ನೋಡಲು ಸುಂದರವಾಗಿಲ್ಲ ಎಂದು ಪತ್ನಿ ಮೇಲೆ ಪತಿ ಹಲ್ಲೆ
Team Udayavani, Mar 9, 2020, 9:40 PM IST
ಬೆಂಗಳೂರು: ನೋಡಲು ಸುಂದರವಾಗಿಲ್ಲ. ತಾನು ಮತ್ತೂಂದು ಮದುವೆ ಮಾಡಿಕೊಳ್ಳಬೇಕೆಂದು ಪತ್ನಿ ಮೇಲೆ ಪತಿ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ವಿಜಯನಗರದ ಮಾರೇನಹಳ್ಳಿ ನಿವಾಸಿ ವಿಜಯಲಕ್ಷ್ಮೀ ಎಂಬವರು ನೀಡಿದ ದೂರಿನ ಮೇರೆಗೆ ಅವರ ಪತಿ ಶಶಿಕುಮಾರ್(38) ವಿರುದ್ಧ ವಿಜಯನಗರ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಶಿಕುಮಾರ್ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಅವರನ್ನು ಮದುವೆಯಾಗಿದ್ದರು. ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಪದೇ ಪದೇ ಜಗಳ ನಡೆಯುತ್ತಿತ್ತು. ಈ ಮಧ್ಯೆ ಆರೋಪಿ ಪತಿ “ನೀನು ನೋಡಲು ಸುಂದರವಾಗಿಲ್ಲ.
ನಾನು ಬೇರೆ ಮದುವೆ ಮಾಡಿಕೊಳ್ಳಬೇಕು’. ಮನೆಯಿಂದ ಹೊರ ಹೋಗುವಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಆಕೆ ಮೇಲೆ ಆéಸಿಡ್ ಹಾಕುವುದಾಗಿ ಬೆದರಿಸುತ್ತಿದ್ದ. ಕೊಲೆ ಮಾಡುವುದಾಗಿ ಕಬ್ಬಿಣದ ಸರಳುಗಳನ್ನು ಮನೆಯಲ್ಲಿ ತಂದಿಟ್ಟು ಹೆದರಿಸುತ್ತಿದ್ದ. ಹಲವು ಬಾರಿ ವಿಜಯಲಕ್ಷ್ಮೀ ಪೋಷಕರು ಅಳಿಯ ಶಶಿಕುಮಾರ್ಗೆ ಬುದ್ದಿ ಹೇಳಿ ಸಂಧಾನ ಮಾಡಿದರೂ ಪದೇ ಪದೇ ಪತ್ನಿ ಮೇಲೆ ಹಲ್ಲೆ ನಡೆಸುತ್ತಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದರು.
ಹೆಲ್ಮೆಟ್ನಲ್ಲಿ ಹಲ್ಲೆ
ಮಾ.6ರಂದು ಸಂಜೆ ವಿಜಯಲಕ್ಷ್ಮೀ ಮನೆಯಲ್ಲಿ ಕಸ ಗುಡಿಸುತ್ತಿದ್ದಾಗ ಶಶಿಕುಮಾರ್ ತನ್ನ ಹೆಲ್ಮೆಟ್ನಿಂದ ಆಕೆಯ ತಲೆ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದು, ತಲೆಯಿಂದ ರಕ್ತ ಸುರಿಯುತ್ತಿದ್ದರೂ ಲೆಕ್ಕಿಸದೇ ಮನೆಯಲ್ಲಿದ್ದ ಪೈಪ್ನಿಂದ ಮತ್ತೆ ಹಲ್ಲೆ ನಡೆಸಿ ಹೋಗಿದ್ದಾನೆ. ಬಳಿಕ ವಿಜಯಲಕ್ಷ್ಮೀ ಸ್ಥಳೀಯರ ಸಹಾಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆರೋಪಿ ಪತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ನಾಪತ್ತೆಯಾಗಿದ್ದಾನೆ. ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.