![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 19, 2020, 5:22 AM IST
ಕಾಪು: ಕಾಪು ತಾಲೂಕು, ಪುರಸಭೆ ಸಹಿತವಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಳೆದ ಎರಡೂವರೆ ವರ್ಷಗಳಲ್ಲಿ ಯಾವುದೇ ರೀತಿಯ ಅನುದಾನವನ್ನು ತಾರದೆ, ಅಭಿವೃದ್ಧಿ ಪರ ತೀರ್ಮಾನಗಳನ್ನೂ ಕೈಗೆತ್ತಿಕೊಳ್ಳದೆ ಹೊಸ ಯೋಜನೆಗಳ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಪ್ರಯತ್ನಿಸದೇ ಇರುವುದನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮಾ.26ರಂದು ಪುರಸಭೆಯ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಕಾಪು ರಾಜೀವ ಭವನದಲ್ಲಿ ಮಾ. 17ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಅಧಿಕಾರಾವಧಿಯಲ್ಲಿ ತಂದ ಅನುದಾನವನ್ನು ಬೇರೆಡೆ ವರ್ಗಾಯಿಸಿ ಅದಕ್ಕೆ ಗುದ್ದಲಿ ಪೂಜೆ ನಡೆಸುವುದು, ಫ್ಲೆಕ್ಸ್ ಹಾಕಿಸುವಂತಹ ಕೆಲಸ ಮಾತ್ರ ಹಾಲಿ ಶಾಸಕರಿಂದ ನಡೆಯುತ್ತಿದೆ. ಅದು ಹೊರತು ಬೇರೇನೂ ನಡೆಯುತ್ತಿಲ್ಲ ಎಂದು ಅವರು ಆರೋಪಿಸಿದರು.
ಬೇಡಿಕೆ ಈಡೇರಿಕೆಗೆ
ಆಗ್ರಹಿಸಿ ಪ್ರತಿಭಟನೆ
ಕಾಪು ಪುರಸಭೆಗೆ ಮಂಜೂರಾದ ಅನುದಾನ ಬೇರೆಡೆ ವರ್ಗಾವಣೆಯಾಗುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ. ನಗರೋತ್ಥಾನ ಕಾಮಗಾರಿಗಳು ಕಳಪೆ ರೀತಿಯಲ್ಲಿ ನಡೆಯುತ್ತಿದ್ದು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು. ಅದರ ಜತೆಗೆ ಕಾಮಗಾರಿಗಳ ವಿಳಂಬ, ಕಾಮಗಾರಿಯ ಬದಲಾಯಿಸುವಿಕೆ, ಅನುದಾನ ವರ್ಗಾವಣೆ ಸಹಿತವಾಗಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ಮಾ. 26ರಂದು ಪ್ರತಿಭಟನೆ ನಡೆಯಲಿದೆ ಎಂದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ ಚಂದ್ರ ಸುವರ್ಣ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಸಾದಿಕ್, ಪಕ್ಷದ ಮುಖಂಡರಾದ ಡಾ| ದೇವಿಪ್ರಸಾದ್ ಶೆಟ್ಟಿ, ಮನಹರ್ ಇಬ್ರಾಹಿಂ, ಹರೀಶ್ ನಾಯಕ್, ದೀಪಕ್ ಎರ್ಮಾಳ್, ಸುನೀಲ್ ಬಂಗೇರ, ಅಮೀರುದ್ದೀನ್, ಪುರಸಭಾ ಸದಸ್ಯರಾದ ಕೆ. ಎಚ್. ಉಸ್ಮಾನ್, ಅಬ್ದುಲ್ ಹಮೀದ್, ಶಾಬು ಸಾಹೇಬ್, ಮಹಮ್ಮದ್ ಇಮ್ರಾನ್, ಸುರೇಶ್ ದೇವಾಡಿಗ, ಮಾಲಿನಿ ಶೆಟ್ಟಿ, ಸೌಮ್ಯ, ವಿಜಯಲಕ್ಷಿ$¾, ಅಶ್ವಿನಿ, ಸುಲೋಚನಾ ಬಂಗೇರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.