ಕೊರೊನಾ ನಡುವೆಯೂ ಶೂಟಿಂಗ್‌ ಮುಗಿಸಿದ “ರಾಬರ್ಟ್‌’

ಏಪ್ರಿಲ್‌ನಲ್ಲಿ ಪ್ರೇಕ್ಷಕರ ಮುಂದೆ ದರ್ಶನ

Team Udayavani, Mar 16, 2020, 7:05 AM IST

robert

ಸದ್ಯ ನಟ ದರ್ಶನ್‌ “ರಾಬರ್ಟ್‌’ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಇತ್ತೀಚೆಗಷ್ಟೇ “ರಾಬರ್ಟ್‌’ ಚಿತ್ರದ ಲಿರಿಕಲ್‌ ವಿಡಿಯೋ ಹಾಡೊಂದನ್ನು ಬಿಡುಗಡೆಗೊಳಿಸಿದ್ದ ಚಿತ್ರತಂಡ, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಇದರ ನಡುವೆಯೇ ಈಗ ಚಿತ್ರತಂಡದ ಕಡೆಯಿಂದ “ರಾಬರ್ಟ್‌’ ಚಿತ್ರದ ಶೂಟಿಂಗ್‌ ಪೂರ್ಣಗೊಂಡಿದೆ ಎಂಬ ಸುದ್ದಿ ಹೊರ ಬಿದ್ದಿದೆ. ಅಂದಹಾಗೆ, ಈ ವಿಷಯವನ್ನು ಹಂಚಿಕೊಂಡಿರುವುದು ಸ್ವತಃ ದರ್ಶನ್‌.

ಹೌದು, ಈ ಮೊದಲು “ರಾಬರ್ಟ್‌’ ಚಿತ್ರದ ಬಹುತೇಕ ಮಾತಿನ ಭಾಗ ಚಿತ್ರೀಕರಿಸಿದ್ದ ಚಿತ್ರತಂಡ, ಚಿತ್ರದ ಬಾಕಿಯಿರುವ ದೃಶ್ಯಗಳನ್ನು ಚಿತ್ರೀಕರಿಸಲು ವಿದೇಶದಲ್ಲಿ ಚಿತ್ರೀಕರಿಸಲು ಪ್ಲಾನ್‌ ಮಾಡಿಕೊಂಡಿತ್ತು. ಆದರೆ ಜಗತ್ತಿನ ಎಲ್ಲೆಡೆ ಕೊರೋನಾ ವೈರಸ್‌ ಆತಂಕ ಮನೆ ಮಾಡಿದ್ದರಿಂದ, ವಿದೇಶ ಚಿತ್ರೀಕರಣ ರದ್ದು ಮಾಡಿದ್ದ ಚಿತ್ರತಂಡ ಬಾಕಿಯಿರುವ ಚಿತ್ರದ ದೃಶ್ಯಗಳನ್ನು ಭಾರತದಲ್ಲೇ ಚಿತ್ರೀಕರಣ ಮಾಡಲು ಪ್ಲಾನ್‌ ಮಾಡಿಕೊಂಡಿತ್ತು.

ಅದರಂತೆ ಈಗ ಚಿತ್ರತಂಡ, ಕೊರೋನಾ ಭಯದ ನಡುವೆಯೇ ಸದ್ದಿಲ್ಲದೆ ಭಾರತದಲ್ಲಿಯೇ ಚಿತ್ರೀಕರಣ ಮಾಡಿ ಮುಗಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟ ದರ್ಶನ್‌, ಚಿತ್ರದ ಶೂಟಿಂಗ್‌ ಮುಗಿಸಿರುವ ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ಶೂಟಿಂಗ್‌ ಮುಗಿಸಿದ ಚಿತ್ರತಂಡದ ಜೊತೆ ಪೋಟೋವನ್ನು ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿರುವ ದರ್ಶನ್‌, “ರಾಬರ್ಟ್‌’ ಚಿತ್ರೀಕರಣ ಮುಕ್ತಾಯವಾಗಿದೆ. ಏಪ್ರಿಲ್‌ನಲ್ಲಿ ನಿಮ್ಮ ಮುಂದೆ ಬರಲು ನಾವ್‌ ರೆಡಿ. ನಿಮ್ಮ ದಾಸ ದರ್ಶನ್‌’ ಎಂದು ಬರೆದುಕೊಂಡಿದ್ದಾರೆ.

ಚಿತ್ರತಂಡದ ಮೂಲಗಳ ಪ್ರಕಾರ, “ರಾಬರ್ಟ್‌’ ಚಿತ್ರ ಬಹುನಿರೀಕ್ಷಿತ ಹಾಡೊಂದನ್ನು ವಿದೇಶಿ ಲೊಕೇಶನ್‌ನಲ್ಲಿ ಸೆರೆಹಿಡಿಯಲು ಚಿತ್ರತಂಡ ಪ್ಲಾನ್‌ ಮಾಡಿಕೊಂಡಿದ್ದು, ಕೊನೆಗೆ ಕೊರೋನಾ ಕಾರಣದಿಂದ ವಿದೇಶಿ ಶೂಟಿಂಗ್‌ ರದ್ದು ಮಾಡಿದ್ದ ಚಿತ್ರತಂಡಕ್ಕೆ ಅಂಥದ್ದೇ ಲೊಕೇಶನ್‌ ಗುಜರಾತ್‌ನ ಕಛ… ಪ್ರದೇಶದಲ್ಲಿ ಸಿಕ್ಕಿದ್ದರಿಂದ ಅಲ್ಲೇ ಚಿತ್ರತಂಡ ಸದ್ದಿಲ್ಲದೆ ಚಿತ್ರೀಕರಣ ಮಾಡಿ ಮುಗಿಸಿದೆ ಎನ್ನಲಾಗುತ್ತಿದೆ.

ಒಟ್ಟಾರೆ “ರಾಬರ್ಟ್‌’ ಚಿತ್ರೀಕರಣ ತಡವಾಗುತ್ತಿರುವುದರಿಂದ, ರಿಲೀಸ್‌ ಡೇಟ್‌ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಚಿತ್ರ ಏಪ್ರಿಲ್‌ ತಿಂಗಳಿನಲ್ಲಿ ತೆರೆಗೆ ಬರಲಿದೆಯಾ ಎಂಬ ಅನುಮಾನ ಅಭಿಮಾನಿಗಳಲ್ಲಿದ್ದು, ಈಗ ಸ್ವತಃ ದರ್ಶನ್‌ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿರುವುದರಿಂದ, ಏಪ್ರಿಲ್‌ ವೇಳೆಗೆ “ರಾಬರ್ಟ್‌’ ದರ್ಶನ ಪಕ್ಕಾ ಎನ್ನುವ ಖುಷಿಯಲ್ಲಿದ್ದಾರೆ ದರ್ಶನ್‌ ಫ್ಯಾನ್ಸ್‌.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

Arjun Sarja announces new film Seetha Payana

Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.