ರಂಗ ಚಳವಳಿ ಶಾಶ್ವತವಾಗಿರಬೇಕು


Team Udayavani, Mar 13, 2020, 4:04 PM IST

ರಂಗ ಚಳವಳಿ ಶಾಶ್ವತವಾಗಿರಬೇಕು

ಮೈಸೂರು: ಸರ್ಕಾರದ ಸಹಾಯ ಬೇಡದೆ, ಜನರ ಬೆಂಬಲ ಪಡೆದು ನಾಟಕಗಳನ್ನು ರೂಪಿಸಬೇಕು ಎಂದು ಚಲನಚಿತ್ರ ನಿರ್ದೇಶಕ ಬಿ. ಸುರೇಶ್‌ ಹೇಳಿದರು.

ಅಭಿಯಂತರರು ರಂಗ ತಂಡದ ವತಿಯಿಂದ ಕಲಾಮಂದಿರದ ಕಿರು ರಂಗ ಮಂದಿರ ವೇದಿಕೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರಂಗ ಉತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನರ ಬೆಂಬಲ ಮುಖ್ಯ: ರಂಗ ಚಳವಳಿಗಳು ಶಾಶ್ವತವಾಗಿ ಉಳಿಯಬೇಕಾದರೆ ಅವು, ಜನರ ಬೆಂಬಲದಿಂದ ರೂಪುಗೊಳ್ಳಬೇಕು. ಸರ್ಕಾರ ದಿಂದ ಹಣ ಮತ್ತು ಬೆಂಬಲ ಪಡೆದರೆ ಆಳುವವರನ್ನು ಪ್ರಶ್ನಿಸಲು ಸಾಧ್ಯವಿರುವುದಿಲ್ಲ ಎಂದರು.

ಟಿ.ವಿ.ವೀಕ್ಷಣೆಯಿಂದ ದೂರವಿರಬೇಕು: ಸುಳ್ಳನ್ನೇ ಸತ್ಯವನ್ನಾಗಿ ಬಿಂಬಿಸುವ ಕಾಲದಲ್ಲಿ ನಾವಿದ್ದೇವೆ. ಇಂತಹ ಸಂದರ್ಭದಲ್ಲಿ ನಾಟಕವನ್ನು ಪ್ರತಿಭಟನೆಯ ಅಸ್ತ್ರವಾಗಿ ಬಳಸುವ ತುರ್ತು ಅಗತ್ಯವಿದೆ. ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಜಾಲತಾಣಗಳು ಸುಳ್ಳನ್ನೇ ಸತ್ಯ ಎಂದು ಬಿಂಬಿಸಲು ಹೊರಟಿವೆ. ನಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕಾದರೆ ನಾವು ಟಿ.ವಿ.ವೀಕ್ಷಣೆಯಿಂದ ದೂರವಿರಬೇಕು ಎಂದು ಹೇಳಿದರು.

ಬಹುದೊಡ್ಡ ಜವಾಬ್ದಾರಿ ಇದೆ: ಇಂದು ರಂಗಭೂಮಿ ಕಟ್ಟಿ ಬೆಳೆಸುವವರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ರಂಗಭೂಮಿ ಮೂಲಕ ಜನರಿಗೆ ಸತ್ಯ ಯಾವುದು, ಸುಳ್ಳು ಯಾವುದು ಎಂಬ ಬಗ್ಗೆ ಮನವರಿಕೆ ಮಾಡಿ ಕೊಡುವ ಮೂಲಕ ಸಮಾಜವನ್ನು ಸದಾಶ ಯದತ್ತ ಕೊಂಡೊಯ್ಯಬೇಕಿದೆ ಎಂದರು. ಲೇವಡಿ: ಟಿ.ವಿ. ಮಾಧ್ಯಮ ಸುಳ್ಳು ಹೇಳುವುದರಲ್ಲಿ ನಿರತವಾಗಿದ್ದರೆ, ಕೆಲವು ಪತ್ರಿಕೆಗಳು ಆಳುವ ಸರ್ಕಾರದ ಮುಖ ವಾಣಿಯಾಗಿ ಕಾರ್ಯನಿರ್ವಹಿಸುತ್ತಿವೆ. ಜೊತೆಗೆ ಧಾರವಾಹಿಗಳು ಸರಕು ಮಾರಾಟ ಮಾಡುವ ವೇದಿಕೆಯಾಗಿವೆ ಎಂದು ಲೇವಡಿ ಮಾಡಿದರು.

ಯಾವುದು ಸತ್ಯ, ಸುಳ್ಳು ತಿಳಿಯಬೇಕು: ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಮಾತನಾಡಿ, ಎಲ್ಲಾ ಪತ್ರಿಕೆಗಳು ಹಾಗೂ ಮೀಡಿಯಾಗಳು ಕೇಂದ್ರ ಸರ್ಕಾರದ ಪರವಾಗಿವೆ ಎಂಬುದು ಸುಳ್ಳು. ತುಂಬಾ ಪತ್ರಿಕೆಗಳು ಮತ್ತು ಟಿ.ವಿ.ಗಳು ಕೇಂದ್ರ ಸರ್ಕಾರದ ವಿರುದ್ಧ ಸುಳ್ಳನ್ನು ಹೇಳುತ್ತಿವೆ. ನಾವು ಮಾತನಾಡುವ ಸತ್ಯ ಯಾವುದು, ಸುಳ್ಳು ಯಾವುದು ಎಂಬುದನ್ನು ತಿಳಿಯ ಬೇಕಾಗಿದೆ. ಇಂದು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯನ್ನು ಕೀಳಾಗಿ ತೇಜೋವಧೆ ಮಾಡಲಾಗುತ್ತಿದೆ. ಪತ್ರಿಕೆಗಳಲ್ಲಿತೇಜೋವಧೆಯಾದರೆ ಮಾನನಷ್ಟ ಮೊಕದ್ದಮೆ ದಾಖಲಿಸ ಬಹುದು. ಸಾಮಾಜಿಕ ಜಾಲತಾಣದಲ್ಲಿ ಯಾರನ್ನು ಹೊಣೆಗಾರರನ್ನಾಗಿ ಮಾಡುವುದು ಎಂದರು. ರಂಗಭೂಮಿ ಮನುಷ್ಯರನ್ನು ಬೆಸೆಯುವ ಕೆಲಸ ಮಾಡಬೇಕು. ಜನತೆಗೆ ಸರಿ, ತಪ್ಪು ಯಾವುದು ಎಂಬುದನ್ನು ತೋರಿಸಿಕೊಡುವ ಅಗತ್ಯವಿದೆ ಎಂದು ಹೇಳಿದರು.

ನಂತರ ಶಿವಮೊಗ್ಗದ ಹೊಂಗಿರಣ ತಂಡದಿಂದ ಹೂವು ನಾಟಕ ಪ್ರದರ್ಶನ ನಡೆಯಿತು. ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಸದಸ್ಯ ತೋ. ನಂಜುಂಡಸ್ವಾಮಿ, ಅಭಿಯಂತರರು ರಂಗ ತಂಡದ ಸುರೇಶ್‌ ಬಾಬು ಇತರರು ಇದ್ದರು.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.