಗಿದ್ದು, ಚಿರತೆಯು ಕ್ಯೂರಿಂಗ್‌ಗೆ ಕಟ್ಟಿರುವ ನೀರನ್ನು ಕುಡಿಯಲು ಬಂದಿರಬಹುದೆಂದು ಶಂಕಿಸಲಾಗಿದ್ದು, ಕೆಸರಿನಲ್ಲಿ ಸುಮಾರು 100 ಮೀ. ದೂರದ ವರೆಗೆ ಹೆಜ್ಜೆ ಗುರುತುಗಳು ಕಂಡಿವೆ.

 ಆಗಾಗ ಕಾಣಿಸುತ್ತಿದೆ
ಗ್ರಾಮದ ಕಾಡು ಪ್ರದೇಶಗಳಲ್ಲಿ ವಿವಿಧೆಡೆ ಈ ಚಿರತೆ ಸಂಚರಿಸುತ್ತಿದ್ದು, ಆಗೊಮ್ಮೆ ಈಗೊಮ್ಮೆ ಕಾಣಸಿಗುತ್ತಿದೆ. ಕಾಡಿನಲ್ಲಿ ಕಾಡುಕೋಳಿ, ಹಂದಿ ಇತ್ಯಾದಿ ಪ್ರಾಣಿಗಳು ಇರುವುದರಿಂದ ಚಿರತೆಗೆ ಆಹಾರ ಲಭ್ಯವಾಗುತ್ತಿದೆ. ದೂರ ದೂರ ಮನೆಗಳು ಇರುವುದರಿಂದ ಸೂಕ್ತ ಕ್ರಮ ಅಗತ್ಯ.
– ಪ್ರಮೋದ್‌, ಸ್ಥಳೀಯರು

ಸೂಕ್ತ ಕ್ರಮ ಕೈಗೊಳ್ಳಲಾಗುವುದು
ಅಂಡಿಂಜೆ ಪಕ್ಕ ಬೋನು ಇರಿಸಿದ್ದೇವೆ. ಸಾವ್ಯ, ಕೊಕ್ರಾಡಿ ಆಸುಪಾಸು ಚಿರತೆ ಕಾಣಸಿಕ್ಕಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಚಿರತೆ ಆಹಾರಕ್ಕಾಗಿ ಅಲೆಯುವುದರಿಂದ ನಿರ್ದಿಷ್ಟವಾಗಿ ಬೋನು ಇರಿಸಲು ಸಾಧ್ಯವಿಲ್ಲ. ಹಲೆಕ್ಕಿಯಲ್ಲಿ ಬೋನು ಇರಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು.
-ಅಜಿತ್‌, ಉಪ ವಲಯ ಅರಣ್ಯಧಿಕಾರಿ, ವೇಣೂರು ವಲಯ

 ಚಿರತೆ ನೋಡಿದ್ದೇನೆ
ನಮ್ಮ ಮನೆಗೆ ಹೋಗುವ ದಾರಿಯಲ್ಲಿ ಮರದ ಮೇಲೆ ಚಿರತೆ ಕುಳಿತುಕೊಂಡಿರುವುದನ್ನು ಇತ್ತೀಚಿನ ಕೆಲವು ದಿನಗಳಲ್ಲಿ ನಾನು ನೋಡಿದ್ದೇನೆ. ರಾತ್ರಿ ಚಿರತೆ ಕೂಗುವ ಶಬ್ದ ಕೇಳಿಸುತ್ತದೆ. ಒಂದು ಕಿ.ಮೀ. ದೂರ ಕಾಡಿನ ಮಧ್ಯೆ ನೀರು ತರಲು ಹಾಗೂ ಕೆಲಸಕ್ಕೆ ತೆರಳುವುದರಿಂದ ದಾಳಿ ಮಾಡಬಹುದೆಂದು ಆತಂಕವಾಗುತ್ತದೆ.
– ರಾಧಾ, ಚಿರತೆ ನೋಡಿರುವ ಮಹಿಳೆ

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.