ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಕದನ ವಿರಾಮ ಘೋಷಿಸಿ


Team Udayavani, Mar 19, 2020, 6:30 AM IST

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಕದನ ವಿರಾಮ ಘೋಷಿಸಿ

ತಮ್ಮ ಸರ್ಕಾರ, ಕೋವಿಡ್ ತಡೆಗೆ ಬದ್ಧ ಎಂದು ಕಮಲ್‌ನಾಥ್‌ ಹೇಳುತ್ತಿದ್ದಾರಾದರೂ, ಅಲುಗುತ್ತಿರುವ ಕುರ್ಚಿಯ ಮೇಲೆ ಕುಳಿತು, ಜನರತ್ತ ಗಮನ ಕೊಡಲು ಅವರಿಗೆ ನಿಜಕ್ಕೂ ಸಾಧ್ಯವೇ? ಈ ಯುದ್ಧವೀಗ ನಿಲ್ಲಲೇಬೇಕಿದೆ. ಬಿಜೆಪಿ- ಕಾಂಗ್ರೆಸ್‌ ನಡುವೆ ಕದನವಿರಾಮ ಘೋಷಣೆಯಾಗಲೇಬೇಕಿದೆ.

ಇಡೀ ದೇಶವೇ ಕೋವಿಡ್ ವೈರಸ್‌ ವಿರುದ್ಧದ ಹೋರಾಟದಲ್ಲಿ ತೊಡಗಿದ್ದರೆ, ಅತ್ತ ಮಧ್ಯಪ್ರದೇಶದಲ್ಲಿ ಬೇರೆಯದ್ದೇ ಹೋರಾಟ ನಡೆದಿದೆ. ಅಧಿಕಾರಕ್ಕಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ಚದುರಂಗದಾಟ ನಡೆಸಿವೆ. ಕಾಂಗ್ರೆಸ್‌ ನಾಯಕ, ಮುಖ್ಯಮಂತ್ರಿ ಕಮಲ್‌ನಾಥ್‌ರ ಸರ್ಕಾರ ಅಲುಗಾಡುತ್ತಿದ್ದರೆ, ಇನ್ನೊಂದೆಡೆ ಜ್ಯೋತಿರಾದಿತ್ಯ ಸಿಂಧಿಯಾ, ಬಂಡಾಯ ಶಾಸಕರು ಮತ್ತು ಬಿಜೆಪಿ ಕೂಡಲೇ ಫ್ಲೋರ್‌ ಟೆಸ್ಟ್‌ ಆಗಬೇಕು ಎಂದು ಬಯಸುತ್ತಿದ್ದಾರೆ. ತಮ್ಮ ಸರ್ಕಾರ ಅಲುಗಾಡುತ್ತಿಲ್ಲ, ನಮ್ಮ ಬಳಿ ಸಂಖ್ಯಾಬಲವಿಲ್ಲ ಎನ್ನುವುದನ್ನು ಬಿಜೆಪಿ ರುಜುವಾತು ಮಾಡಲಿ ಎನ್ನುತ್ತಿದ್ದಾರೆ ಕಮಲ್‌ನಾಥ್‌. ಕಾಂಗ್ರೆಸ್‌ ತನ್ನ ಸಂಖ್ಯಾಬಲ ರುಜುವಾತ ಮಾಡಬೇಕೆಂದು ಬಿಜೆಪಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಒಟ್ಟಲ್ಲಿ, ಮಧ್ಯಪ್ರದೇಶದ ರಾಜಕೀಯ ಗದ್ದಲ ಇಷ್ಟಕ್ಕೇ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಬಂಡಾಯ ಶಾಸಕರ ತಂಡವೀಗ ರೆಸಾರ್ಟ್‌ ರಾಜಕಾರಣಕ್ಕೆ ಕುಖ್ಯಾತವಾದ ಬೆಂಗಳೂರಿನಲ್ಲಿ ಇದೆ. ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಮಲ್‌ನಾಥ್‌ ಸರಕಾರಕ್ಕೆ ವಿಶ್ವಾಸಮತ ಯಾಚಿಸಲು ಹತ್ತು ದಿನಗಳ ರಿಲೀಫ್ ಸಿಕ್ಕ ಕಾರಣ ಶಾಸಕರ ಮನವೊಲಿಕೆಗೆ ದಿಗ್ವಿಜಯ್‌ ಸಿಂಗ್‌ ಬೆಂಗಳೂರಿಗೆ ಆಗಮಿಸಿದ್ದರು. ಬುಧವಾರ ರೆಸಾರ್ಟ್‌ನಲ್ಲಿ ವಾಸ್ತವ್ಯವಿರುವ ಮಧ್ಯಪ್ರದೇಶ ಕೈ ನಾಯಕರ ಮನವೊಲಿಕೆಗೆ ಬಂದ ದಿಗ್ವಿಜಯ್‌ ಸಿಂಗ್‌ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರನ್ನು ಪೊಲೀಸರು ವಶಕ್ಕೆ ಪಡೆದದ್ದೂ ಸೇರಿದಂತೆ, ಹಲವು ಪ್ರಹಸನಗಳಿಗೆ ಬೆಂಗಳೂರು ಸಾಕ್ಷಿಯಾಯಿತು.

ಒಟ್ಟಲ್ಲಿ, ಈ ಪರಿಸ್ಥಿತಿ ನಿರ್ಮಾಣವಾಗಲು ಬಿಜೆಪಿಯ ಅಧಿಕಾರದಾಸೆಯೇ ಕಾರಣ ಎಂದು ಕಾಂಗ್ರೆಸ್‌ ದೂರುತ್ತಿದೆ. ಆದರೆ, ಇದೇ ವೇಳೆಯಲ್ಲೇ, ಈ ಪರಿಸ್ಥಿತಿಯನ್ನು ಖುದ್ದು ಕಮಲ್‌ನಾಥ್‌-ದಿಗ್ವಿಜಯ್‌ ಸಿಂಗ್‌ ಜೋಡಿ ಹಾಗೂ ಕಾಂಗ್ರೆಸ್‌ನ ಹೈಕಮಾಂಡ್‌(ಮುಖ್ಯವಾಗಿ ಸೋನಿಯಾ ಮತ್ತು ರಾಹುಲ್‌) ಮೈಮೇಲೆ ಎಳೆದುಕೊಂಡಿದ್ದಾರೆ ಎನ್ನುವುದನ್ನೂ ಕಾಂಗ್ರೆಸ್‌ ಒಪ್ಪಿಕೊಳ್ಳಬೇಕಿದೆ.

ಕಾಂಗ್ರೆಸ್‌ನಲ್ಲಿ ಗಾಂಧಿಯೇತರ ಯುವ ನಾಯಕರ ಏಳಿಗೆಯನ್ನು ಹೈಕಮಾಂಡ್‌ ಸಹಿಸುವುದಿಲ್ಲ ಎನ್ನುವ ಕೂಗೂ ಹೆಚ್ಚಾಗುವಂತೆ ಮಾಡಿದೆ ಈ ಇಡೀ ವಿದ್ಯಮಾನ. ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸಿಗಬೇಕಾಗಿದ್ದ ಗೌರವ, ಸ್ಥಾನಮಾನ ಸಿಕ್ಕಿದ್ದರೆ ಅವರು ಪಕ್ಷ ತೊರೆಯುವ ಪ್ರಮೇಯ ಎದುರಾಗುತ್ತಿರಲಿಲ್ಲವೇನೋ? ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಬಲವರ್ಧನೆಗಾಗಿ ದುಡಿದ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಬರಲು ಕಾರಣರಾದ ಸಿಂಧಿಯಾರನ್ನು ಕಾಂಗ್ರೆಸ್‌ ಕಡೆಗಣಿಸುತ್ತಲೇ ಬಂದು, ಇಂದು ಈ ಸ್ಥಿತಿ ನಿರ್ಮಿಸಿಕೊಂಡಿದೆ. ಕಾಂಗ್ರೆಸ್‌ ಮಾಡಿದ ತಪ್ಪಿನ ಲಾಭವನ್ನು ಬಿಜೆಪಿ ಚಾಣಾಕ್ಷತನದಿಂದ ಬಳಸಿಕೊಳ್ಳುತ್ತಿದೆ.

ಆದರೆ, ಇಲ್ಲಿ ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎನ್ನುವ ಚರ್ಚೆಗಿಂತ, ಇದರಿಂದ ಆಡಳಿತದ ಮೇಲೆ, ಸಾರ್ವಜನಿಕರ ಮೇಲೆ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಎನ್ನುವ ಪ್ರಶ್ನೆ ಎದುರಾಗುತ್ತದೆ. ಈ ರಾಜಕೀಯ ಹಗ್ಗಜಗ್ಗಾಟದಲ್ಲೇ ಮಧ್ಯಪ್ರದೇಶದ ನಾಯಕರು ವ್ಯಸ್ತರಾದರೆ, ಕೊರೊನಾದ ವಿರುದ್ಧ ಪ್ರಾಮಾಣಿಕ ಹೋರಾಟ ಸಾಧ್ಯವಾಗಬಲ್ಲದೆ? ಆದಾಗ್ಯೂ, ತಮ್ಮ ಸರ್ಕಾರ, ಕೋವಿಡ್‌-19 ತಡೆಗೆ ಬದ್ಧ ಎಂದು ಕಮಲ್‌ನಾಥ್‌ ಹೇಳುತ್ತಿದ್ದಾರಾದರೂ, ಅಲುಗುತ್ತಿರುವ ಕುರ್ಚಿಯ ಮೇಲೆ ಕುಳಿತು, ರಾಜ್ಯದ ಜನರ ಕಾಳಜಿಗೆ ಗಮನ ಕೊಡಲು ಅವರಿಗೆ ಸಾಧ್ಯವೇ? ಇಂಥ ದುರಿತ ಕಾಲದಲ್ಲಿ ಅವರನ್ನು ಕುರ್ಚಿಯಿಂದ ಕೆಡವಲೇಬೇಕು ಎಂಬ ಅವಸರವೇಕೆ ಬಿಜೆಪಿಗೆ? ಈ ಯುದ್ಧವೀಗ ನಿಲ್ಲಲೇಬೇಕಿದೆ. ಬಿಜೆಪಿ ಕಾಂಗ್ರೆಸ್‌ ನಡುವೆ ಕದನವಿರಾಮ ಘೋಷಣೆಯಾಗಲೇಬೇಕಿದೆ. ಮೊದಲು ಈ ಎರಡೂ ಪಕ್ಷಗಳ ನಾಯಕರು ಕೊರೊನಾ ವಿರುದ್ಧ ಜಯ ಸಾಧಿಸಲು ಪ್ರಯತ್ನಿಸಲಿ. ಆಮೇಲೆ, ಯಾರಾದರೂ ಅಧಿಕಾರಕ್ಕೆ ಬರಲಿ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health-insure

GST Revise: ಆರೋಗ್ಯ ವಿಮೆ ಪ್ರಯೋಜನ ಜನಸಾಮಾನ್ಯರಿಗೂ ಕೈಗೆಟುಕಲಿ

Raichuru-Manvi

Raichuru Accident: ಶಾಲಾ ಬಸ್‌: ಬೇಜವಾಬ್ದಾರಿ ಚಾಲನೆಗೆ ಕಠಿನ ಕ್ರಮ ಅಗತ್ಯ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

CBi

Investigation Agency: ಸಿಬಿಐ ಪ್ರಕರಣಗಳು ತ್ವರಿತ ವಿಲೇವಾರಿಯಾಗಲಿ

Film

South India Film Industry: ಸಿನೆಮಾ ರಂಗ ಕಳಂಕ ಮುಕ್ತವಾಗಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.