ರಣಜಿ: ಕೊನೆಯ ಅವಧಿಯಲ್ಲಿ ಕುಸಿದ ಸೌರಾಷ್ಟ್ರ
Team Udayavani, Mar 10, 2020, 7:20 AM IST
ರಾಜ್ಕೋಟ್: ಇದೇ ಮೊದಲ ಸಲ ತವರಿನ ಅಂಗಳದಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯ ಆಡಲಿಳಿದಿರುವ ಸೌರಾಷ್ಟ್ರಕ್ಕೆ ಬಂಗಾಲ ಕಡಿವಾಣ ಹಾಕಿದೆ. ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಉನಾದ್ಕತ್ ಬಳಗ 80.5 ಓವರ್ಗಳಲ್ಲಿ 5 ವಿಕೆಟಿಗೆ 206 ರನ್ ಗಳಿಸಿ ಮೊದಲ ದಿನದಾಟ ಮುಗಿಸಿದೆ.
ಪ್ರಮುಖ ಬ್ಯಾಟ್ಸ್ಮನ್, ಟೆಸ್ಟ್ ಸ್ಪೆಷಲಿಸ್ಟ್ ಖ್ಯಾತಿಯ ಚೇತೇಶ್ವರ್ ಪೂಜಾರ ಜ್ವರದಿಂದ ಕ್ರೀಸ್ ತೊರೆದದ್ದು ಸೌರಾಷ್ಟ್ರಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ. 6ನೇ ಕ್ರಮಾಂಕದಲ್ಲಿ ಬ್ಯಾಟ್ ಹಿಡಿದು ಬಂದ ಪೂಜಾರ 24 ಎಸೆತಗಳಿಂದ 5 ರನ್ ಮಾಡಿ ಡ್ರೆಸ್ಸಿಂಗ್ ರೂಮಿಗೆ ವಾಪಸಾದರು. ಗಂಟಲು ನೋವಿನಿಂದಾಗಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ದ್ವಿತೀಯ ದಿನ ಬ್ಯಾಟಿಂಗ್ ನಡೆಸುವ ನಿರೀಕ್ಷೆ ಇದೆ ಎಂದು ಸೌರಾಷ್ಟ್ರ ತಂಡದ ನಾಯಕ ಉನಾದ್ಕತ್ ಹೇಳಿದ್ದಾರೆ.
ಭರವಸೆಯ ಆರಂಭ
ಸೌರಾಷ್ಟ್ರದ ಅಗ್ರ ಕ್ರಮಾಂಕದ ಬ್ಯಾಟಿಂಗ್ ಉತ್ತಮ ಮಟ್ಟದಲ್ಲೇ ಇತ್ತು. ಒಂದು ಹಂತದಲ್ಲಿ ಎರಡೇ ವಿಕೆಟಿಗೆ 163 ರನ್ ಬಾರಿಸಿ ಮುನ್ನುಗ್ಗುತ್ತಿತ್ತು. ಆದರೆ ದಿನದ ಕೊನೆಯ 15 ಓವರ್ಗಳಲ್ಲಿ ಬಂಗಾಲ ಬೌಲರ್ಗಳು ಭರ್ಜರಿ ಮೇಲುಗೈ ಸಾಧಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು. 43 ರನ್ ಅಂತರದಲ್ಲಿ ಸೌರಾಷ್ಟ್ರದ ಕೊನೆಯ 3 ವಿಕೆಟ್ ಉರುಳಿದೆ.
ಮಧ್ಯಮ ವೇಗಿ ಆಕಾಶ್ ದೀಪ್ 41ಕ್ಕೆ 3 ವಿಕೆಟ್ ಹಾರಿಸಿ ಹೆಚ್ಚಿನ ಯಶಸ್ಸು ಸಾಧಿಸಿದರು. ಇಶಾನ್ ಪೊರೆಲ್ ಮತ್ತು ಎಡಗೈ ಸ್ಪಿನ್ನರ್ ಶಾಬಾಜ್ ನದೀಂ ಒಂದೊಂದು ವಿಕೆಟ್ ಉರುಳಿಸಿದರು. 81ನೇ ಓವರಿನಲ್ಲಿ ಚೇತನ್ ಸಕಾರಿಯಾ (4) ವಿಕೆಟ್ ಬಿದ್ದೊಡನೆ ದಿನದಾಟವನ್ನು ಕೊನೆಗೊಳಿಸಲಾಯಿತು.
ಶೆಲ್ಡನ್ ಜಾಕ್ಸನ್ ವಿಫಲ
ಸೌರಾಷ್ಟ್ರ ಆರಂಭಿಕರಾದ ಹಾರ್ವಿಕ್ ದೇಸಾಯಿ (38) ಮತ್ತು ಅವಿ ಬರೋಟ್ (54) 37.5 ಓವರ್ ನಿಭಾಯಿಸಿ 82 ರನ್ ಒಟ್ಟುಗೂಡಿಸಿ ಉತ್ತಮ ಅಡಿಪಾಯ ನಿರ್ಮಿಸಿದರು. ಬಳಿಕ ವಿಶ್ವರಾಜ್ ಜಡೇಜ (54) ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಆದರೆ ಸೆಮಿಫೈನಲ್ನಲ್ಲಿ ಶತಕ ಬಾರಿಸಿ ಮಿಂಚಿದ ಶೆಲ್ಡನ್ ಜಾಕ್ಸನ್ (14) ಅವರನ್ನು ಪೊರೆಲ್ ಬೇಗನೇ ಔಟ್ ಮಾಡಿ ಬಂಗಾಲಕ್ಕೆ ಮೇಲುಗೈ ಒದಗಿಸಿದರು.
94 ಎಸೆತಗಳಿಂದ 29 ರನ್ ಮಾಡಿರುವ ಅರ್ಪಿತ್ ವಸವಾಡ ಕ್ರೀಸ್ನಲ್ಲಿದ್ದಾರೆ.
ಸಂಕ್ಷಿಪ್ತ ಸ್ಕೋರ್: ಸೌರಾಷ್ಟ್ರ-5 ವಿಕೆಟಿಗೆ 206 (ಬರೋಟ್ 54, ವಿ. ಜಡೇಜ 54, ಹಾರ್ವಿಕ್ 38, ವಸವಾಡ ಬ್ಯಾಟಿಂಗ್ 29, ಜಾಕ್ಸನ್ 14, ಆಕಾಶ್ ದೀಪ್ 41ಕ್ಕೆ 3).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.