ಸಹಾಯವಾಣಿಗೆ ಜನರಿಂದ ಕರೆ
Team Udayavani, Mar 11, 2020, 6:35 AM IST
ಉಡುಪಿ: ಜಿಲ್ಲೆಯಲ್ಲಿ 15 ದಿನಗಳಿಂದ ಆರೋಗ್ಯ ಸಹಾಯವಾಣಿ 104 ಸಂಖ್ಯೆಗೆ ನಿತ್ಯ 5ರಿಂದ 6 ಕರೆಗಳು ಕೊರೊನಾ ವೈರಸ್ ಸಂಬಂಧಿಸಿದಂತೆ ಬರುತ್ತಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ಜಿಲ್ಲಾ ವರ್ತಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕೊರೊನಾ ರಕ್ಷಣೆಗಾಗಿ ಮಾಸ್ಕ್ ಧರಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿವೆ. ಕೊರೊನಾ ವೈರಸ್ ಭೀತಿಯ ನಡುವೆಯೂ ಮರಾಠಿ ಸಮುದಾಯ, ಮಣಿಪಾಲ ವಿದ್ಯಾರ್ಥಿಗಳು, ಸಾರ್ವಜನಿಕರು ವಿವಿಧ ಕಡೆಗಳಲ್ಲಿ ಬಣ್ಣ ಹಂಚಿಕೊಂಡು ಹೋಳಿ ಆಚರಿಸಿದರು. ಕೊರೊನಾ ಭೀತಿಯಿಂದ ಅದ್ದೂರಿ ಆಚರಣೆಗೆ ಕೆಲವೆಡೆ ಪೊಲೀಸರು ಅವಕಾಶ ನೀಡಲಿಲ್ಲ.
ಯಕ್ಷಗಾನದ ಮೂಲಕ ಜಾಗೃತಿ
ಕಾರ್ಕಳದ ಪಳ್ಳಿ ಗ್ರಾಮದಲ್ಲಿ ನಡೆದ ತುಳು ಯಕ್ಷಗಾನದಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲಾಯಿತು. ಸಸಿಹಿತ್ಲು ಮೇಳದ ಯಕ್ಷಗಾನದಲ್ಲಿ ಹಾಸ್ಯ ಪಾತ್ರಧಾರಿ ಪ್ರಸನ್ನ ಶೆಟ್ಟಿ ಬೈಲೂರು ಅವರು ಕೊರೊನಾ ಬಗ್ಗೆ ಚರ್ಚೆ ನಡೆಸಿ ಗಮನ ಸೆಳೆದರು. ಯಕ್ಷಗಾನದಲ್ಲಿ ಆಂಗ್ಲ ಭಾಷೆ ಬಳಕೆಗೆ ಅವಕಾಶ ಇಲ್ಲದ ಕಾರಣ “ಕೊರಂಬು ಬೈರಸ್’ ಎಂದು ಹೇಳುವ ಮೂಲಕ ಪ್ರೇಕ್ಷಕರನ್ನು ನಗಿಸುವ ಜತೆಗೆ ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು
Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…
Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ
Udupi: ಬ್ರಹ್ಮಗಿರಿಯಲ್ಲಿರುವ ಪ್ರವಾಸಿ ಮಂದಿರಕ್ಕೆ ಕತ್ತಲ ಭಾಗ್ಯ!
Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tirupati Laddu ವಿವಾದ: ತಿರುಪತಿ ದೇಗುಲದಲ್ಲಿ ಮಹಾ ಶಾಂತಿ ಹೋಮ, ಶುದ್ದೀಕರಣ…
Hubli: ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ: ಶಾಸಕ ಟೆಂಗಿನಕಾಯಿ
Terrace garden: ಗೃಹಿಣಿಯ ಮಾನಸಿಕ ಖಿನ್ನತೆಗೆ ಔಷಧಿಯಾದ ತಾರಸಿ ಕೈತೋಟ
Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ
ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.