ಕೊರೊನಾ ಸೋಂಕಿತರು ಕಂಡು ಬಂದರೆ ಮಾಹಿತಿ ನೀಡಿ: ಬನದೇಶ


Team Udayavani, Mar 15, 2020, 5:21 PM IST

15-March-32

ದೇವದುರ್ಗ: ಕೊರೊನಾ ಸೋಂಕು ಹಬ್ಬುವುದನ್ನು ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಇದು ಹರಡದಂತೆ ಎಚ್ಚರಿಕೆ ವಹಿಸಲು ತಾಲೂಕಿನ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆ ವೈದ್ಯರು ವಿದೇಶದಿಂದ ಬರುವ ಹಾಗೂ ಶಂಕಿತ ವ್ಯಕ್ತಿಗಳ ಕುಟುಂಬ, ಪ್ರದೇಶದಿಂದ ಬರುವ ರೋಗಿಗಳ ಬಗ್ಗೆ ಕೂಡಲೇ ತಾಲೂಕು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಬನದೇಶ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳ ವೈದ್ಯರಿಗೆ ವಿಡಿಯೋ ಕಾನ್ಫ್ರೆನ್ಸ್‌ ನಡೆಸಿ ಅವರು ಮಾತನಾಡಿದರು. ವಿದೇಶದಿಂದ ಬರುವವರು ಮತ್ತು ಭಾರತದಿಂದ  ದೇಶಕ್ಕೆ ಹೋಗಿ ಬರುವವರ ಬಗ್ಗೆ ಎಚ್ಚರದಿಂದಿರಬೇಕು. ಆದ್ದರಿಂದ ಅಂತಹ ವ್ಯಕ್ತಿಗಳು ತಾಲೂಕಿನ ಯಾವುದೇ ವೈದ್ಯರ ಬಳಿ ಚಿಕಿತ್ಸೆಗೆ ಬಂದಾಗ ಅವರ ಪ್ರವಾಸದ ಇತಿಹಾಸ ತಿಳಿದುಕೊಳ್ಳಬೇಕು. ಒಂದು ವೇಳೆ ಅಂತಹ ಪ್ರದೇಶದಿಂದ ಬಂದಿದ್ದರೆ ಅಥವಾ ಕೊರೊನಾಕ್ಕೆ ತುತ್ತಾದ ಪ್ರದೇಶ ಅಥವಾ ಕುಟುಂಬದ ಸಂಬಂಧ ಹೊಂದಿರುವ ವ್ಯಕ್ತಿಗಳು ಬಂದಿದ್ದರೆ, ಕೂಡಲೇ ಮಾಹಿತಿ ನೀಡಬೇಕು. ಅವರನ್ನು ಪರೀಕ್ಷೆಗೊಳಪಡಿಸಿ 14 ದಿನದವರೆಗೆ ನಿಗಾ ವಹಿಸಲಾಗುತ್ತದೆ. ಅಂತಹ ಯಾವುದೇ ಲಕ್ಷಣಗಳು ಕಂಡುಬಂದರೆ ಜಿಲ್ಲಾ ರಿಮ್ಸ್‌ ಆಸ್ಪತ್ರೆಗೆ ಸೇರಿಸಲಾಗುತ್ತದೆ ಎಂದು ಹೇಳಿದರು.

ಸಾರ್ವಜನಿಕರಿಗೆ, ಮಕ್ಕಳಿಗೆ ಮಾಸ್ಕ್ ಅವಶ್ಯಕತೆಯಿಲ್ಲ: ಕೊರೊನಾ ಸೋಂಕಿನ ಭಯದಿಂದ ಜನ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳುವಂತೆ ಹೇಳಲಾಗುತ್ತಿದೆ. ಆದರೆ ಆರೋಗ್ಯದಿಂದ ಇರುವ ಯಾರಿಗೂ ಮಾಸ್ಕ್ ಅವಶ್ಯಕತೆ ಇಲ್ಲ. ಶಾಲಾ ಮಕ್ಕಳಿಗೂ ಇದರ ಅಗತ್ಯವಿಲ್ಲ. ವೈದ್ಯರು ಹಾಗೂ ಸಿಬ್ಬಂದಿ ಮಾತ್ರ ತಮ್ಮ ಆರೋಗ್ಯ ರಕ್ಷಣೆಗಾಗಿ ಇವುಗಳನ್ನು ಉಪಯೋಗಿಸಬೇಕೆಂದು ಸ್ಪಷ್ಟಪಡಿಸಿದರು. ಒಂದು ವೇಳೆ ಮಾಸ್ಕ್ ಉಪಯೋಗಿಸಿದರೆ ಅದು ಕೇವಲ 8 ಗಂಟೆ ಮಾತ್ರ ಉಪಯೋಗಿಸಬೇಕು. ಹೆಚ್ಚಿನ ಅವಧಿ ಉಪಯೋಗಿಸಿದರೆ ಅದರಿಂದ ಅಡ್ಡ ಪರಿಣಾಮಗಳು ಬೀರುತ್ತವೆ ಎಂದು ತಾಲೂಕು ಆರೋಗ್ಯಾಧಿಕಾರಿಗಳು ಎಚ್ಚರಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ: ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಉಹಾ-ಪೋಹಗಳಿಂದ ಜನರು ಭಯ ಭೀತರಾಗಿದ್ದಾರೆ, ಜನರು ಭಯ ಪಡುವ ಅಗತ್ಯವಿಲ್ಲ. ದೇವದುರ್ಗ ತಾಲೂಕಿನಲ್ಲಿ ಯಾರಲ್ಲೂ ಕೊರೊನಾ ಸೋಂಕು ಕಂಡುಬಂದಿಲ್ಲ. ಆದ್ದರಿಂದ ಜನ ಇದಕ್ಕೆ ಭಯಪಡುವ ಅಗತ್ಯವಿಲ್ಲ ಎಂದರು.

ಸ್ವಚ್ಛತೆ ಕಾಪಾಡಿ: ಪ್ರತಿ ಬಾರಿ ಕೈ ತೊಳೆದುಕೊಳ್ಳಬೇಕು. ಸ್ವಚ್ಛತೆ ಕಾಪಾಡಬೇಕು. ಕಚೇರಿ ಅಥವಾ ಮನೆಯ ವಸ್ತುಗಳನ್ನು ಸಹ ಸ್ವತ್ಛವಾಗಿರಿಸಿಕೊಳ್ಳಬೇಕು ಎಂದರು. ಯಾವುದೇ ವ್ಯಕ್ತಿಯ ಬಗೆ ಶಂಕೆ ವ್ಯಕ್ತಪಡಿಸಿ ರೋಗಕ್ಕೆ ತುತ್ತಾಗಿದ್ದಾರೆಂದು ಹೇಳುವ ಅಧಿಕಾರ ವೈದ್ಯರು, ಖಾಸಗಿ ವ್ಯಕ್ತಿಗಳಿಗಿಲ್ಲ. ಅಂತಹ ವ್ಯಕ್ತಿ ಕಂಡುಬಂದರೆ ತಾಲೂಕು ಆರೋಗ್ಯ ಇಲಾಖೆ ಸೋಂಕಿತರನ್ನು ಜಿಲ್ಲಾ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಿದೆ. ಅವರನ್ನು ಪರೀಕ್ಷಿಸಿದ ನಂತರ ನಂತರ ಜಿಲ್ಲಾಧಿ ಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡುತ್ತಾರೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ| ಎಚ್‌.ಎ. ನಾಡಗೌಡ, ಪ್ರಧಾನ ಕಾರ್ಯದರ್ಶಿ ಡಾ| ಮಂಜುನಾಥ, ವೈದ್ಯರಾದ ಡಾ| ಬಸವರಾಜ, ಡಾ| ನಾಗರಾಜ, ಡಾ| ನರೇಂದ್ರ ಪಾಟೀಲ, ಡಾ| ಗಿರಿಜಾ, ಡಾ| ಗಿರೀಶ, ಡಾ| ದೇವರಾಜ ದೇಸಾಯಿ, ಡಾ|ಬಸನಗೌಡ ಗಬ್ಬೂರು, ಡಾ| ನಿರ್ಮಲಾ, ಡಾ| ಅಶೋಕ ಇತರರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

3-maski

Maski: ಮಾಂಸದೂಟ ಸೇವಿಸಿ ಮೂವರು ಅಸ್ವಸ್ಥ

1-trfff

Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.