ಕೋವಿಡ್ ವೈರಸ್ ಬೀದಿಗಿಳಿದು ಬಂದು ಬೈಕ್ ಸವಾರರಿಗೆ ಬುದ್ದಿ ಹೇಳಿದಾಗ!
Team Udayavani, Mar 27, 2020, 10:31 PM IST
ಚೆನ್ನೈ: ಮಹಾಮಾರಿ ಕೋವಿಡ್ 19 ದೇಶಾದ್ಯಂತ ವ್ಯಾಪಿಸಿರುವಂತೆಯೇ ಇದನ್ನು ತಡೆಗಟ್ಟಲು ಕೇಂದ್ರ ಸರಕಾರ 21 ದಿನಗಳ ಕಂಪ್ಲೀಟ್ ಲಾಕ್ ಡೌನ್ ಘೋಷಿಸಿದೆ. ಆದರೂ ಜನರು ಬೀದಿಗಿಳಿಯುವುದು ಮತ್ತು ಸೂಕ್ತ ಅಂತರ ಕಾಪಾಡಿಕೊಳ್ಳದೇ ಮಾರುಕಟ್ಟೆಗಳಲ್ಲಿ ಜನಸಂದಣಿಯಲ್ಲಿ ಹೋಗುವುದನ್ನು ತಡೆಯಲು ಕಷ್ಟವಾಗುತ್ತಿದೆ.
ಪೊಲೀಸರು ಸಹ ಈ ವಿಚಾರದಲ್ಲಿ ಜನರಿಗೆ ತಿಳಿಹೇಳಿ ಬೇಸತ್ತಿದ್ದಾರೆ. ಕೆಲವು ಕಡೆಗಳಲ್ಲಿ ಇಂತವರಿಗೆ ಪೊಲೀಸರು ಲಾಠಿ ರುಚಿಯನ್ನೂ ಸಹ ತೋರಿಸಿಯಾಗಿದೆ. ಇನ್ನು ಕೆಲವು ಕಡೆಗಳಲ್ಲಿ ಮನೆಯಲ್ಲಿ ಕಳಿತುಕೊಳ್ಳದೇ ಬಿದಿಗಿಳಿಯುವ ಜನರಲ್ಲಿ ಪೊಲೀಸರು ಕೈ ಮುಗಿದು ಮನೆಯಲ್ಲೇ ಇರುವಂತೆ ಕೇಳಿಕೊಳ್ಳುತ್ತಿದ್ದಾರೆ.
ಇತ್ತ ತಮಿಳುನಾಡು ಪೊಲೀಸರು ವಿನೂತನವಾದ ವಿಧಾನವೊಂದನ್ನು ಪ್ರಯೋಗಿಸುತ್ತಿದ್ದಾರೆ. ಚೆನ್ನೈನ ರಸ್ತೆಯೊಂದರಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಕೋವಿಡ್ ವೈರಸ್ 19 ಸ್ವರೂಪವನ್ನು ಹೋಲುವ ಹೆಲ್ಮೆಟ್ ಒಂದನ್ನು ಧರಿಸಿಕೊಂಡು ಲಾಕ್ ಡೌನ್ ನಿಯಮ ಉಲ್ಲಂಘಿಸುವವರನ್ನು ತಡೆದು ಅವರಿಗೆ ಬುದ್ದಿವಾದ ಹೇಳುವ ಕೆಲಸವನ್ನು ಮಾಡುತ್ತಿದ್ದಾರೆ.
Meanwhile, in Madras ♥️ pic.twitter.com/yVOThLDuIj
— Shiv Aroor (@ShivAroor) March 27, 2020
ದೇಶಾದ್ಯಂತ ಕೋಟ್ಯಂತರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೋವಿಡ್ 19 ಮಹಾಮಾರಿಯ ವಿರುದ್ಧ ಸರಕಾರ ಸಾರಿರುವ ಸಮರದಲ್ಲಿ ಕಾನೂನು ಪಾಲಕರಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದಾರೆ. ಅವರೆಲ್ಲರ ಶ್ರಮಕ್ಕೆ ಬೆಲೆ ಕೊಡಬೇಕಾದರೆ, ನಾವು ಇನ್ನು 19 ದಿನಗಳ ಕಾಲ ಮನೆಯಲ್ಲಿಯೇ ಇರಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ’ ತೆರೆಗೆ
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.