ನ್ಯಾಯಾಲಯದಿಂದ ನಿರ್ಭಯಾ ಆತ್ಮಕ್ಕೆ ದೊರೆತಿದೆ ಶಾಂತಿ

ಬೀರೂರು ಮಾದಿಗ ಸಮಾಜ ಅಧ್ಯಕ್ಷ ಆನಂದ್‌ ಅಭಿಮತ

Team Udayavani, Mar 22, 2020, 5:48 PM IST

22-March-21

ಬೀರೂರು: ದೆಹಲಿಯಲ್ಲಿ ಏಳು ವರ್ಷಗಳ ಹಿಂದೆ ನಡೆದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆಗೆ ಸಂಬಂ ಧಿಸಿದಂತೆ ನ್ಯಾಯಾಲಯ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ, ನಿರ್ಭಯಾ ಆತ್ಮಕ್ಕೆ ಶಾಂತಿ ದೊರಕಿಸಿದೆ ಎಂದು ಬೀರೂರು ಮಾದಿಗ ಸಮಾಜ ಅಧ್ಯಕ್ಷ ಆನಂದ್‌ ಹೇಳಿದರು.

ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಸರಸ್ವತಿಪುರಂ ಬಡಾವಣೆಯ ಅಂಬೇಡ್ಕರ್‌ ಸಮುದಾಯ ಭವನದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮ ಆಚರಿಸಿ ಮಾತನಾಡಿದರು.

ಹೆಣ್ಣು ಮಗಳೊಬ್ಬಳು ಒಬ್ಬಂಟಿಯಾಗಿ ರಾತ್ರಿ ಸಮಯದಲ್ಲಿ ಸಂಚರಿಸಿದಾಗ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದಿರುವುದು ಅರ್ಥಪೂರ್ಣವಾಗುತ್ತದೆ ಎಂಬ ಮಹಾತ್ಮ ಗಾಂಧೀಜಿಯವರ ಕನಸು ಕನಸಾಗಿಯೇ ಉಳಿದಿದೆ. ನ್ಯಾಯಾಲಯ ಹೆಣ್ಣಿಗೆ ಆಗಿದ್ದ ಅನ್ಯಾಯಕ್ಕೆ ಮತ್ತು ಅನ್ಯಾಯ ಮಾಡಿದವರಿಗೆ ತಕ್ಕ ಪಾಠ ಕಲಿಸಿ, ಮುಂದೆ ಇಂತಹ ಅಚಾತುರ್ಯಗಳಿಗೆ ಕಡಿವಾಣ ಹಾಕಿದೆ. ಅಲ್ಲದೇ, ಮುಂದೆ ನಡೆಯದ ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದರು.

ಹೆಣ್ಣು ಅಬಲೆಯಲ್ಲ. ಅವಳು ಒಲಿದರೆ ನಾರಿ-ಮುನಿದರೆ ಮಾರಿ ಎಂಬ ನಾಣ್ಣುಡಿಯನ್ನು ನೆನೆದು, ಒಬ್ಬ ಗಂಡಿಗೆ ತಾಯಿ, ಹೆಂಡತಿ, ತಂಗಿ, ಅಕ್ಕ ಹೀಗೆ ನಾನಾ ರೀತಿಯ ರೂಪ ತಾಳುವ ಆಕೆಯನ್ನು ಪೂಜಿಸಬೇಕೆ ಹೊರತು, ಆಕೆಯನ್ನು ಕೆಟ್ಟ ದೃಷ್ಟಿಯಿಂದ ನೋಡಬಾರದು. ನ್ಯಾಯಾಲಯ ಹೆಣ್ಣಿನ ಶೋಷಣೆಯ ವಿರುದ್ಧ ತೆಗೆದುಕೊಂಡಿರುವ ತೀರ್ಪು ಶ್ಲಾಘನೀಯ ಎಂದರು.

ಪುರಸಭೆ ನೂತನ ಸದಸ್ಯೆ ಶಾರದಾ ರುದ್ರಪ್ಪ ಮಾತನಾಡಿ, 13 ದಿನಗಳ ಕಾಲ ಆ ಹೆಣ್ಣು ಮಗಳು ಅನುಭವಿಸಿದ ಕಷ್ಟವನ್ನು ಆ ಕಾಮುಕರು ಅನುಭವಿಸಬೇಕಿತ್ತು. ಅಂದೇ ಅವರಿಗೆ ಗುಂಡು ಹಾರಿಸಿ ನಿರ್ಭಯಾಳಿಗೆ ನ್ಯಾಯ ಒದಗಿಸಬಹುದಿತ್ತು. ಆದರೆ 7 ವರ್ಷಗಳ ಬಳಿಕ ಗಲ್ಲು ಶಿಕ್ಷೆ ವಿಧಿಸಿರುವುದು ದೇಶದ ಮಹಿಳೆಯರಿಗೆ ಆತ್ಮಸ್ಥೈರ್ಯ ಹೆಚ್ಚಿಸಿದೆ. ನಮ್ಮ ಕಾವಲಿಗೆ ದೇಶದ ಕಾನೂನು ಬದ್ಧವಾಗಿದೆ. ನ್ಯಾಯಾಲಯದ ತೀರ್ಪು ಮುಂದೆ ಯಾರೊಬ್ಬರೂ ಹೆಣ್ಣಿನ ಮೇಲೆ ಅತ್ಯಾಚಾರಕ್ಕೆ ಮುಂದಾಗುವಾಗ ಯೋಚಿಸಬೇಕು ಎಂದು ನಿಟ್ಟುಸಿರು ಬಿಟ್ಟರು.

ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರದ ಅಭಿಲಾಷ, ಆಶಾ, ಸರೋಜಾ, ಶೈಲಜಾ, ಶಿವಮ್ಮ, ಶ್ರೀಗಂಧ, ಜಯಮ್ಮ, ದೀಪಾ ಮತ್ತು ಪ್ರತಾಪ, ನವೀನ್‌, ಸುರೇಶ್‌, ಮದನ್‌, ಕಿರಣ್‌, ಶಿವು ಹಾಗೂ ಮೈಲಾರಲಿಂಗ ಸ್ವಾಮಿ ಯುವಕ ಸಂಘದ ಸದಸ್ಯರು, ಅಂಬೇಡ್ಕರ್‌ ಯುವಕ ಸಂಘದ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chikkamagaluru

Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

3-kottigehara

Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.