![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-415x219.jpg)
ಕರ್ನಾಟಕ- ಕೇರಳ ಗಡಿ ಭಾಗದಲ್ಲಿ ಜನತಾ ಕರ್ಫ್ಯೂಗೆ ಬೆಂಬಲ: ಚೆಕ್ ಪಾಯಿಂಟ್ ಗಳಲ್ಲಿ ಕಟ್ಟೆಚ್ಚರ
Team Udayavani, Mar 22, 2020, 1:47 PM IST
![ಕರ್ನಾಟಕ- ಕೇರಳ ಗಡಿ ಭಾಗದಲ್ಲಿ ಜನತಾ ಕರ್ಫ್ಯೂಗೆ ಬೆಂಬಲ](https://www.udayavani.com/wp-content/uploads/2020/03/ullal-620x310.jpg)
ಉಳ್ಳಾಲ: ಜನತಾ ಕರ್ಪ್ಯೂಗೆ ಉಳ್ಳಾಲ ಸೇರಿದಂತೆ ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸಂಪೂರ್ಣ ಬಂದ್ ಆಗಿದೆ.
ತಲಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಪೂರ್ಣ ಬಂದ್ ಆಗಿದ್ದು ವಾಹನಗಳು ರಸ್ತೆಗೆ ಇಳಿದಿಲ್ಲ. ಹೆದ್ದಾರಿ ಸಂಪರ್ಕಿಸುವ ಕಲ್ಲಾಪು, ಆಡಂಕುದ್ರು, ತೊಕ್ಕೊಟ್ಟು, ಕಾಪಿಕಾಡು, ಕುಂಪಲ ಬೈಪಾಸ್, ಕೊಲ್ಯ, ಅಡ್ಕ, ಕೋಟೆಕಾರು, ಬೀರಿ, ಸೋಮೇಶ್ವರ ಉಚ್ಚಿಲ, ಕೆ. ಸಿ.ರೋಡ್, ತಲಪಾಡಿವರೆಗೆ ಎಲ್ಲಾ ಅಂಗಡಿ ಮುಗ್ಗಟ್ಟು ಮುಚ್ಚಿದ್ದು ವಾಹನಗಳು ರಸ್ತೆಗೆ ಇಳಿಯಲಿಲ್ಲ. ಕಾಸರಗೋಡುವಿನಿಂದ ಮಂಗಳೂರು ಕಡೆ ಆಗಮಿಸುವ ವಾಹನಗಳು ಸಂಪೂರ್ಣ ಸ್ಥಗಿತಗೊಂಡಿದೆ.
ಚೆಕ್ ಪಾಯಿಂಟ್ ಗಳಲ್ಲಿ ಕಟ್ಟೆಚ್ಚರ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಚೆಕ್ ಪೋಸ್ಟ್ ಗಳ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಆರೋಗ್ಯ ತಪಾಸಕರಿಗೆ ರಿಲೀಫ್ : ಕಳೆದ ಕೆಲವು ದಿನಗಳಿಂದ ಕೇರಳ ಕರ್ನಾಟಕ ಗಡಿ ಪ್ರದೇಶದಲ್ಲಿ ತಪಾಸಣೆ ನಡೆಸುತ್ತಿದ್ದ ಅರೋಗ್ಯ ಸಿಬಂದಿಗಳಿಗೆ ರವಿವಾರ ಜನತಾ ಕರ್ಪ್ಯೂನಿಂದ ರಿಲೀಫ್ ಸಿಕ್ಕಿದೆ. ನಿನ್ನೆ ಮಧ್ಯಾಹ್ನದಿಂದ ಗಢಿಪ್ರದೇಶದಲ್ಲಿ ಜನ ಸಂಚಾರ ವಾಹನ ಸಂಚಾರ ಸ್ಥಗಿತಗೊಂಡ ಬಳಿಕ ಸಿಬ್ಬಂದಿಗಳು ನಿರಾಳರಾದರೆ ಬಸ್ಸಿನಲ್ಲಿ ಆಗಮಿಸಿ ಗಡಿ ದಾಟುತ್ತಿದ್ದ ಪ್ರಯಾಣಿಕರಿಗೆ ತಪಾಸಣೆ ನಡೆಸಿಲ್ಲ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದರು.
ತಲಪಾಡಿ ಚೆಕ್ ಪೋಸ್ಟ್ ಹೊರತು ಪಡಿಸಿ ಬೇರೆ ಯಾವುದೇ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರೊಂದಿಗೆ ಆರೋಗ್ಯ ಸಿಬಂದಿಗಳು ಇರಲಿಲ್ಲ. ಗ್ರಾಮೀಣ ಪ್ರದೇಶ ಇದೇ ಮೊದಲ ಬಾರಿ ಸಂಪೂರ್ಣ ಸ್ಥಬ್ದವಾಗಿದೆ
ಟಾಪ್ ನ್ಯೂಸ್
![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-415x219.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ](https://www.udayavani.com/wp-content/uploads/2024/07/11-5-150x90.jpg)
Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ
![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-150x79.jpg)
Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ
![Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್ ವಿಳಂಬ: ಪದವಿ ಕೋರ್ಸ್ಗಳಿಂದ ವಿದ್ಯಾರ್ಥಿಗಳು ವಿಮುಖ](https://www.udayavani.com/wp-content/uploads/2024/07/vv-150x110.jpg)
Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್ ವಿಳಂಬ: ಪದವಿ ಕೋರ್ಸ್ಗಳಿಂದ ವಿದ್ಯಾರ್ಥಿಗಳು ವಿಮುಖ
![Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್](https://www.udayavani.com/wp-content/uploads/2024/07/Spl-google-150x99.jpg)
Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್
![Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್’ ಪ್ರವೇಶ ?](https://www.udayavani.com/wp-content/uploads/2024/07/DK-THE-150x76.jpg)
Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್’ ಪ್ರವೇಶ ?
MUST WATCH
ಹೊಸ ಸೇರ್ಪಡೆ
![Ronny](https://www.udayavani.com/wp-content/uploads/2024/07/Ronny-150x83.jpg)
Ronny; ಕಿರಣ್ ರಾಜ್ ನಟನೆಯ ಸಿನಿಮಾದ ಹಾಡು ಬಂತು
![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-150x79.jpg)
Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ
![Why did he ignore the BCCI instruction to play Ranji? Ishaan replied](https://www.udayavani.com/wp-content/uploads/2024/07/ishan-150x83.jpg)
IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್
![Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/haryana-150x84.jpg)
Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು
![Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ](https://www.udayavani.com/wp-content/uploads/2024/07/11-5-150x90.jpg)
Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.