60 ವಾರ್ಡ್‌ಗಳಲ್ಲಿ 65 ಸಾವಿರ ಎಲ್‌ಇಡಿ ಬೀದಿದೀಪ

62.5 ಕೋಟಿ ರೂ. ವೆಚ್ಚದಲ್ಲಿ ನಗರಕ್ಕೆ ಬೆಳಕು

Team Udayavani, Mar 12, 2020, 4:18 AM IST

LED-Street-light

ಮಹಾನಗರ: ನಗರದ 60 ವಾರ್ಡ್‌ಗಳಲ್ಲಿ 65 ಸಾವಿರ ಎಲ್‌ಇಡಿ ಬೀದಿದೀಪಗಳ ಅಳವಡಿಕೆಗೆ ಸ್ಮಾರ್ಟ್‌ಸಿಟಿ ಯೋಜನೆಯಡಿಯಲ್ಲಿ ತಯಾರಿ ನಡೆಸಲಾಗುತ್ತಿದೆ. ಸರಕಾರಿ-ಖಾಸಗಿ ಸಹಭಾಗಿತ್ವದಡಿಯಲ್ಲಿ 62.5 ಕೋಟಿ ರೂ. ವೆಚ್ಚದಲ್ಲಿ ಮುಂದಿನ ಆರು ತಿಂಗಳೊಳಗೆ ಈ ಯೋಜನೆ ಪೂರ್ಣಗೊಳ್ಳಲಿದೆ.

ಸ್ಮಾರ್ಟ್‌ಸಿಟಿ ಯೋಜನೆಯಡಿಯಲ್ಲಿ ಹಂತಹಂತವಾಗಿ ನಗರದಲ್ಲಿ ಹೊಸ ಕಾಮಗಾರಿಗಳು ನಡೆಯುತ್ತಿವೆ.
ಉತ್ತಮ ರಸ್ತೆಯೊಂದಿಗೆ ರಾತ್ರಿ ಹೊತ್ತಿ ನಲ್ಲಿ ರಸ್ತೆಯಲ್ಲಿ ಸಂಚರಿಸಲು ಪ್ರಖರವಾದ ಬೆಳಕೂ ಅಗತ್ಯ. ಅದಕ್ಕಾಗಿಯೇ ರಾತ್ರಿ ಸಂಚಾರವನ್ನು ಇನ್ನಷ್ಟು ಸುಗಮಗೊಳಿಸಲು ಸ್ಮಾರ್ಟ್‌ ಸಿಟಿಯಡಿ ಯೋಜನೆ ರೂಪಿಸಲಾಗಿದೆ.

ನಗರದಲ್ಲಿ ರಾತ್ರಿ ಸಂಚಾರಕ್ಕೆ ಹೆಚ್ಚು ಪ್ರಕಾಶಮಾನವಾದ ಬೆಳಕು ಸಿಗುವ ಮತ್ತು ವಿದ್ಯುತ್‌ ಉಳಿತಾಯದ ಉದ್ದೇಶದಿಂದ ಎಲ್ಲ 60 ವಾರ್ಡ್‌ಗಳಲ್ಲಿಯೂ ಎಲ್‌ಇಡಿ ಬಲ್ಬ್ಗಳ ಅಳವಡಿಕೆಗೆ ಸ್ಮಾರ್ಟ್‌ ಸಿಟಿ ಪ್ರಮುಖರು ಮುಂದಾಗಿದ್ದಾರೆ. ಈಗಾಗಲೇ ಇದರ ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, ಸ್ಮಾರ್ಟ್‌ಸಿಟಿ ಮಂಡಳಿಗೆ ಕಳುಹಿಸಿಕೊಡಲಾಗಿದೆ. ಕೆಲಸ ಆರಂಭಕ್ಕೆ ಮಂಡಳಿಯಿಂದ ವರ್ಕ್‌ ಆರ್ಡರ್‌ ಸಿಕ್ಕಿದ ಅನಂತರ ಕಾಮಗಾರಿ ಆರಂಭವಾಗಲಿದೆ. ಒಟ್ಟು ಪ್ರಕ್ರಿಯೆಗೆ ಆರು ತಿಂಗಳು ಬೇಕಾಗಬಹುದು ಎಂದು ಸ್ಮಾರ್ಟ್‌ಸಿಟಿ ಅಧಿಕಾರಿಗಳು ತಿಳಿಸಿದ್ದಾರೆ.

5 ಸಾವಿರ ಎಲ್‌ಇಡಿ ಬಲ್ಬ್ ಅಳವಡಿಕೆ
65 ಸಾವಿರ ಎಲ್‌ಇಡಿ ಬಲ್ಬ್ಗಳ ಪೈಕಿ 5 ಸಾವಿರ ಬಲ್ಬ್ಗಳನ್ನು ಈ ಹಿಂದೆಯೇ ಅಳವಡಿಸಲಾಗಿದ್ದು, ಪ್ರಸ್ತುತ 60 ವಾರ್ಡ್‌ನ ಅಲ್ಲಲ್ಲಿ ಈ ಬಲ್ಬ್ಗಳು ಬೆಳಗುತ್ತಿವೆ. ಈ 5 ಸಾವಿರ ಬಲ್ಬ್ಗಳನ್ನು ಹೊರತುಪಡಿಸಿ ಉಳಿದ ಈಗಿರುವ ಹಳೆಯ ಬಲ್ಬ್ಗಳನ್ನು ಸಂಪೂರ್ಣ ತೆಗೆದು ಹೊಸ ಎಲ್‌ಇಡಿ ಬಲ್ಬ್ಗಳನ್ನು ಹಾಕಲಾಗುತ್ತದೆ. ಹೊಸ ಬಲ್ಬ್ಗಳು ಶೇ. 50ರಷ್ಟು ಕಡಿಮೆ ವ್ಯಾಟ್‌ ಸಾಮರ್ಥ್ಯ ಹೊಂದಿದ್ದು, ಹಳೆಯ ಬಲ್ಬ್ಗಳಿಗಿಂತ ಹೆಚ್ಚು ಪ್ರಕಾಶಮಾನವಾಗಿ ಬೆಳಕು ನೀಡಲಿವೆ.

ಶೇ. 50ರಷ್ಟು ವಿದ್ಯುತ್‌ ಉಳಿತಾಯ
ಎಲ್‌ಇಡಿ ಬಲ್ಬ್ಗಳನ್ನು ಬೀದಿದೀಪಗಳಾಗಿ ಅಳವಡಿಕೆ ಮಾಡುವುದರಿಂದ ಸಾಮಾನ್ಯವಾಗಿ ಶೇ. 50ರಷ್ಟು ವಿದ್ಯುತ್‌ ಉಳಿತಾಯ ವಾಗುತ್ತದೆ. ಆದರೆ ನಗರದ ಹವಾಗುಣ ಸ್ವಲ್ಪ ಮಟ್ಟಿನ ವ್ಯತಿರಿಕ್ತತೆ ಹೊಂದಿರುವುದರಿಂದ ಸ್ವಲ್ಪ ಕಡಿಮೆ ವಿದ್ಯುತ್‌ ಉಳಿತಾಯ ಆಗಬಹುದು ಎನ್ನುತ್ತಾರೆ ಅಧಿಕಾರಿಗಳು. ವಿದ್ಯುತ್‌ ಉಳಿತಾಯ ಮತ್ತು ರಾತ್ರಿ ಹೊತ್ತಿನಲ್ಲಿ ಸಂಚಾರಕ್ಕೆ ಅನುಕೂಲವಾಗುವಂತೆ ಹೆಚ್ಚಿನ ಬೆಳಕು ನೀಡುವುದು ಎಲ್‌ಇಡಿ ಅಳವಡಿಕೆಯ ಉದ್ದೇಶವಾಗಿದೆ.

6 ತಿಂಗಳಲ್ಲಿ ಪೂರ್ಣ
ಸ್ಮಾರ್ಟ್‌ಸಿಟಿಯಡಿಯಲ್ಲಿ 60 ಸಾವಿರ ಎಲ್‌ಇಡಿ ಬಲ್ಬ್
ಗಳನ್ನು ಪಾಲಿಕೆಯ 60 ವಾರ್ಡ್‌ಗಳಲ್ಲಿ ಅಳವಡಿಸಲಾಗುತ್ತಿದೆ. ಈ ಕೆಲಸವು ಸರಕಾರಿ ಖಾಸಗಿ ಸಹಭಾಗಿತ್ವದಲ್ಲಿ ನಡೆಯಲಿದೆ. ಎಲ್‌ಇಡಿ ಬಲ್ಬ್ ಅಳವಡಿಕೆ ಸಂಬಂಧ ಈಗಾಗಲೇ ಟೆಂಡರ್‌ ಆಗಿದ್ದು, ಮಂಡಳಿಗೆ ಕಳುಹಿಸಿಕೊಡಲಾಗಿದೆ. ಕೆಲವೇ ಸಮಯದ ವರ್ಕ್‌ ಆರ್ಡರ್‌ ದೊರಕಲಿದೆ. ಮುಂದಿನ ಆರು ತಿಂಗಳಲ್ಲಿ ಈ ಕೆಲಸ ಪೂರ್ಣಗೊಳ್ಳಲಿದೆ.
– ಮೊಹಮ್ಮದ್‌ ನಝೀರ್‌, ಸ್ಮಾರ್ಟ್‌ಸಿಟಿ ನಿರ್ದೇಶಕರು

-  ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.