ಅರ್ಧಂಬರ್ಧ ರಸ್ತೆ ಕಾಮಗಾರಿಗೆ ಆಕ್ರೋಶ

ಬೀಳ್ಳೋರು-ಏಳ್ಳೋರು ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳಸವಾರರಿಗೆ ನರಕಯಾತನೆ ಅನುಭವ

Team Udayavani, Mar 16, 2020, 3:22 PM IST

16-March-18

ಚಿಕ್ಕಮಗಳೂರು: ಆರು ಕಿ.ಮೀ ರಸ್ತೆ ಕಾಮಗಾರಿಗೆ 6.73 ಕೋಟಿ ರೂ. ಬಿಡುಗಡೆಯಾಗಿದ್ದರೂ ಕಳೆದೊಂದು ವರ್ಷದಲ್ಲಿ ಕೇವಲ ಮೂರು ಕಿ.ಮೀ ರಸ್ತೆ ಡಾಂಬರೀಕರಣ ನಡೆಸಿ ಉಳಿದ ರಸ್ತೆಗೆ ಜೆಲ್ಲಿ ಹಾಕಿ ಕೈಬಿಟ್ಟಿದ್ದಾರೆ ಎಂದು ಮೂಡಿಗೆರೆ ತಾಲೂಕಿನ ಹೊರನಾಡು ಸುತ್ತಮುತ್ತಲ ಗ್ರಾಮಸ್ಥರು ಆರೋಪಿಸಿದ್ದಾರೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರನಾಡಿನಿಂದ ಶೃಂಗೇರಿ ಸಂಪರ್ಕ ಮಾರ್ಗದ ಹೊರನಾಡಿನಿಂದ ಬಲಿಗೆ ಕವೆ ಗ್ರಾಮದ ವರೆಗಿನ ಆರು ಕಿ.ಮೀ. ರಸ್ತೆ ಕಾಮಗಾರಿಗೆ 6 ಕೋಟಿ 73 ಲಕ್ಷ ರೂ. ಬಿಡುಗಡೆಯಾಗಿದ್ದು, 2019ರ ಮಾರ್ಚ್‌ ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭಿಸಲಾಗಿದೆ.

2020ರ ಮಾರ್ಚ್‌ ತಿಂಗಳು ಬಂದರೂ ಮೂರು ಕಿ.ಮೀ ರಸ್ತೆ ಡಾಂಬರೀಕರಣ ಮಾತ್ರ ಮಾಡಲಾಗಿದ್ದು, ಉಳಿದ ಮೂರು ಕಿ.ಮೀ ಜಲ್ಲಿ ಕಲ್ಲು ಹಾಕಿ ಬಿಡಲಾಗಿದೆ. ಇನ್ನೂ ಮೂರು ಕಿ.ಮೀ ರಸ್ತೆ ಕಾಮಗಾರಿಯೂ ಕಳಪೆಯಿಂದ ಕೂಡಿದ್ದು ಡಾಂಬರ್‌ ಕಿತ್ತು ಬರುತ್ತಿದೆ ಎಂದು ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಕಡಿದಾದ ತಿರುವುಗಳಿವೆ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಜೆಲ್ಲಿ ಹಾಕಿ ಡಾಂಬರೀಕರಣ ನಡೆಸದಿರುವುದರಿಂದ ಸವಾರರು ನರಕಯಾತನೆ ಅನುಭವಿಸುವಂತಾಗಿದೆ. ಈ ಸಂಬಂಧ ಶಾಸಕರು, ಇಂಜಿನಿಯರ್‌ಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.

ಈ ಮಾರ್ಗದ ಏಳೆಂಟು ಕುಗ್ರಾಮಗಳು ಇದೇ ರಸ್ತೆ ಮಾರ್ಗವನ್ನು ಆಶ್ರಯಿಸಿವೇ. ರಸ್ತೆ ನಿರ್ಮಾಣಕ್ಕೆ ಕೈಹಾಕಿದ ಸರ್ಕಾರ ಅರ್ಧಂಬರ್ಧ ಕೆಲಸ ಮಾಡಿ ಕೈಬಿಟ್ಟಿದೆ. ಈ ರಸ್ತೆಯಲ್ಲಿ ಬೀಳ್ಳೋರು-ಏಳ್ಳೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದೊಂದು ವರ್ಷದಿಂದ ಜಲ್ಲಿ ಕಲ್ಲು ರಸ್ತೆಯ ಮೇಲೆ ಸರ್ಕಸ್‌ ಮಾಡಿ ವಾಹನಗಳನ್ನು ಓಡಿಸಿರುವ ಜನರು ಹೈರಾಣಾಗಿ ಹೋಗಿದ್ದು ಕಂಟ್ರಾಕ್ಟರ್‌ ರಸ್ತೆಗೆ ಜಲ್ಲಿ ಹಾಕಿ 15 ದಿನ ಬರ್ತೀನಿ ಅಂತ ಹೋದವರು ಇದುವರೆಗೂ ಬಂದಿಲ್ಲ ಎಂದು ಆರೋಪಿಸಿದ್ದಾರೆ.

ರಸ್ತೆಗೆ ಜಲ್ಲಿ ಹಾಕಿ ಹಾಗೇ ಬಿಟ್ಟಿದ್ದರಿಂದ ರಸ್ತೆ ಸರಿಯಿಲ್ಲ ಎಂಬ ಕಾರಣಕ್ಕೆ ಬಸ್‌ ಸಂಚಾರವನ್ನು ನಿಲ್ಲಿಸಲಾಗಿದೆ. ಗ್ರಾಮಸ್ಥರು, ವಿದ್ಯಾರ್ಥಿಗಳು ಆಟೋದಲ್ಲಿ ಓಡಾಡುವ ಪರಿಸ್ಥಿತಿ ಉಂಟಾಗಿದೆ. ದ್ವಿಚಕ್ರ ವಾಹನ ಸವಾರರು ಜಲ್ಲಿ ರಸ್ತೆಯಲ್ಲಿ ಬ್ಯಾಲೆನ್ಸ್‌ ಸಿಗದೇ ಎದ್ದುಬಿದ್ದು ಹೋಗುವಂತಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ ಈಗ ರಜೆ ಸಿಕ್ಕಿದೆ. ಆದರೆ ಕಳೆದ ಕೆಲ ದಿನಗಳ ಹಿಂದೇ ಪೋಷಕರು ತಮ್ಮ ದ್ವಿಚಕ್ರವಾಹನದಲ್ಲಿ ಶಾಲೆಗೆ ಬಿಡುವಂತ ಪರಿಸ್ಥಿತಿ ಎದುರಾಗಿತ್ತು.

ಸ್ಥಳೀಯ ಶಾಸಕರು ಅ ಧಿಕಾರಿಗಳು ತಕ್ಷಣ ರಸ್ತೆ ಕಾಮಗಾರಿ ಕೈಗೆತ್ತಿಕೊಂಡು ಗುಣಮಟ್ಟದ ರಸ್ತೆ ಕಾಮಗಾರಿ ನಡೆಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡುವಂತೆ ಗ್ರಾಮಸ್ಥ ವಿಜಯ ಪ್ರಸಾದ್‌ ಮನವಿ ಮಾಡಿದ್ದಾರೆ.

ಹೊರನಾಡು ರಸ್ತೆ ಕಾಮಗಾರಿ ನಿಲ್ಲಿಸಿರುವ ಕುರಿತು ದೂರುಗಳು ಬಂದಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಡನೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು.
ಎಂ.ಪಿ. ಕುಮಾರಸ್ವಾಮಿ,
ಶಾಸಕರು ಮೂಡಿಗೆರೆ ಕ್ಷೇತ್ರ

ರಸ್ತೆ ಸರಿಯಿಲ್ಲ ಎಂಬ ಕಾರಣಕ್ಕೆ ಇದ್ದ ಬಸ್‌ ನಿಂತಿವೆ. ಸ್ಥಳೀಯರು ಮತ್ತು ಶಾಲಾ ವಿದ್ಯಾರ್ಥಿಗಳು ಆಟೋ, ಜೀಪ್‌ಗ್ಳಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಮಾರ್ಗ ಬಳಸಿ ಶೃಂಗೇರಿಗೆ 32 ಕಿ.ಮೀ ದೂರವಿದ್ದು ಬೇರೆ ದಾರಿ ಬಳಸಿ ಹೋಗುವುದಾದದರೇ 80 ಕಿ.ಮೀ. ಸಾಗಬೇಕಾಗುತ್ತದೇ. ಅ ಧಿಕಾರಿಗಳ ಗಮನಕ್ಕೆ ತಂದರು ಪ್ತಯೋಜನವಾಗುತ್ತಿಲ್ಲ, ಕೆಲ ಅಧಿ ಕಾರಿಗಳನ್ನು ಪ್ರಶ್ನಿಸದರೇ ಉಡಾಫೆ ಉತ್ತರ ನೀಡುತ್ತಾರೆ. ಇನ್ನೇರೆಡು ತಿಂಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ಅಷ್ಟರೊಳಗೆ ರಸ್ತೆ ಕಾಮಗಾರಿ ಮುಗಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಲಿ.
ಶರತ್‌, ಸ್ಥಳೀಯ

ರಸ್ತೆ ಕಾಮಗಾರಿ ಅರ್ಧಕ್ಕೆ ಬಿಟ್ಟಿರುವುದರಿಂದ ಹೊರನಾಡು ಶೃಂಗೇರಿ ಕ್ಷೇತ್ರಗಳಿಗೆ ತೆರಳುವ ಪ್ರವಾಸಿಗರಿಗೂ ತೊಂದರೆಯಾಗಿದೆ. ಸ್ಥಳೀಯರು ಕಳೆದೊಂದು ವರ್ಷದಿಂದ ನರಕಯಾತನೆ ಅನುಭವಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶೀಘ್ರದಲ್ಲಿ ಕ್ರಮಕೈಗೊಳ್ಳಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chikkamagaluru

Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

3-kottigehara

Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.