ಜಗ್ಗೇಶ್‌ ಹುಟ್ಟುಹಬ್ಬ: ರೋಗಿಗಳಿಗೆ ಮಾಸ್ಕ್ ವಿತರಣೆ


Team Udayavani, Mar 18, 2020, 3:00 AM IST

jaggesh-huttu

ಕೊರಟಗೆರೆ: ದೇಶಾದ್ಯಂತ ಮಹಾಮಾರಿಯಾಗಿ ಕಂಡು ಬರುತ್ತಿರುವ ಕೊರೊನಾ ವೈರಸ್‌ ಸಾರ್ವಜನಿಕ ವಲಯದಲ್ಲಿ ನಿದ್ದೆಗೆಡಿಸಿದ್ದು ಕೊರೊನಾ ವೈರಸ್‌ಗೆ ಹೆದರುವ ಬದಲು ಸ್ವಚ್ಛತೆ ಕಾಪಾಡಲು ಗಮನ ಹರಿಸಬೇಕು ಹಾಗೂ ಎಚ್ಚರಿಕೆ ಕ್ರಮವಾಗಿ ಮಾಸ್ಕ್ ಉಪಯೋಗಿಸಬೇಕು ಎಂದು ಕೊರಟಗೆರೆ ಫ್ರೆಂಡ್ಸ್‌ ಗ್ರೂಪ್‌ ಅಧ್ಯಕ್ಷ ಕೆ.ಎನ್‌.ರವಿಕುಮಾರ್‌ ಹೇಳಿದರು.

ನವರಸ ನಾಯಕ ಜಗ್ಗೇಶ್‌ ಅವರ 57ನೇ ಹುಟ್ಟುಹಬ್ಬ ಆಚರಣೆ ಅಂಗವಾಗಿ ಫ್ರೆಂಡ್ಸ್‌ ಗ್ರೂಪ್‌ ಮತ್ತು ಜಗ್ಗೇಶ್‌ ಅಭಿಮಾನಿ ಬಳಗದ ವತಿಯಿಂದ ಕೊರೊನಾ ವೈರಸ್‌ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಮತ್ತು ಆಸ್ಪತ್ರೆ ಸಿಬ್ಬಂದಿಗೆ ಉಚಿತ ಮಾಸ್ಕ್ಗಳನ್ನು ವಿತರಿಸಿ ಮಾತನಾಡಿದರು.

ಸ್ವಚ್ಛತೆ ಕಾಪಾಡಿ: ಸ್ವಚ್ಛ ಪರಿಸರ ಕಾಪಾಡಿಕೊಳ್ಳುವ ಮೂಲಕ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರವಹಿಸಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಕೊರೊನಾ ವೈರಸ್‌ನ್ನು ಹತೋಟಿಗೆ ತರಲು ಸಜ್ಜಾಗಿದ್ದಾರೆ, ಜನರಲ್ಲಿ ಯಾವುದೆರೀತಿಯ ಭಯ ಬೇಡ, ಕೊರೊನಾ ವೈರಸ್‌ ತಡೆಗಟ್ಟಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದರು.

ಜಿಲ್ಲಾ ಜಗ್ಗೇಶ್‌ ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲಣ್ಣ ಮಾತನಾಡಿ, ಸಾರ್ವಜನಿಕರು ಸ್ವಯಂ ಜಾಗೃತರಾಗಿ ಕಾಯಿಲೆ ಇರುವವರ ಬಳಿ ತೆರಳದೆ ಅಂತರ ಕಾಯ್ದುಕೊಳ್ಳಬೇಕು. ಜನರು ಗುಂಪು ಗುಂಪಾಗಿ ಸೇರುವುದನ್ನು ನಿಯಂತ್ರಣ ಮಾಡಬೇಕು, ಹಲವಾರು ಬಾರಿ ಕೈಗಳನ್ನು ತೊಳೆದುಕೊಂಡು ಶುಚಿಯಾಗಿಟ್ಟುಕೊಳ್ಳಬೇಕು.

ಪದೇ ಪದೆ ಕಣ್ಣು, ಮೂಗು, ಬಾಯಿಯನ್ನು ಕೈಗಳಿಂದ ಮುಟ್ಟಿಕೊಳ್ಳಬಾರದು ಹಾಗೂ ಪ್ರತಿಯೊಬ್ಬರು ಮಾಸ್ಕ್ ಹಾಕಿಕೊಳ್ಳಬೇಕು. ಆದರೆ ಪ್ರಸ್ತುತ ಮಾಸ್ಕ್ ಖರೀದಿಸಲು ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದ್ದು ಅಂಗಡಿಗಳಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದು ಸರ್ಕಾರವೇ ಮಾಸ್ಕ್ಗಳನ್ನು ಆಸ್ಪತ್ರೆಗಳ ಮೂಲಕ ಸಾರ್ವಜನಿಕರಿಗೆ ನಿಗದಿತ ಬೆಲೆಯಲ್ಲಿ ಒದಗಿಸಬೇಕು ಎಂದು ಒತ್ತಾಯಿಸಿದರು.

ನಂತರ ಪಟ್ಟಣದ ರಸ್ತೆಗಳ ಮಧ್ಯಭಾಗದಲ್ಲಿ ಫ್ರೆಂಡ್ಸ್‌ ಗ್ರೂಪ್‌ ವತಿಯಿಂದ ಬೆಳೆಸಿರುವ ಗಿಡಗಳಿಗೆ ಟ್ಯಾಂಕರ್‌ ಮೂಲಕ ನೀರು ಹಾಯಿಸಿ ಬೇಸಿಗೆಯ ಬಲಿಗೆ ಒಣಗುತ್ತಿದ್ದ ಗಿಡಗಳ ಜೀವ ಉಳಿಸಿದರು. ಡಾ.ಅನಿಲ್‌, ಡಾ.ಸುಜಾತನಾಗ್‌, ಸಿಬ್ಬಂದಿ ನಾಗಣ್ಣ, ವೆಂಕಟೇಶ್‌, ಫ್ರೆಂಡ್ಸ್‌ ಗ್ರೂಪ್‌ ಮತ್ತು ಜಗ್ಗೇಶ್‌ ಅಭಿಮಾನಿ ಬಳಗದ ಶಿವಾನಂದ್‌, ಪ್ರದೀಪ್‌ಕುಮಾರ್‌, ಶಿವಶಂಕರ್‌, ಮುರಳೀಧರ, ಶಶಿಕುಮಾರ್‌, ಶ್ರೀಕಾಂತ, ಗಿರೀಶ್‌, ನಟರಾಜು, ಶ್ರೀನಿವಾಸ್‌ ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Tumakur

Wage Workers: ತುಮಕೂರಿನ ಶುಂಠಿ ಕ್ಯಾಂಪ್‌ನಲ್ಲಿ ಜೀತ ಪದ್ಧತಿ ಜೀವಂತ!

1-kunigal

Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ

Laxmi-Minister

Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.