![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 14, 2020, 5:38 AM IST
ರಾಜ್ಕೋಟ್: ನಾಲ್ಕನೇ ಫೈನಲ್ ಪ್ರಯತ್ನದಲ್ಲಿ ಸೌರಾಷ್ಟ್ರ ತಂಡ ರಣಜಿ ಟ್ರೋಫಿ ಕ್ರಿಕೆಟ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ತವರಿನ ರಾಜ್ಕೋಟ್ ಅಂಗಳದಲ್ಲಿ ಬಂಗಾಲ ವಿರುದ್ಧ ಪ್ರಥಮ ಇನ್ನಿಂಗ್ಸ್ ಮುನ್ನಡೆಯ ಆಧಾರದಲ್ಲಿ ಮೊದಲ ಬಾರಿಗೆ ರಣಜಿ ಕಿರೀಟ ಧರಿಸಿ ಇತಿಹಾಸ ನಿರ್ಮಿಸಿತು.
ಸೌರಾಷ್ಟ್ರದ 425 ರನ್ನುಗಳ ಮೊದಲ ಇನ್ನಿಂಗ್ಸ್ಗೆ ಉತ್ತರವಾಗಿ ಬಂಗಾಲ 381ಕ್ಕೆ ತನ್ನ ಹೋರಾಟವನ್ನು ಮುಗಿಸಿತು. ಪಂದ್ಯಕ್ಕೆ ಡ್ರಾ ಮುದ್ರೆ ಬೀಳುವಾಗ ಸೌರಾಷ್ಟ್ರ ದ್ವಿತೀಯ ಸರದಿಯಲ್ಲಿ 4 ವಿಕೆಟಿಗೆ 105 ರನ್ ಗಳಿಸಿತ್ತು.
ಅನುಸ್ತೂಪ್ ಮಜುಮಾªರ್ (63) ಮತ್ತು ಅರ್ನಾಬ್ ನಂದಿ (ಅಜೇಯ 40) ಸೇರಿಕೊಂಡು ಬಂಗಾಲದ ಹೋರಾಟವನ್ನು ಜಾರಿಯಲ್ಲಿರಿಸಿದ್ದರು. ಗುರುವಾರ ಇವರಿಬ್ಬರ ನಡುವೆ 91 ರನ್ ಜತೆಯಾಟ ನಡೆದಿತ್ತು. 4ನೇ ದಿನದಾಟದ ಅಂತ್ಯಕ್ಕೆ 6 ವಿಕೆಟಿಗೆ 354 ರನ್ ಗಳಿಸಿದ್ದ ಬಂಗಾಲ ಮುನ್ನಡೆಯ ಸಾಧ್ಯತೆಯನ್ನು ತೆರೆದಿರಿಸಿತ್ತು. ಆದರೆ ಶುಕ್ರವಾರ ಬಂಗಾಲದ ಆಟ ನಡೆಯಲಿಲ್ಲ. 27 ರನ್ ಸೇರಿಸುವಷ್ಟರಲ್ಲಿ ಅದು ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು; 44 ರನ್ ಹಿನ್ನಡೆಗೆ ಸಿಲುಕಿತು.
ಸ್ಕೋರ್ 361ಕ್ಕೆ ತಲುಪಿದ ವೇಳೆ ಮಜುಮಾªರ್ ವಿಕೆಟ್ ಕಿತ್ತ ನಾಯಕ ಉನಾದ್ಕತ್ ಸೌರಾಷ್ಟ್ರವನ್ನು ಹಳಿಗೆ ತಂದರು. ಉನಾದ್ಕತ್ ಸಾಧನೆ 96ಕ್ಕೆ 2. ಪ್ರಸಕ್ತ ರಣಜಿ ಋತುವಿನಲ್ಲಿ ಅವರು 13.23 ಸರಾಸರಿಯಲ್ಲಿ 67 ವಿಕೆಟ್ ಉರುಳಿಸಿ ಅಗ್ರಸ್ಥಾನ ಅಲಂಕರಿಸಿದರು. ರಣಜಿ ಸಾರ್ವಕಾಲಿಕ ದಾಖಲೆಯಿಂದ ಒಂದೇ ವಿಕೆಟ್ ದೂರ ಉಳಿದರು.ಸೌರಾಷ್ಟ್ರ ಕಳೆದ ವರ್ಷದ ಫೈನಲ್ನಲ್ಲಿ ವಿದರ್ಭಕ್ಕೆ ಶರಣಾಗಿತ್ತು. ಇದಕ್ಕೂ ಹಿಂದೆ 2 ಸಲ ಮುಂಬಯಿ ವಿರುದ್ಧ ಎಡವಿತ್ತು.
ಸಂಕ್ಷಿಪ್ತ ಸ್ಕೋರ್: ಸೌರಾಷ್ಟ್ರ-425 ಮತ್ತು 4 ವಿಕೆಟಿಗೆ 105. ಬಂಗಾಲ-381. ಪಂದ್ಯಶ್ರೇಷ್ಠ: ಅರ್ಪಿತ್ ವಸವಾಡ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.