ಕೊರೊನಾ ಐಸೋಲೇಷನ್‌ ವಾರ್ಡ್‌ಗೆ ಡಿಎಚ್‌ಒ ಭೇಟಿ


Team Udayavani, Mar 16, 2020, 3:00 AM IST

corona-icolation

ತುಮಕೂರು: ನಗರದ ಶ್ರೀದೇವಿ ವೈದ್ಯಕೀಯ ಆಸ್ಪತ್ರೆಯಲ್ಲಿ ಭೇಟಿ ನೀಡಿ ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತೆರೆಯಲಾದ ವಿಶೇಷ ಐಸೋಲೇಷನ್‌ ವಾರ್ಡ್‌ಗಳಿಗೆ ಡಿಎಚ್‌ಒ ಡಾ.ಬಿ.ಆರ್‌ ಚಂದ್ರಿಕಾ ಭೇಟಿ ನೀಡಿ ಪರಿಶೀಲಿಸಿದರು.

ಕೊರೊನಾ ಸೋಂಕಿತರಿಗಾಗಿ ಕೊಠಡಿ ಹಾಗೂ ಚಿಕಿತ್ಸೆ ನೀಡಲು ಮಾಡಿಕೊಂಡ ಸಿದ್ಧತೆಗಳನ್ನು ಪರಿವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪೀಡಿತರ ಪ್ರಕರಣ ದಾಖಲಾಗಿಲ್ಲ. ತುಮಕೂರು ಜಿಲ್ಲೆ ಸುರಕ್ಷಿತವಾಗಿದೆ. ಒಂದು ವೇಳೆ ಪತ್ತೆಯಾದಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.

ಮಾಹಿತಿ ಪಡೆಯಿರಿ: ಇತರೆ ದೇಶಗಳಿಂದ ಭಾರತಕ್ಕೆ ಬರುವವರನ್ನು ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿಯೇ ತಪಾಸಣೆ ಮಾಡಲಾಗುತ್ತಿದೆ. ಒಂದು ವೇಳೆ ಯಾರಿಗಾದರೂ ವೈರಸ್‌ ಬಗ್ಗೆ ಸಂಶಯಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದರು.

ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ: ಕಳೆದ ಎರಡ್ಮೂರು ದಿನಗಳಿಂದಲೂ ಪ್ರತಿಯೊಂದು ಮಾಹಿತಿಯನ್ನು ಪತ್ರಿಕೆಗಳ ಮೂಲಕ ತಿಳಿಸಲಾಗುತ್ತಿದೆ. ವಿದೇಶಗಳಿಂದ ಭಾರತಕ್ಕೆ ಬರುವವರನ್ನು ತಪಾಸಣೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ ತಪಾಸಣೆ ಮಾಡಿದವರಲ್ಲಿಯೂ ಯಾವುದೇ ವೈರಸ್‌ ಪತ್ತೆಯಾಗಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ರಾಜ್ಯದಿಂದ ಪ್ರತಿಯೊಂದು ಮಾಹಿತಿ ಡಿಎಚ್‌ಒಗಳಿಗೆ ತಿಳಿಯುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ವಿಶೇಷ ವಾರ್ಡ್‌ ಕಾರ್ಯಾರಂಭ: ಶ್ರೀದೇವಿ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ. ಆರ್‌.ರಮಣ್‌ ಹುಲಿನಾಯ್ಕರ್‌ ಮಾತನಾಡುತ್ತಾ, ಡಿಎಚ್‌ಒರವರು ನೀಡಿದ ಮಾರ್ಗದರ್ಶನದ ಪ್ರಕಾರ ಶ್ರೀದೇವಿ ಆಸ್ಪತ್ರೆಯಲ್ಲಿ 25 ಬೆಡ್‌ಗಳು ಐಸೋಲೇಷನ್‌ ವಾರ್ಡ್‌ ತೆರೆದಿದು, ಇದರಲ್ಲಿ 45ರವರೆಗೆ ಬೆಡ್‌ಗಳನ್ನು ಅಳವಡಿಸಬಹುದಾಗಿದೆ. ದಿನದ 24 ಗಂಟೆ ಚಿಕಿತ್ಸೆ ನೀಡಲು ಶ್ರೀದೇವಿ ಆಸ್ಪತ್ರೆ ಸನ್ನದ್ಧವಾಗಿದ್ದು ಅಗತ್ಯವಾದ ಔಷಧ, ಮೂಲಸೌಕರ್ಯಗಳನ್ನು ಒದಗಿಸಿದ ವಿಶೇಷ ವಾರ್ಡ್‌ ಕಾರ್ಯಾರಂಭ ಮಾಡಿದೆ. ಯಾವುದೇ ಪ್ರಕರಣ ದಾಖಲಾದರೂ ಅದನ್ನು ಎದುರಿಸಲು ಸನ್ನದ್ಧರಾಗಿದ್ದೇವೆ ಎಂದರು.

ಕಂಟ್ರೋಲ್‌ ರೂಂ: ಕೊರೊನಾ ವೈರಸ್‌ ಲಕ್ಷಣ ಕಂಡು ಬರುವ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಲು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಕಂಟ್ರೋಲ್‌ ರೂಂ ತೆರೆಯಲಾಗಿದ್ದು, ಜನರು ಗೊಂದಲ ಪರಿಹರಿಸಿಕೊಳ್ಳಬಹುದು ಎಂದರು.  ಇತ್ತೀಚೆಗೆ ವಿದೇಶದಿಂದ ಬಂದಂತಹ ನೆರೆ-ಹೊರೆಯವರಲ್ಲಿ ಕೊರೊನಾ ಲಕ್ಷಣ ಕಂಡು ಬಂದರೆ ಜನಸಾಮಾನ್ಯರು ಕಂಟ್ರೋಲ್‌ ರೂಂಗೆ ಕರೆ ಮಾಡಿ ಮಾಹಿತಿ ತಿಳಿಸಬೇಕು. ವ್ಯಕ್ತಿಯ ಮಾಹಿತಿ ಆಧರಿಸಿ, ಆತನನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

ಸುಳ್ಳು ಸುದ್ದಿ ಹರಡಿದರೆ ಕ್ರಮ: ನಗರದಲ್ಲಿ ಸುಳ್ಳು ಸುದ್ದಿಗಳು ಪ್ರಚಾರವಾಗುತ್ತಿರುವುದರಿಂದ ಜನರು ಆತಂಕಗೊಳ್ಳುತ್ತಿದ್ದಾರೆ. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೂ ನೇರವಾಗಿ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳು ಮಾಹಿತಿ ನೀಡುತ್ತಾರೆ. ಈ ಬಗ್ಗೆ ಮಾಧ್ಯಮಗಳು ಕೂಡ ಸರಿಯಾದ ಮಾಹಿತಿ ಇಲ್ಲದೆ, ಸುದ್ದಿಗಳನ್ನು ವರದಿ ಮಾಡಬಾರದು ಎಂದು ಮನವಿ ಮಾಡಿದರು.

ಶ್ರೀದೇವಿ ವೈದ್ಯಕೀಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಶಾಲಿನಿ, ಉಪಪ್ರಾಂಶುಪಾಲ ಡಾ.ರೇಖಾಗುರುಮೂರ್ತಿ, ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಚೆನ್ನಮಲ್ಲಯ್ಯ, ಮಾನವ ಸಂಪನ್ಮೂಲ ಮತ್ತು ಮಾಹಿತಿ ತಂತ್ರಜಾನ ನಿರ್ದೇಶಕ ಎಂ.ಎಸ್‌.ಪಾಟೀಲ್‌, ಶ್ರೀದೇವಿ ಆಡಳಿತಾಧಿಕಾರಿ ಟಿ.ವಿ.ಬಹ್ರದೇವಯ್ಯ, ಡಾ.ಸತ್ಯನಾರಾಯಣ, ಡಾ.ಕೇಶವರಾಜ್‌ ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Tumakur

Wage Workers: ತುಮಕೂರಿನ ಶುಂಠಿ ಕ್ಯಾಂಪ್‌ನಲ್ಲಿ ಜೀತ ಪದ್ಧತಿ ಜೀವಂತ!

1-kunigal

Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ

Laxmi-Minister

Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.