![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 25, 2020, 5:15 PM IST
Representative Image
ನವದೆಹಲಿ: ಭಾರತ ಸೇರಿದಂತೆ ವಿಶ್ವವನ್ನೇ ಕೋವಿಡ್ 19 ಮಹಾಮಾರಿ ತಲ್ಲಣ ಮೂಡಿಸಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದು, ಇದರಿಂದಾಗಿ ದೇಶಕ್ಕೆ 9 ಲಕ್ಷ ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
21 ದಿನಗಳ ಲಾಕ್ ಡೌನ್ ನಿಂದ 120 ಬಿಲಿಯನ್ ಅಮೆರಿಕನ್ ಡಾಲರ್ (ಅಂದಾಜು 9ಲಕ್ಷ ಕೋಟಿ)ನಷ್ಟು ನಷ್ಟವಾಗಲಿದ್ದು, ಇದು ದೇಶದ ಜಿಡಿಪಿ ಶೇ.4ಕ್ಕೆ ಸಮನಾಗಲಿದೆ ಎಂದು ವಿವರಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಕೂಡಾ ನಿಗದಿಯಂತೆ ಏಪ್ರಿಲ್ 3ರಂದು ಮೊದಲ ದ್ವೈಮಾಸಿಕ ನೀತಿ ಪರಿಶೀಲನೆ ಘೋಷಿಸಲಿದ್ದು, ಇದರಲ್ಲಿ ಆರ್ಥಿಕ ನಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ಭಾರೀ ದರ ಕಡಿತ ಮಾಡಲಿದೆ ಎಂದು ತಜ್ಞರು ತಿಳಿಸಿದ್ದಾರೆ.
ಕೋವಿಡ್ 19 ವೈರಸ್ ಕ್ಷಿಪ್ರವಾಗಿ ಹರಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದಲ್ಲಿ ಮೂರು ವಾರಗಳ ಲಾಕ್ ಡೌನ್ ಘೋಷಿಸಿದ್ದರು. ಬುಧವಾರ ಈಕ್ವಿಟಿ ಮಾರ್ಕೆಟ್ ವಹಿವಾಟು ಕೂಡಾ ಭಾರೀ ಇಳಿಕೆ ಕಂಡಿರುವುದಾಗಿ ವರದಿ ತಿಳಿಸಿದೆ.
ಮೂರು ವಾರಗಳ ಲಾಕ್ ಡೌನ್ ಒಂದರಿಂದಲೇ 90 ಬಿಲಿಯನ್ ಅಮೆರಿಕನ್ ಡಾಲರ್ ಕ್ಕಿಂತಲೂ ಹೆಚ್ಚು ನಷ್ಟವಾಗಲಿದ್ದು, ಈಗಾಗಲೇ ಮಹಾರಾಷ್ಟ್ರ, ಕೇರಳ ರಾಜ್ಯಗಳು ಘೋಷಿಸಿರುವ ಲಾಕ್ ಡೌನ್ ನಿಂದ ಇನ್ನಷ್ಟು ನಷ್ಟವಾಗಿರುವುದಾಗಿ ವರದಿ ವಿವರಿಸಿದೆ. ಆರ್ ಬಿಐ ಏಪ್ರಿಲ್ ರಿವ್ಯೂನಲ್ಲಿ 0.65ರಷ್ಟು ದರ ಕಡಿತಗೊಳಿಸುವ ಸಾಧ್ಯತೆ ಇದೆ. ಅಲ್ಲದೇ ಶೇ.1ರಷ್ಟು ಬಡ್ಡಿದರ ಕಡಿತಗೊಳಿಸುವ ಸಾಧ್ಯತೆ ಇದ್ದಿರುವುದಾಗಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.