ಕೆಂಭಾವಿಯಲ್ಲಿ ದೇವಸ್ಥಾನಗಳಿಗೂ ಬೀಗ


Team Udayavani, Mar 23, 2020, 5:02 PM IST

23-March-25

ಕೆಂಭಾವಿ: ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಪಟ್ಟಣ ಸೇರಿದಂತೆ ವಲಯದ ಹಲವು ಗ್ರಾಮಗಳಲ್ಲಿ ಬೆಂಬಲ ವ್ಯಕ್ತವಾಯಿತು. ಪಟ್ಟಣದಲ್ಲಿ ಬೆಳಗ್ಗೆಯಿಂದ ಸಂಜೆ ವರೆಗೂ ಅಂಗಡಿಗಳು, ಮಾಲ್‌ಗ‌ಳು, ಮದ್ಯದಂಗಡಿಗಳು, ಲಾಡ್ಜ್ಗಳು, ಫುಟ್‌ಪಾತ್‌ ವ್ಯಾಪಾರಿಗಳು, ಆಟೋ ಮೊಬೈಲ್‌, ಗ್ಯಾರೇಜ್‌, ಖಾಸಗಿ ವಾಹನಗಳು ಸೇರಿದಂತೆ ಎಲ್ಲ ರೀತಿ ಸೇವೆ ಸ್ಥಗಿತಗೊಳಿಸುವ ಮೂಲಕ ಪ್ರಧಾನಿ ಕರೆ ನೀಡಿದ್ದ ಕರ್ಫ್ಯೂಗೆ ಜನರು ಸಂಪೂರ್ಣ ಬೆಂಬಲ ಸೂಚಿಸಿದರು.

ಉತ್ತರಾದಿ ಮಠದ ಯತಿಚತುಷ್ಠಯರ ವೃಂದಾವನ, ಹಿರೇಮಠದ ಗದ್ದುಗೆ, ಭೊಗೇಶ್ವರ ದೇವಸ್ಥಾನ, ಬಜಾರ್‌ ಬಲಭೀಮಸೇನ ದೇವಸ್ಥಾನ, ಶರಣಬಸವೇಶ್ವರ, ರೇವಣಸಿದ್ದೇಶ್ವರ, ಸಿದ್ದೇಶ್ವರ ಹಾಗೂ ಕಾಶಿ ವಿಶ್ವನಾಥ ದೇವಸ್ಥಾನಗಳಲ್ಲಿ ಅರ್ಚಕರು ಬೆಳಗ್ಗೆ ಬೇಗ ಪೂಜೆ ನೆರವೇರಿಸಿ 7 ಗಂಟೆಯಿಂದ ದೇವಸ್ಥಾನಕ್ಕೆ ಬೀಗ ಹಾಕುವ ಮೂಲಕ ಜನತಾ ಕರ್ಫ್ಯೂಗೆ ಬೆಂಬಲ ನೀಡಿದರು.

ಹಜರತ್‌ ಚಚ್ಚಾ ಮಾಸಾಬಿ ದರ್ಗಾ ಸೇರಿದಂತೆ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಬೇಗ ಪ್ರಾರ್ಥನೆ ಸಲ್ಲಿಸುವ ಮೂಲಕ ತಮ್ಮ ಬೆಂಬಲ ಸೂಚಿಸಿದರು. ದಿನನಿತ್ಯ ಸದಾ ವಾಹನಗಳಿಂದ ಜುಣುಗುಡುತ್ತಿದ್ದ ಉತ್ತರಾದಿ ಮಠದ ರಸ್ತೆಯಲ್ಲಿ ಯಾವುದೇ ವಾಹನ ಸಂಚರಿಸದೆ ಭಣಗುಡುತ್ತಿತ್ತು. ಮುಖ್ಯ ಬಜಾರ್‌, ಡಾ| ಅಂಬೇಡ್ಕರ್‌ ವೃತ್ತ, ಹಳೆ ಬಸ್‌ ನಿಲ್ದಾಣ, ಎಸ್‌ಬಿಐ ವೃತ್ತ, ಅಂಬಿಗರ ಚೌಡಯ್ಯ ವೃತ್ತ, ಹನುಮಾನ ಚೌಕ್‌, ಟಿಪ್ಪು ಸುಲ್ತಾನ್‌ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಹಲವು ಭಾಗಗಳ ರಸ್ತೆಗಳು ಜನರಿಲ್ಲದೆ ಭಣಗುಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಪೊಲೀಸರು ಯಾವುದೇ ಒತ್ತಡ ಹೇರದೆ ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ಸ್ವಯಂ ಪ್ರೇರಣೆಯಿಂದ ಬಂದ್‌ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಗ್ರಾಪಂ ಕೇಂದ್ರ ಸ್ಥಾನಗಳಾದ ಯಕ್ತಾಪುರ, ಯಾಳಗಿ, ಮಲ್ಲಾ, ಏವೂರ, ಮಾಲಗತ್ತಿ, ಕಿರದಳ್ಳಿ, ಹೆಗ್ಗನದೊಡ್ಡಿ, ಕರಡಕಲ್‌, ನಗನೂರ, ಮುದನೂರ, ಬೈಚಬಾಳ ಗ್ರಾಮಗಳಲ್ಲಿಯೂ ಜನತೆ ಮನೆಯಿಂದ ಹೊರಗೆ ಬಾರದೆ ಜನತಾ ಕರ್ಫ್ಯೂಗೆ ತಮ್ಮ ಬೆಂಬಲ ಸೂಚಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆತ್ಮ ಶುದ್ಧಿಯಿಂದ ಬದುಕು ಸುಂದರ- ಶ್ರೀ ವಿಶ್ವಾರಾಧ್ಯ ಮಠ

ಆತ್ಮ ಶುದ್ಧಿಯಿಂದ ಬದುಕು ಸುಂದರ- ಶ್ರೀ ವಿಶ್ವಾರಾಧ್ಯ ಮಠ

ಬಿಜೆಪಿಯವರು ಆಪರೇಷನ್ ಕಮಲ ಬಿಡಲಿ: ಸಚಿವ ದರ್ಶನಾಪುರ

Yadagiri; ಬಿಜೆಪಿಯವರು ಆಪರೇಷನ್ ಕಮಲ ಬಿಡಲಿ: ಸಚಿವ ದರ್ಶನಾಪುರ

darshanapur

Yadagiri; ಅತಿವೃಷ್ಠಿಯಿಂದಾದ ಹಾನಿ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ: ಸಚಿವ ದರ್ಶನಾಪುರ

1-rrr

Yadgir: ಮಳೆಗೆ ಗೋಡೆ ಕುಸಿದು ವೃದ್ಧೆ ಸಾವು

1-nary

Narayanapura : ನದಿಯಲ್ಲಿ ಈಜಲು ಹೋದ ಯುವಕ ನೀರು ಪಾಲು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.