ವಿಮಾನಗಳ ಹಾರಾಟಕ್ಕೂ ಕೊರೊನಾ ಬ್ರೇಕ್‌


Team Udayavani, Mar 13, 2020, 1:08 PM IST

ವಿಮಾನಗಳ ಹಾರಾಟಕ್ಕೂ ಕೊರೊನಾ ಬ್ರೇಕ್‌

ದೇವನಹಳ್ಳಿ: ಪ್ರಪಂಚವನ್ನೇ ಬೆಚ್ಚಿ ಬೀಳಿಸಿರುವ ಮಾರಕ ಕೊರೊನಾ ವೈರಸ್‌ ನಿಂದಾಗಿ ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಇಳಿ ಮುಖವಾಗಿದೆ.

ಕೊರೊನಾ ವೈರಸ್‌ ವಿಮಾನಯಾನದ ಮೇಲೂ ಪರಿಣಾಮ ಬೀರಿದ್ದು ಸದಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಸಿ ತಟ್ಟಿದೆ. ಲಕ್ಷಾಂತರ ಜನರು ಪ್ರಯಾಣ ಬೆಳೆಸುವ ಕೆಐಎಎಲ್‌ನಲ್ಲಿ ಬರುವ-ಹೋಗುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗಿದೆ.

ಕೆಐಎಎಲ್‌ನಿಂದ ಪ್ರಯಾಣಿಕರು ದೂರದ ಕಡೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕೆ ಕಾರಣವಾಗಿರುವ ಕೊರೊನಾ ವೈರಸ್‌ ನಿಂದಾಗಿ ವಿದೇಶಗಳಿಗೆ ಪ್ರವಾಸ ಕೈಗೊಳ್ಳುವ ಗೋಜಿಗೆ ಜನ ಹೋಗುತ್ತಿಲ್ಲ. ಒಂದು ದಿನಕ್ಕೆ ಸಾವಿರಾರು ಪ್ರಯಾಣಿಕರು ಬೆಂಗಳೂರು ನಗರಕ್ಕೆ ಆಗಮಿಸುವ ಪ್ರಯಾಣಿಕರ ಸಂಖ್ಯೆ ಇಳಿ ಮುಖವಾಗಿದ್ದು ಟ್ಯಾಕ್ಸಿ ಗಳಿಗೆ ಬಾರಿ ಹೊಡೆತ ಬಿದ್ದಿದೆ.

ಕೆಐಎಎಲ್‌ ವಿಮಾನ ನಿಲ್ದಾಣದಲ್ಲಿ ಪ್ರವಾಸೋದ್ಯಮ ಇಲಾಖೆ ಸೇರಿದಂತೆ ಇನ್ನಿತರೆ ಟ್ಯಾಕ್ಸಿ ಗಳು 12 ಸಾವಿರ ವಿದೆ. ಆದರೆ, ಕೆಲ ದಿನಗಳಿಗೆ 02 ಸಾವಿರ ಟ್ಯಾಕ್ಸಿ ಗಳಿಗೆ ಮಾತ್ರ ಪ್ರಯಾಣಿಕರು ಸಿಗುತ್ತಿದ್ದಾರೆ. ಒಂದು ದಿನಕ್ಕೆ ಒಂದು ಟ್ಯಾಕ್ಸಿ 03 ಟ್ರಿಪ್‌ ಕರೆದುಕೊಂಡು ಹೋಗುವುದೇ ಹೆಚ್ಚಾಗಿದೆ. ಕೆಐಎಎಲ್‌ ನಲ್ಲಿ ಓಡಾಡುವ ವಾಯು ವಜ್ರ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಸ್ವಲ್ಪ ಕಡಿಮೆ ಆಗಿದ್ದು ಕೊರೊನಾ ವೈರಸ್‌ ಭೀತಿ ಕಾಡುತ್ತಿದೆ.

 ಪ್ರಯಾಣದ ಮೇಲೆ ಶೇ.2-4 ಪರಿಣಾಮ :  ಜಾಗತಿಕವಾಗಿ ಇತರೆ ವಿಮಾನ ನಿಲ್ದಾಣಗಳಂತೆ ಕೆಐಎಎಲ್‌ ವಿಮಾನ ನಿಲ್ದಾಣದ ಮೇಲೆ ಕೊರೊನಾ ವೈರಸ್‌ ಪರಿಣಾಮ ಬೀರಿದೆ. ಫೆ.20ರಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಟ್ಟಣೆ ಸಾಮಾನ್ಯ ಮಟ್ಟದಿಂದ ಶೇ.20 (ಅಂದರೆ ಕೋವಿಡ್‌ 19) ಪತ್ತೆ ಆಗುವ ಮೊದಲು ಮತ್ತು ಮಾರ್ಚ್‌ ನಲ್ಲಿ ಸಾಮಾನ್ಯ ಮಟ್ಟದಿಂದ ಶೇ.50 ಕಡಿಮೆ ಆಗಿದೆ. ಕೆಐಎಎಲ್‌ ವಿಮಾನ ನಿಲ್ದಾಣ ಸಾಮಾನ್ಯವಾಗಿ 14-15 ಸಾವಿರ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಹೊಂದಿದ್ದರೆ, ನಾವು ಸುಮಾರು 6-7 ಸಾವಿರ ದೈನಂದಿನ ಅಂತಾ ರಾಷ್ಟ್ರೀಯ ಪ್ರಯಾಣಿಕರನ್ನುನೋಡುತ್ತಿದ್ದೆವು. ಇದಲ್ಲದೆ ದೇಶಿಯ ವಿಮಾನ ಪ್ರಯಾಣಿಕರ ದಟ್ಟಣೆಯಲ್ಲಿ ಯಾವುದೇ ದೊಡ್ಡ ಪ್ರಮಾಣದ ಕುಸಿತ ಕಂಡಿಲ್ಲ. ದೇಶೀಯ ಪ್ರಯಾಣದ ಮೇಲೆ ಈಗಾಗಲೇ ಶೇ.2-4 ಪರಿಣಾಮಗಳು ಬೀರಿವೆ. ಭಾರತದಲ್ಲಿ ಹೆಚ್ಚಿನ ಪ್ರಕರಣ ದಾಖಲಾಗದರೆ ಮತ್ತಷ್ಟು ಇಳಿಕೆ ಕಾಣುವ ಸಾಧ್ಯತೆ ಇದೆ ಎಂದು ವಿಮಾನ ನಿಲ್ದಾಣ ಆಡಳಿತ ಮಂಡಳಿ ಮೂಲಗಳು ತಿಳಿಸಿವೆ.

ಏರ್‌ ಪೋರ್ಟ್ ಟ್ಯಾಕ್ಸಿ ದಿನಕ್ಕೆ 2 ಸಾವಿರ ವಾಹನ ಓಡಾಡುತ್ತಿದ್ದವು. ಆದರೆ, ಕೊರೊನಾ ವೈರಸ್‌ ಪರಿಣಾಮ 900 ಟ್ಯಾಕ್ಸಿಗಳಿಗೆ ಇಳಿಮುಖವಾಗಿದೆ. ದೇಶದ ವಿವಿಧ ಭಾಗಗಳಿಂದ ಬರುವ ವಿಮಾನ ಪ್ರಯಾಣಿಕರು ಕಡಿಮೆ ಆಗಿದ್ದು ಟ್ಯಾಕ್ಸಿ ಚಾಲಕರು ಜೀವನ ಸಾಗಿಸಲು ಕಷ್ಟಕರವಾಗಿದೆ.  ಕೃಷ್ಣ, ಟ್ಯಾಕ್ಸಿ ಚಾಲಕ

 

ಎಸ್‌.ಮಹೇಶ್‌

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.