ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಖಾಸಗಿ ವ್ಯಕ್ತಿ ಬೀಗ

ಕರಡಿಗುಡ್ಡದ ಅಂಗನವಾಡಿ ಹಳೆ ಕಟ್ಟಡದಲ್ಲಿ ಚಿಕಿತ್ಸೆ „ ಆರೋಗ್ಯ ಇಲಾಖೆಗೆ ಹಸ್ತಾಂತರವಿಲ್ಲ 2014ರಲ್ಲೇ ನಿರ್ಮಿಸಿದ ಕಟ್ಟಡ

Team Udayavani, Mar 19, 2020, 12:23 PM IST

19-March-7

ಮಾನ್ವಿ: ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ 2014ರಲ್ಲಿ ನಿರ್ಮಿಸಿದ ಕಿರಿಯ ಆರೋಗ್ಯ ಸಹಾಯಕಿಯರ ಉಪ ಕೇಂದ್ರದ ಕಟ್ಟಡಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಬೀಗ ಜಡಿದಿದ್ದರಿಂದ ಇಲ್ಲಿನ ವೈದ್ಯರು ಹಳೇ ಅಂಗನವಾಡಿ ಕೇಂದ್ರದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಕೊಕ್ಲೃಕಲ್‌ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ನಂದಿಹಾಳ, ಹಿರೇಕೊಕ್ಲೃಕಲ್‌, ಸಂಗಾಪುರ, ಕರಡಿಗುಡ್ಡ ಸೇರಿ ನಾಲ್ಕು ಉಪ ಕೇಂದ್ರಗಳಿವೆ. ಕರಡಿಗುಡ್ಡ ಗ್ರಾಮದಲ್ಲಿ 2012-13ನೇ ಸಾಲಿನ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಯೋಜನೆಯಡಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಂಡಿದ್ದು, 2014ರಲ್ಲೇ ಪೂರ್ಣಗೊಂಡಿದೆ.

ಈಗಾಗಲೇ ಆರು ವರ್ಷಗಳೆ ಕಳೆದಿದ್ದರೂ ಇದುವರೆಗೆ ಗುತ್ತಿಗೆದಾರರು ಕಟ್ಟಡವನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಿಲ್ಲ. ಹೀಗಾಗಿ ಇಲ್ಲಿನ ವೈದ್ಯರಿಗೆ ಚಿಕಿತ್ಸೆ ನೀಡಲು ಸ್ಥಳಾವಕಾಶವಿಲ್ಲದಂತಾಗಿದೆ. ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷéದಿಂದ ಚಿಕಿತ್ಸಾ ಸೌಲಭ್ಯದಿಂದ ವಂಚಿತರಾಗುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಕಟ್ಟಡಕ್ಕೆ ಬೀಗ: ಕರಡಿಗುಡ್ಡ ಆರೋಗ್ಯ ಉಪ ಕೇಂದ್ರಕ್ಕೆ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರು ಬೀಗ ಜಡಿದಿದ್ದಾರೆ. ಕಟ್ಟಡ ಕಾಮಗಾರಿ ಗುತ್ತಿಗೆ ಪಡೆದ ಮೆಕೋ ಕನ್‌ ಸ್ಟ್ರಕ್ಷನ್ಸ್‌ ಬೇರೊಬ್ಬ ಗುತ್ತಿಗೆದಾರನಿಗೆ ಉಪ ಗುತ್ತಿಗೆ ನೀಡಿತ್ತು. ಉಪ ಗುತ್ತಿಗೆ ಪಡೆದ ಗುತ್ತೇದಾರರು ತಮ್ಮ ಬಳಿ ಸಾಲ ಪಡೆದುಕೊಂಡಿದ್ದಾರೆ. ಆತ ಸಾಲ ವಾಪಸ್‌ ನೀಡಿಲ್ಲ. ಹಣ ನೀಡಿದರೆ ಕಟ್ಟಡ ಬಿಟ್ಟುಕೊಡುವುದಾಗಿ ಖಾಸಗಿ ವ್ಯಕ್ತಿ ಹೇಳುತ್ತಿದ್ದಾರೆನ್ನಲಾಗಿದೆ. ಅಲ್ಲದೆ ಉಪ ಗುತ್ತೇದಾರ ಈಗಾಗಲೇ ಮೃತಪಟ್ಟಿದ್ದಾರೆ ಎಂಬ ಮಾತಗಳು ಕೇಳಿಬರುತ್ತಿವೆ. ಹೀಗಾಗಿ ಸಾಲ ನೀಡಿದ ಖಾಸಗಿ ವ್ಯಕ್ತಿಗೆ ಆರೋಗ್ಯ ಉಪ ಕೇಂದ್ರದ ಕಟ್ಟಡಕ್ಕೆ ಬೀಗ ಹಾಕಿಕೊಂಡಿದ್ದಾರೆ. ಕೇಳಿದರೆ ಜಗಳಕ್ಕೆ ಬರುತ್ತಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಅಂಗನವಾಡಿ ಕಟ್ಟಡದಲ್ಲಿ ಚಿಕಿತ್ಸೆ: ಕೇಂದ್ರ ಸರ್ಕಾರಿ ಇತ್ತೀಚೆಗೆ ಪ್ರತಿ 5 ಸಾವಿರ ಜನಸಂಖ್ಯೆ ಇರುವ ಆರೋಗ್ಯ ಉಪ ಕೇಂದ್ರಗಳಿಗೆ ಎಂಎಲ್‌ಎಚ್‌ಪಿ (ಮಿಡಲ್‌ ಲೆವಲ್‌ ಹೆಲ್ತ್‌ ಪ್ರೊವೈಡರ್‌) ಎಂಬ ವೈದ್ಯರನ್ನು ನೇಮಕ ಮಾಡಿದೆ. ಅದರಂತೆ ಕರಡಿಗುಡ್ಡ ಆರೋಗ್ಯ ಉಪ ಕೇಂದ್ರಕ್ಕೂ ಎಂಎಲ್‌ಎಚ್‌ಪಿ ನೇಮಕ ಮಾಡಲಾಗಿದೆ.

ಇವರಿಗೆ ಕಾರ್ಯ ನಿರ್ವಹಿಸಲು ಸ್ಥಳ ಇಲ್ಲದ್ದರಿಂದ ಗ್ರಾಮದ ಹಳೇ ಅಂಗನವಾಡಿ ಕಟ್ಟಡದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಅಲ್ಲದೆ ಆಸ್ಪತ್ರೆಗಾಗಿ ಬಾಡಿಗೆ ಕಟ್ಟಡ ಹುಡುಕುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನಾದರೂ ಆರೋಗ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಆಸ್ಪತ್ರೆ ಕಟ್ಟಡವನ್ನು ವಶಕ್ಕೆ ಪಡೆದು ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಆರೋಗ್ಯ ಇಲಾಖೆಯ ಆರೋಗ್ಯ ಉಪ ಕೇಂದ್ರ ಕಟ್ಟಡಗಳ ನಿರ್ಮಾಣಕ್ಕೆ ಪ್ಯಾಕೇಜ್‌ ಟೆಂಡರ್‌ ಪಡೆದುಕೊಂಡಿದ್ದೇವು. ಸಂಪೂರ್ಣ ಪ್ಯಾಕೇಜ್‌ ಕಾಮಗಾರಿಯನ್ನು ಇಲಾಖೆಗೆ ಹಸ್ತಾಂತರಿಸಿದ್ದೇವೆ. ಪ್ರತ್ಯೇಕವಾಗಿ ಒಂದೊಂದು ಕಟ್ಟಡಗಳನ್ನು ಹಸ್ತಾಂತರಿಸುವ ಅವಶ್ಯಕತೆ ಇಲ್ಲ. ಇಲಾಖೆ ಅಧಿಕಾರಿಗಳು ಮುಂದಾಗಿ ಕಟ್ಟಡ ವಶಕ್ಕೆ ಪಡೆದುಕೊಳ್ಳಬೇಕು. ನಮ್ಮದೇನೂ ಇಲ್ಲ.
ಎಂ.ಈರಣ್ಣ,
ಅಧ್ಯಕ್ಷರು, ಮೆಕೋ ಕನ್‌ಸ್ಟ್ರಕ್ಷನ್ಸ್‌, ಮಾನ್ವಿ

ಇದು ತುಂಬಾ ಹಳೇ ಪ್ರಕರಣವಾಗಿದೆ. ನನಗೆ ಸರಿಯಾದ ಮಾಹಿತಿ ಇಲ್ಲ. ಕರಡಿಗುಡ್ಡ ಆರೋಗ್ಯ ಉಪ ಕೇಂದ್ರದ ಬಗ್ಗೆ ಮಾನ್ವಿ ತಾಲೂಕು ವೈದ್ಯಾಧಿಕಾರಿಗಳ ಜೊತೆಗೆ ಚರ್ಚಿಸಿದ್ದೇನೆ. ಕಟ್ಟಡಕ್ಕೆ ಸಂಬಂಧಿ ಸಿದ ದಾಖಲೆಗಳನ್ನು ಪರಿಶೀಲಿಸಲಾಗುವುದು. ನಂತರ ಕಟ್ಟಡ ವಶಕ್ಕೆ ಪಡೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು.
ರಾಮಕೃಷ್ಣ,
ಜಿಲ್ಲಾ ವೈದ್ಯಾಧಿಕಾರಿ, ರಾಯಚೂರು

„ರವಿ ಶರ್ಮಾ

ಟಾಪ್ ನ್ಯೂಸ್

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.