ಹಾಸನದಲ್ಲಿ ಜನತಾ ಕರ್ಫ್ಯೂಗೆ ಅಭೂತಪೂರ್ವ ಬೆಂಬಲ


Team Udayavani, Mar 23, 2020, 3:00 AM IST

hassanadalli

ಹಾಸನ: ಕೊರೊನಾ ವೈರಸ್‌ ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರಮೋದಿ ಅವರ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಭಾನುವಾರ ಹಾಸನ ಜಿಲ್ಲೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಸಂಜೆ 5 ಗಂಟೆಗೆ ಮನೆಯಿಂದ ಹೊರ ಬಂದ ಜನರು ಚಪ್ಪಾಳೆ, ಗಂಟೆ ಬಾರಿಸಿ, ಶಂಖ ಊದಿ ಕೊರೊನಾ ಶಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.

ಬೆಳಗ್ಗೆ ಹಾಲಿನ ಮಳಿಗೆಗಳು ಮತ್ತು ಔಷಧಿ ಅಂಗಡಿಗಳು ತೆರೆದಿದ್ದು ಬಿಟ್ಟರೆ ಇಡೀ ದಿನ ವ್ಯಾಪಾರ ವಹಿವಾಟು ಸ್ತಬ್ಧವಾಗಿತ್ತು, ಮಧ್ಯಾಹ್ನದ ವೇಳೆಗೆ ಔಷಧಿ ಅಂಗಡಿಗಳೂ ಮುಚ್ಚಿದ್ದವು. ರೈಲು ಸಂಚಾರ, ಬಸ್‌ ಸಂಚಾರ ಸ್ಥಗಿತವಾಗಿದ್ದರಿಂದ ರೈಲ್ವೆ ನಿಲ್ದಾಣ, ಸಾರಿಗೆ ಬಸ್‌ ನಿಲ್ದಾಣ, ಖಾಸಗಿ ವಾಹನ ನಿಲ್ದಾಣಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು.

ರಸ್ತೆಗಳು ಖಾಲಿ: ವಾಹನಗಳು, ಜನರಿಂದ ಗಿಜಿಗಿಡುತ್ತಿದ್ದ ಹಾಸನದ ಬಿ.ಎಂ.ರಸ್ತೆ, ಎನ್‌.ಆರ್‌.ವೃತ್ತ, ನಗರ ಸಾರಿಗೆ ಬಸ್‌ ನಿಲ್ದಾಣ ರಸ್ತೆ, ಹಿಮ್ಸ್‌ ಆಸ್ಪತ್ರೆ ಆವರಣ ಸೇರಿದಂತೆ ಪ್ರಮುಖ ರಸ್ತೆಗಳು, ಕಟ್ಟಿನಕೆರೆ ತರಕಾರಿ ಮಾರುಕಟ್ಟೆ ಸೇರಿದಂತೆ ಪ್ರಮುಖ ಸ್ಥಳಗಳು ಜನರಿಲ್ಲದೇ ಖಾಲಿಯಾಗಿದ್ದವು. ಪೂರ್ವಭಾವಿ ನಿರ್ಧಾರದಂತೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ, ರೈಲುಗಳ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಟ್ಯಾಕ್ಸಿಗಳ ಸಂಚಾರವೂ ಇರಲಿಲ್ಲ. ಆಟೋಗಳ ಸಂಚಾರ ವಿರಳವಾಗಿತ್ತು.

ಮಾರುಕಟ್ಟೆ ಬಂದ್‌: ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಮಾತ್ರ ಅವಕಾಶವಿತ್ತು. ಹಾಸನದ ಚರ್ಚ್‌ಗಳಲ್ಲಿ ಜನರು ಪ್ರಾರ್ಥನೆಗೆ ಸೇರಲಿಲ್ಲ. ಜಿಲ್ಲಾ ಕ್ರೀಡಾಂಗಣದ ಗೇಟಿಗೆ ಬೀಗ ಹಾಕಲಾಗಿತ್ತು. ನಗರದ ಹೃದಯ ಭಾಗದಲ್ಲಿರುವ ಕಟ್ಟಿನ ಮಾರುಕಟ್ಟೆ ಸಂಪೂರ್ಣ ಬಂದ್‌ ಮಾಡಿದ್ದರು.

ಬಾಳೆಹಣ್ಣು ವರ್ತಕರು ಕೂಡ ಬೆಂಬಲ ಸೂಚಿಸಿ ವ್ಯಾಪಾರ ಮಾಡಲಿಲ್ಲ. ಮಹಾರಾಜ ಉದ್ಯಾನದ ಬಳಿ ಇರುವ ಹೇಮಾವತಿ ಪ್ರತಿಮೆ ಮುಂಭಾಗದ ಪ್ರದೇಶವೂ ಬಿಕೋ ಎನ್ನುತ್ತಿತ್ತು. ಕೊರೊನಾ ಮಹಾ ಮಾರಿಯನ್ನು ತಡೆಗಟ್ಟಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆಗೆ ಜನರು ಜನರು ಸ್ವಯಂ ಪ್ರೇರಿತವಾಗಿ ಸ್ಪಂದಿಸಿ ಜನತಾ ಕರ್ಫ್ಯೂ ಯಸ್ವಿಗೊಳಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.