ನೀರಿಗಾಗಿ ಅನ್ನದಾತರ ಹೋರಾಟ
Team Udayavani, Mar 17, 2020, 3:17 PM IST
ಸಾಂದರ್ಭಿಕ ಚಿತ್ರ
ಕೊಲ್ಹಾರ: ಮುಳವಾಡ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸೋಮವಾರ ಐದು ದಿನ ಪೂರೈಸಿ ಆರನೇ ದಿನಕ್ಕೆ ಕಾಲಿಟ್ಟಿದೆ.
ತಾಲೂಕಿನ ಕೂಡಗಿ ಗ್ರಾಮದ ರೈಲ್ವೆ ಸ್ಟೇಷನ್ ಹತ್ತಿರ ಮುಳವಾಡ ಆಲಮಟ್ಟಿ ರಸ್ತೆ ಪಕ್ಕದಲ್ಲಿನ ರೈತರ ಸತ್ಯಾಗ್ರಹ ಸ್ಥಳಕ್ಕೆ ರೈಲ್ವೆ ಇಲಾಖೆ ಎಡಿಆರ್ಎಂ ಅಧಿಕಾರಿಗಳಾದ ಮುರುಳಿಕೃಷ್ಣ ಭೇಟಿ ನೀಡಿದರು. ಈ ವೇಳೆ ರೈತರೊಂದಿಗೆ ಮಾತನಾಡಿದ ಅವರು, ಬಾಕ್ಸ್ ಪುಸ್ಸಿಂಗ್ ಕಾಮಗಾರಿಗೆ ಅಡಚಣೆಯಾಗಿರುವ ಒಂದು ರೈಲ್ವೆ ಹಳಿಯನ್ನು ಸಸ್ಪೆಂಡ್ ಮಾಡಲು ದೆಹಲಿಯಲ್ಲಿರುವ ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು ನಾಳೆ ಅಥವಾ ನಾಡಿದ್ದು ಸಂಜೆ ವೇಳೆಗಾಗಿ ಆದೇಶ ಬರುವ ನಿರೀಕ್ಷೆಯಿದೆ. ಮಾ. 31ರೊಳಗೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವದು. ಆದ್ದರಿಂದ ರೈತರು ಧರಣಿಯನ್ನು ಹಿಂಪಡೆಯಬೇಕೆಂದು ಮನವಿ ಮಾಡಿಕೊಂಡರು.
ಈ ವೇಳೆ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ರೈಲ್ವೆ ಹಳಿ ಕಾಮಗಾರಿ ಸ್ಥಗಿತಗೊಳಿಸುವ ಆದೇಶದ ಪ್ರತಿ ನಮ್ಮ ರೈತರ ಸಮ್ಮುಖದಲ್ಲಿ ಅಧಿಕಾರಿಗಳು ತೋರಿಸಿದ ತಕ್ಷಣ ಧರಣಿ ಹಿಂಪಡೆಯುತ್ತೇವೆ. ತದನಂತರ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಲು ಸಂಬಂಧಪಟ್ಟ ಅಲ್ಲಿವರೆಗೂ ಯಾವುದೇ ಕಾರಣಕ್ಕೂ ಧರಣಿ ಹಿಂಪಡೆಯುವದಿಲ್ಲ ಎಂದರು.
ರಾಜ್ಯ ಸರಕಾರ ಕೊರೊನಾ ವೈರಸ್ ಕುರಿತು ಆರೋಗ್ಯ ಎಮರ್ಜೆನ್ಸಿ ಆದೇಶವಿರುವುದರಿಂದ ಮಂಗಳವಾರ ನಡೆಸಲು ಉದ್ದೇಶಿಸಿದ್ದ ಎತ್ತು ಮತ್ತು ಎತ್ತಿನಗಾಡಿ, ಕುರಿ, ದನಕರುಗಳು, ಇನ್ನಿತರ ಸಾಕು ಪ್ರಾಣಿಗಳ ಜೊತೆಯಲ್ಲಿ ರೈಲ್ವೆ ಹಳಿ ಮೇಲೆ ಕುಳಿತುಕೊಂಡು ಧರಣಿ ಮಾಡುವ ಕುರಿತು ರೈತರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವದು ಎಂದರು. ಕೂಡಗಿ ಪೊಲೀಸ್ ಠಾಣಾಧಿಕಾರಿ ರೇಣುಕಾ ಜಕನೂರ ಮಾತನಾಡಿ, ರೈತರು ಧರಣಿ ಹಿಂಪಡೆಯಬೇಕು. ನಾವು ಕೂಡ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆಗೆ ಕಾಮಗಾರಿ ಕುರಿತು ಮಾತನಾಡಿದ್ದು ಇದೆ. ತಾವುಗಳು ಈ ಧರಣಿ ಹಿಂಪಡೆದು ಸಹಕಾರ ನೀಡಬೇಕೆಂದು ಕೋರಿದರು. ಆದರೆ ರೈತರು ಒಪ್ಪಲಿಲ್ಲ. ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಲ್.ಪಾಟೀಲ, ಗೊಳಸಂಗಿಯ ಮುರುಗೇಶ ಹೆಬ್ಟಾಳ ಮಾತನಾಡಿದರು.
ಐದನೇ ದಿನದ ಅಹೋರಾತ್ರಿ ಧರಣಿಯಲ್ಲಿ ಸಿದ್ರಾಮ ಅಂಗಡಗೇರಿ, ಸದಾಶಿವ ಬರಟಗಿ, ವಿಠಲ ಬಿರಾದಾರ, ಕಲ್ಲಪ್ಪ ಮಟ್ಯಾಳ, ಶಿವಪ್ಪ ಮುರನಾಳ, ಪಾಂಡು ಹ್ಯಾಟಿ, ಸೋಮನಿಂಗ ಹಡಪದ, ಗುರಪ್ಪ ನಾಗೋಡ, ಸಾಹೇಬಗೌಡ ಬಿರಾದಾರ, ಹೊನ್ನಪ್ಪ ತೋಟದ, ಗಣೇಶ ರಾಠೊಡ, ಎಚ್.ಜಿ. ಮಕಾನದಾರ, ಖಾಜೇಸಾಬ ಕೊಲ್ಹಾರ, ವಿಠೊಬಾ ಸಾಳುಂಕೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು
Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
Basangouda Patil Yatnal: ಫಸ್ಟ್ ಲೈನ್ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ
Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.