ಕೋವಿಡ್ 19 ಭಯವಿಲ್ಲದೇ ಜನರ ಸಂಚಾರ!


Team Udayavani, Mar 25, 2020, 2:59 PM IST

ಕೋವಿಡ್ 19 ಭಯವಿಲ್ಲದೇ ಜನರ ಸಂಚಾರ!

ಮಂಡ್ಯ: ರಾಜ್ಯದಲ್ಲಿ ಕೋವಿಡ್ 19 ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನೂ ಲೆಕ್ಕಿಸದೆ ನಗರದೊಳಗೆ ಸಂಚಾರಕ್ಕಿಳಿದ ಜನರನ್ನು ಪೊಲೀಸರೇ ಮಧ್ಯಪ್ರವೇಶಿಸಿ ನಿಯಂತ್ರಿಸಿದರು.

ಯುಗಾದಿ ಹಬ್ಬದ ಮುನ್ನಾ ದಿನವಾದ ಮಂಗಳವಾರ ಅಗತ್ಯ ವಸ್ತುಗಳ ಖರೀದಿಗೆ ಜನರು ಬೆಳಗ್ಗೆಯೇ ಮುಗಿಬಿದ್ದಿದ್ದರು. ತರಕಾರಿ ಮಾರುಕಟ್ಟೆಯಲ್ಲಿ ನೂರಾರು ಜನರು ಜಮಾಯಿಸಿದ್ದರು. ಸಿಕ್ಕ ಸಿಕ್ಕ ಜಾಗದಲ್ಲೆಲ್ಲಾ ವಾಹನಗಳನ್ನು ನಿಲ್ಲಿಸಿ ಹಬ್ಬದ ಸಾಮಾನುಗಳ ಖರೀದಿಯಲ್ಲಿ ತೊಡಗಿಸಿಕೊಂಡಿದ್ದರು.

ರಸ್ತೆಗಿಳಿದ ಪೊಲೀಸರು: ನಗರದ ಪ್ರಮುಖ ರಸ್ತೆಗಳಲ್ಲಿ ಅನೇಕ ವರ್ತಕರು, ವ್ಯಾಪಾರಸ್ಥರು ಅಂಗಡಿ ಬಾಗಿಲುಗಳನ್ನು ತೆರೆದುಕೊಂಡು ವ್ಯಾಪಾರ ವಹಿವಾಟಿನಲ್ಲಿ ನಿರತರಾಗಿದ್ದರು. ಹಲವರು ರಸ್ತೆಗಳ ಬದಿಯಲ್ಲಿ ಅನಗತ್ಯವಾಗಿ ನಿಂತು ಚರ್ಚಿಸುತ್ತಿದ್ದರು. ನಗರದ ಸ್ಥಿತಿಯ ಪರಾಮರ್ಶೆ ನಡೆಸಿದ್ದರು.

ನಗರದೊಳಗೆ ಜನಸಂದಣಿ ಹೆಚ್ಚುತ್ತಿರುವುದನ್ನು ಕಂಡ ಪೊಲೀಸರು ವಾಹನಗಳ ಮೂಲಕ ರಸ್ತೆಗಿಳಿದರು. ಪ್ರಮುಖ ರಸ್ತೆಗಳಲ್ಲಿ ಸಂಚಾರ ನಡೆಸಿ ತೆರೆದಿದ್ದ ಅಂಗಡಿ ಮುಂಗಟ್ಟುಗಳನ್ನೆಲ್ಲಾ ಮುಚ್ಚಿಸಲಾರಂಭಿಸಿದರು. ರಸ್ತೆಗಳು, ಉದ್ಯಾನವನಗಳಲ್ಲಿ ನಿಂತಿದ್ದ ಜನರನ್ನು ಗದರಿಸಿ ಅಲ್ಲಿಂದ ತೆರಳುವಂತೆ ಸೂಚನೆ ನೀಡಿದರು. ಬೇಕರಿಗಳು, ಔಷಧ ಅಂಗಡಿಗಳು, ಕ್ಲಿನಿಕ್‌ಗಳು, ದಿನಸಿ ಅಂಗಡಿಗಳು ಸೇರಿದಂತೆ ಹಲವಾರು ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಜನರಿರುವುದನ್ನು ಕಂಡ ಪೊಲೀಸರು ಆದಷ್ಟು ಬೇಗ ಜನರನ್ನು ಸ್ಥಳದಿಂದ ತೆರವುಗೊಳಿಸುವಂತೆ ಸೂಚಿಸಿದರಲ್ಲದೆ ಬೇಕರಿಗಳು, ದಿನಸಿ ಅಂಗಡಿಗಳನ್ನು ಬಂದ್‌ ಮಾಡಿಸಿದರು.

ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವಿರಳವಾಗಿದ್ದವು. ಬೆಳಗ್ಗೆ 11 ಗಂಟೆ ಸಮಯಕ್ಕೆ ರಸ್ತೆಗಳಲ್ಲಿ ಜನಸಂಚಾರವೂ ಕ್ಷೀಣಿಸಿತು. ಪೊಲೀಸರಿಗೆ ಹೆದರಿ ಹಲವಾರು ಜನರು ಮನೆ ಸೇರಿಕೊಂಡರು. ಇದರಿಂದ ಬಹುತೇಕ ರಸ್ತೆಗಳು ಖಾಲಿ ಖಾಲಿಯಾಗಿ ಕಾಣಿಸುತ್ತಿದ್ದವು. ದ್ವಿಚಕ್ರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿದ್ದುದು ಕಂಡುಬಂದಿತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.