ಸೂರ್ಯನ ಪ್ರಖರಕ್ಕೆ ಬಸವಳಿದ ಜನತೆ


Team Udayavani, Mar 16, 2020, 4:25 PM IST

ಸೂರ್ಯನ ಪ್ರಖರಕ್ಕೆ ಬಸವಳಿದ ಜನತೆ

ಗದಗ: ಹೋಳಿ ಹುಣ್ಣಿಮೆಯಾಗುತ್ತಿದ್ದಂತೆ ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೂರ್ಯನ ಪ್ರಖರ ಹೆಚ್ಚುತ್ತಿದೆ. ದಿನದಿಂದ ದಿನಕ್ಕೆ ಬಿಸಲಿನ ಝಳ ಹೆಚ್ಚುತ್ತಿದ್ದು, ಭೂಮಿ ಕಾದ ಕಾವಲಿಯಂತಾಗುತ್ತಿದೆ. ಹೀಗಾಗಿ ಜನರು ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ತಂಪು ಪಾನೀಯ ಹಾಗೂ ಕೊಡೆಗಳ ಮೊರೆ ಹೋಗುವಂತಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ ಬೇಸಿಗೆ ಬಿಸಿಲು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಕಳೆದ ಹಿಂಗಾರಿನಲ್ಲಿ ಅತಿವೃಷ್ಟಿಯಾಗಿ, ಹಲವೆಡೆ ಹಳ್ಳ-ಕೊಳ್ಳಗಳು ಸಮೃದ್ಧವಾಗಿದ್ದರಿಂದ ಅಂತರ್ಜಲ ಮಟ್ಟ ಹೆಚ್ಚಿ, ಭೂಮಿಯಲ್ಲಿ ತೇವಾಂಶವೂ ಕಡಿಮೆಯಾಗಿಲ್ಲ. ಹೀಗಾಗಿ ಫೆಬ್ರವರಿ ಕೊನೆಯ ವಾರದವರೆಗೂ ಶೀತಗಾಳಿ ಬೀಸುತ್ತಿತ್ತು. ಆದರೆ, ಮಾರ್ಚ್‌ ಆರಂಭಗೊಂಡ ಬಳಿಕ ಬೇಸಿಗೆ ಬಿಸಿಲು ಚುರುಕುಗೊಂಡಿದ್ದು, ದಿನದಿಂದ ದಿನಕ್ಕೆ ಝಳ ಹೆಚ್ಚುತ್ತಿದೆ. ರವಿವಾರ ಗರಿಷ್ಠ 36 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ಈಗಾಗಲೇ ರಣ ಬಿಸಲಿನ ತಾಪದಿಂದ ಜನರು ಬೆವರುವಂತಾಗಿದೆ. ಕಳೆದೊಂದು ದಶಕಗದಲ್ಲೇ ಗರಿಷ್ಠ ಎಂದರೆ ನಾಲ್ಕು ವರ್ಷಗಳ ಹಿಂದೆ (2016) ಮಾರ್ಚ್ ನಲ್ಲಿ 39.4 ಡಿಗ್ರಿ ಉಷ್ಣಾಂಶ ದಾಖಲಾಗಿತ್ತು. 1953ರ ಮಾರ್ಚ್‌ ತಿಂಗಳಲ್ಲಿ ಗರಿಷ್ಠ 40 ಡಿಗ್ರಿ ಉಷ್ಣಾಂಶ ದಾಖಲಾಗಿತ್ತು. ಇದೇ ಈ ವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ.

ಹೆಚ್ಚಿದ ತಾಪ: ಸಾಮಾನ್ಯವಾಗಿ ಮಾರ್ಚ್‌ ತಿಂಗಳಲ್ಲಿ ಜಿಲ್ಲೆಯಲ್ಲಿ 35 ರಿಂದ 38.9 ಡಿಗ್ರಿ ಸೆಲ್ಸಿಯಸ್‌ ವಾಡಿಕೆ ಉಷ್ಣಾಂಶ ಇರುತ್ತದೆ. ಆದರೆ, ಈ ಬಾರಿ ಮಾರ್ಚ್‌ ಆರಂಭದಿಂದಲೇ ಬಿಸಿಲಿನ ಝಳದಲ್ಲಿ ವಿಪರೀತವಾಗಿ ಏರಿಕೆಯಾಗುತ್ತಿದೆ. ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ತೀವ್ರ ಬಿಸಿಲಿರುತ್ತದೆ. ಬಿಸಿಲಿನ ಪ್ರಖರತೆಯಿಂದ ಮಧ್ಯಾಹ್ನದ ವೇಳೆಗೆ ಮನೆಯಿಂದ ಹೊರ ಬರಲು ಜನರು ಹಿಂದೇಟು ಹಾಕುವಂತಾಗಿದೆ.

ಹೀಗಾಗಿ ಮಧ್ಯಾಹ್ನದ ವೇಳೆಗೆ ಮಾರುಕಟ್ಟೆ ಸೇರಿದಂತೆ ಬಹುತೇಕ ಪ್ರಮುಖ ರಸ್ತೆಗಳಲ್ಲಿ ಜನ ಸಂದಣಿ ಕಡಿಮೆಯಾಗುತ್ತಿದೆ. ಈಗಲೇ ಇಷ್ಟೊಂದು ಬಿಸಿಲಿದ್ದರೆ,ಮುಂದಿನ ಏಪ್ರಿಲ್‌, ಮೇ ತಿಂಗಳ ಪರಿಸ್ಥಿತಿ ಹೇಗೆ ಎಂಬುದು ಸಾರ್ವಜನಿಕರ ಪ್ರಶ್ನೆ. ಹವಾಮಾನ ಇಲಾಖೆ ಮುನ್ನೋಟದ ಪ್ರಕಾರ ಇನ್ನೂ ಒಂದು ವಾರದವರೆಗೆ ಇದೇ ಉಷ್ಣಾಂಶ ಮುಂದುವರಿಯುವ ಲಕ್ಷಣಗಳಿವೆ ಎಂದು ಹೇಳಲಾಗಿದೆ.

ತಂಪು ಪಾನೀಯಕ್ಕೆ ಬೇಡಿಕೆ: ಕೆಲಸದ ನಿಮಿತ್ತ ನಗರ ಹಾಗೂ ಸುತ್ತಲಿನ ಗ್ರಾಮಗಳಿಂದ ಪಟ್ಟಣಕ್ಕೆ ಬರುವ ಜನರು ಬಿಸಿಲಿನ ತಾಪಕ್ಕೆ ಬಸವಳಿಯುತ್ತಿದ್ದಾರೆ. ಪಾದಚಾರಿಗಳು ನೆತ್ತಿ ಸುಡುವ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಕೊಡೆ, ಮರದ ನೆರಳು ಹುಡುಕುತ್ತಿದ್ದಾರೆ. ಬಿಸಿಲಿನ ತಾಪದಿಂದ ದಾಹವೂ ಹೆಚ್ಚುತ್ತಿದ್ದು, ಜನರು ಕಬ್ಬಿನ ಹಾಲು, ಎಳೆ ನೀರು ಹಾಗೂ ಇತರೆ ತಂಪು ಪಾನೀಯಗಳಿಗೆ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ನಗರದ ಪಂಚರ ಹೊಂಡ, ಗಾಂಧಿ  ಸರ್ಕಲ್‌, ಭೂಮರೆಡ್ಡಿ ಸರ್ಕಲ್‌, ಬೆಟಗೇರಿ ಬಸ್‌ ನಿಲ್ದಾಣ ಭಾಗದಲ್ಲಿರುವ ತಂಪು ಪಾನೀಯ ಅಂಗಡಿಗಳಿಗೆ ಜನರು ಮುಗಿಬೀಳುತ್ತಿದ್ದಾರೆ.

ದಿನ ಕಳೆದಂತೆ ಬೇಸಿಗೆ ಬಿರು ಬಿಸಿಲು ಹೆಚ್ಚುತ್ತಿದ್ದು, ಎಷ್ಟೇ ನೀರು, ತಂಪು ಪಾನೀಯಗಳನ್ನು ಕುಡಿದರೂ ದಾಹ ನೀಗುತ್ತಿಲ್ಲ. ದಿನಕ್ಕೆ 50 – 80 ರೂ. ಸೋಡಾ, ಹಣ್ಣಿಗೆ ಖರ್ಚಿ ಮಾಡುವಂತಾಗುತ್ತದೆ. ಬಿಸಿಲಿನಿಂದ ಸಾಕಾಗಿದೆ. ಶ್ರೀನಿವಾಸ ಕೆ.ಎಂ. ಖಾನತೋಟ ನಿವಾಸಿ

 

-ವಿಶೇಷ ವರದಿ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.