ಕೋವಿಡ್-19; ರಾತ್ರೊರಾತ್ರಿ ಕಾಯ್ದೆ ಜಾರಿ- ವೈರಸ್ ಪತ್ತೆಗಾಗಿ ಇಸ್ರೇಲ್ ಡಿಜಿಟಲ್ ತಂತ್ರಜ್ಞಾನ

ಕೋವಿಡ್ 19 ಸೋಂಕು ಪೀಡಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಇಸ್ರೇಲ್ ತುರ್ತು ಕಾನೂನನ್ನು ದೇಶದಲ್ಲಿ ಜಾರಿಗೊಳಿಸಿದೆ

Team Udayavani, Mar 21, 2020, 12:58 PM IST

ಕೋವಿಡ್-19; ರಾತ್ರೊರಾತ್ರಿ ಕಾಯ್ದೆ ಜಾರಿ- ವೈರಸ್ ಪತ್ತೆಗಾಗಿ ಇಸ್ರೇಲ್ ಡಿಜಿಟಲ್ ತಂತ್ರಜ್ಞಾನ

Representative Image

ವಾಷಿಂಗ್ಟನ್: ಕೋವಿಡ್ 19 ವೈರಸ್ ಗೆ ಜಗತ್ತು ಬೆಚ್ಚಿಬಿದ್ದಿದ್ದು, ಮಾರಣಾಂತಿಕ ವೈರಸ್ ಗೆ ಲಸಿಕೆ ಕಂಡುಹಿಡಿಯಲು ವಿಜ್ಞಾನಿಗಳು ಕಾರ್ಯನಿರತರಾಗಿದ್ದು, ಏತನ್ಮಧ್ಯೆ ಕೋವಿಡ್ 19 ಸೋಂಕು ಪೀಡಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಇಸ್ರೇಲ್ ತುರ್ತು ಕಾನೂನನ್ನು ದೇಶದಲ್ಲಿ ಜಾರಿಗೊಳಿಸಿದೆ.

ರಾತ್ರೋರಾತ್ರಿ ಕಾನೂನು ಜಾರಿ:

ಇಸ್ರೇಲ್ ಕೋವಿಡ್ 19 ವೈರಸ್ ಪೀಡಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಜನರು ಬಳಸುವ ಮೊಬೈಲ್ ಫೋನ್ ಡಾಟಾವನ್ನು ಟ್ರ್ಯಾಕ್ ಮಾಡುವ ಕಾನೂನನ್ನು ಜಾರಿಗೆ ತಂದಿದೆ. ಬಿಬಿಸಿ ವರದಿ ಪ್ರಕಾರ, ಇಸ್ರೇಲ್ ಕ್ಯಾಬಿನೆಟ್ ಸದಸ್ಯರು ಇಡೀ ರಾತ್ರಿ ಚರ್ಚಿಸಿ ತುರ್ತು ಕಾನೂನನ್ನು ಪಾರ್ಲಿಮೆಂಟ್ ನ ಅನುಮತಿ ಪಡೆದು ಜಾರಿಗೊಳಿಸಿರುವುದಾಗಿ ತಿಳಿಸಿದೆ.

ಕೋವಿಡ್ 19 ವೈರಸ್ ಸೋಂಕು ಮಾರಿಯನ್ನು ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಮುಂದಾಗಿರುವುದಾಗಿ ಇಸ್ರೇಲ್ ತಿಳಿಸಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಫೇಸ್ ಬುಕ್ ಪೋಸ್ಟ್ ನಲ್ಲಿ, ನಾವು ಕೋವಿಡ್-19 ಸೋಂಕು ಪೀಡಿತರನ್ನು ಪತ್ತೆಹಚ್ಚುವ ಸಂಖ್ಯೆ ದಿಢೀರ್ ಹೆಚ್ಚಳಗೊಂಡಿದೆ. ಯಾರು ಸೋಂಕು ಪೀಡಿತರಾಗಿದ್ದಾರೋ ಅವರನ್ನು ಪ್ರತ್ಯೇಕವಾಗಿ ಇರಿಸಲಾಗುತ್ತಿದೆ. ನಾವು ಇಂದು ಡಿಜಿಟಲ್ ತಂತ್ರಜ್ಞಾನವನ್ನು ಬಳಕೆ ಮಾಡುತ್ತಿದ್ದೇವೆ. ಕೋವಿಡ್ 19 ಸೋಂಕು ಪೀಡಿತ ವ್ಯಕ್ತಿ ಎಲ್ಲಿದ್ದಾರೆ ಎಂಬುದನ್ನು ಮೊಬೈಲ್ ಡಾಟಾದ ಮೂಲಕ ಪತ್ತೆ ಹಚ್ಚುತ್ತಿದ್ದೇವೆ. ಈ ರೀತಿ ಪತ್ತೆ ಹಚ್ಚಲ್ಪಟ್ಟ ವ್ಯಕ್ತಿಗಳು 14 ದಿನ ಕ್ವಾರಂಟೈನ್ (ಪ್ರತ್ಯೇಕವಾಗಿ) ನಲ್ಲಿ ಇರಬೇಕು.

ಕೋವಿಡ್ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಳವಾಗಲಿದೆ. ಅದು ಎಷ್ಟು ಎಂಬುದು ನಾವು ಘೋಷಿಸಲಿದ್ದೇವೆ. ಕ್ವಾರಂಟೈನ್ ಎಂಬುದು ಶಿಫಾರಸ್ಸು ಅಲ್ಲ, ಆದರೆ ನಾವು ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಯಾಕೆಂದರೆ ಸೋಂಕು ತಡೆಗಟ್ಟಲು ಇದು ತುರ್ತು ಅಗತ್ಯ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.

ನಾನು ಆರೋಗ್ಯ ಸಚಿವಾಲಯಕ್ಕೆ ಸೂಚನೆ ನೀಡಿದ್ದೇನೆ, ಪ್ರತಿದಿನ 3000 ಸಾವಿರ ಮಂದಿಯನ್ನು ಪರೀಕ್ಷಿಸಬೇಕು ಎಂದು. ಇದು ಮುಂಬರುವ ದಿನಗಳಲ್ಲಿ 5 ಸಾವಿರಕ್ಕೆ ಏರಿಸುವ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಇದು ದಕ್ಷಿಣ ಕೊರಿಯಾಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಸಿದಂತಾಗಲಿದೆ ಎಂದು ಬೆಂಜಮಿನ್ ವಿಶ್ವಾಸವ್ಯಕ್ತಪಡಿಸಿದ್ದಾರೆ.

ಇಸ್ರೇಲ್ ನಲ್ಲಿ 200 ಮಂದಿಗೆ ಕೋವಿಡ್ -19 ವೈರಸ್ ಪೀಡಿತರಾಗಿರುವುದು ದೃಢವಾಗಿದೆ, 427 ಮಂದಿ ಸೋಂಕು ಪೀಡಿತರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

Covid test

China; ಮಾನವರಿಗೆ ಅಪಾಯಕಾರಿ 39 ವೈರಸ್‌ ಪತ್ತೆ

joe-bidden

Biden-Modi ದೂರವಾಣಿ ಮಾತುಕತೆ: ಬಾಂಗ್ಲಾ ಬಗ್ಗೆ ಕಳವಳ

canada

Canada; ಬೆಂಬಲ ಹಿಂಪಡೆದ ಎನ್‌ಡಿಪಿ: ಜಸ್ಟಿನ್‌ ಸರಕಾರಕ್ಕೆ ಸಂಕಷ್ಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.