![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
Team Udayavani, Mar 10, 2020, 9:44 AM IST
ಭೋಪಾಲ್: ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆಗಳು ನಡೆಯುತ್ತಿದೆ. ಆಡಳಿತಾರೂಢ ಕಾಂಗ್ರೆಸ್ ಸರಕಾರದ 18 ಶಾಸಕರು ಬೆಂಗಳೂರಿನ ಹೋಟೇಲ್ ನಲ್ಲಿ ತಂಗಿದ್ದಾರೆ. ಸೋಮವಾರ ತಡರಾತ್ರಿಯ ಬೆಳವಣಿಗೆಯಲ್ಲಿ ಕಮಲ್ ನಾಥ್ ಸಂಪುಟದ 16 ಮಂದಿ ಸಚಿವರು ರಾಜೀನಾಮೆ ನೀಡಿ ಸರಕಾರ ಉಳಿಸುವ ಪ್ರಯತ್ನ ಮಾಡಿದ್ದಾರೆ.
ಸದ್ಯ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರ ಮುಂದಾಳತ್ವ ವಹಿಸಿರುವ ಯುವ ನಾಯಕತ್ವ ವಹಿಸಿರುವ ಜ್ಯೋತಿರಾಧಿತ್ಯ ಸಿಂಧ್ಯಾ ಹಂದಿಜ್ವರದಿಂದ ಬಳಲುತ್ತಿದ್ದಾರಂತೆ. ಹೀಗೆಂದವರು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್.
ಕಳೆದ ರಾತ್ರಿ ಸರಕಾರ ಉಳಿಸಲು 16 ಸಚಿವರು ರಾಜೀನಾಮೆ ನೀಡಿದ ನಂತರ ದಿಗ್ವಿಜಯ್ ಸಿಂಗ್ ಈ ಮಾತುಗಳನ್ನಾಡಿದ್ದಾರೆ. ನಾವು ಜ್ಯೋತಿರಾಧಿತ್ಯ ಸಿಂಧ್ಯಾ ಅವರನ್ನು ಸಂಪರ್ಕಿಸಲು ಪ್ರಯತ್ನ ಪಡುತ್ತಿದ್ದೇವೆ. ಆದರೆ ಅವರಿಗೆ ಹಂದಿ ಜ್ವರವಂತೆ. ಹಾಗಾಗಿ ಅವರ ಜೊತೆ ಮಾತನಾಡಲು ಸಾಧ್ಯವಾಗಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಯಾರೆಲ್ಲಾ ಮತದಾರರ ನಿರ್ಣಯಕ್ಕೆ ಅವಮಾನ ಮಾಡುತ್ತಾರೋ ಅವರಿಗೆ ರಾಜ್ಯದ ಜನರೇ ಬುದ್ದಿ ಕಲಿಸುತ್ತಾರೆ ಎಂದು ಸಿಂಗ್ ಹೇಳಿದ್ಧಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.