ನಿಸ್ವಾರ್ಥ ಪೌರ ಸೈನಿಕರಿಗೊಂದು ಸಲಾಮ್‌


Team Udayavani, Mar 29, 2020, 2:47 PM IST

ನಿಸ್ವಾರ್ಥ ಪೌರ ಸೈನಿಕರಿಗೊಂದು ಸಲಾಮ್‌

ಸಾಂದರ್ಭಿಕ ಚಿತ್ರ

ವಿಜಯಪುರ: ಜಗತ್ತನ್ನೇ ತಳ್ಳಣಗೊಳಿಸಿರುವ ಕೋವಿಡ್‌-19 ಹೆಸರಿನ ವೈರಸ್‌ ನಿಗ್ರಹಕ್ಕಾಗಿ ರವಿವಾರದಿಂದ ದೇಶವೇ ಸ್ತಬ್ಧವಾಗಿದೆ.

ಈ ಹಂತದಲ್ಲಿ ಐತಿಹಾಸಿಕ ಪ್ರವಾಸಿಗರ ತಾಣ ಎನಿಸಿರುವ ವಿಜಯಪುರ ಮಹಾನಗರದಲ್ಲಿ ಕೋವಿಡ್‌-19 ರೋಗದ ವಿರುದ್ಧದ ಹೋರಾಟದಲ್ಲಿ ಪಾಲಿಕೆ ಪೌರ ಕಾರ್ಮಿಕರು ಸೈನಿಕರಂತೆ ಜೀವದ ಹಂಗುತೊರೆದು ಸ್ವಚ್ಛತೆಗೆ ಮುಂದಾಗಿದ್ದಾರೆ.

ಕೋವಿಡ್‌-19  ಹರಡದಂತೆ ತಡೆಯಲು ದೇಶದ ಜನರು 21 ದಿನ ತಾವು ಇದ್ದ ಸ್ಥಳದಿಂದ ಹೊರ ಬರದೇ ಅಲ್ಲಿಯೇ ಇರಿ ಎಂದು ಪ್ರಧಾನಿ ನರೇಂದ್ರ ಮೋದಿ “ಲಾಕ್‌ಡೌನ್‌’ ಆದೇಶ ಹೊರಡಿಸಿದ್ದಾರೆ. ಸಹಜವಾಗಿ ಈ ಆದೇಶ ಜಿಲ್ಲೆಯಲ್ಲೂ ಜಾರಿಯಲ್ಲಿದೆ. ಜಿಲ್ಲೆಯ ಜನರು ಮನೆಗಳಿಂದ ಹೊರ ಬಂದು ರಸ್ತೆಗೆ ಇಳಿಯದಂತೆ ಪೊಲೀಸರು ಕಣ್ಗಾವಲು ಕಾಯಲು ಕಾಯುತ್ತಿದ್ದಾರೆ. ಮತ್ತೂಂದೆಡೆ ರೋಗ ಬಾಧೆ ಹರಡದಂತೆ ತಡೆಯಲು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ಮಲೀನ ಇರುವ ಪ್ರದೇಶಗಳಿಗೆ ನುಗ್ಗಿ ಸ್ವಚ್ಛತೆಗೆ ಮುಂದಾಗಿದ್ದಾರೆ.

ದೇಶದಲ್ಲಿ ಎಂಥದ್ದೇ ಕಠಿಣ ಸಂದರ್ಭದಲ್ಲಿ ಸೈನಿಕರು ದೇಶದ ಗಡಿಯಲ್ಲಿ ವೈರಿಗಳ ವಿರುದ್ಧ ಹೋರಾಟಕ್ಕೆ ಮಾತ್ರವಲ್ಲ ದೇಶದೊಳಗೂ ಜನರ ರಕ್ಷಣೆಗೆ ಮುಂದಾಗುತ್ತಾರೆ. ಪೌರ ಕಾರ್ಮಿಕರು ಕೂಡ ಎಷ್ಟೇ ಮಾರಕ ಸಾಂಕ್ರಾಮಿಕ ರೋಗ ಹರಡಿಕೊಂಡರೂ ತಮ್ಮ ಜೀವದ ಹಂಗು ತೊರೆದು ರೋಗ ತವರು ಎನಿಸಿದ ಕೊಳಕು ಪ್ರದೇಶಗಳಿಗೆ ತೆರಳಿ ಸ್ವತ್ಛತೆಗೆ ಮುಂದಾಗುತ್ತಾರೆ.

ನಗರದ ಬೀದಿಬದಿ ಗೂಡಿಸುವ ಜತೆಗೆ ಮನೆ ಮನೆಗೆ ತೆರಳಿ ಟಂಟಂ ಮೂಲಕ ಕಸ ಸಂಗ್ರಹದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹ್ಯಾಂಡ್‌ಗ್ಲೌಸ್‌, ವಿಶೇಷ ಮಾಸ್ಕ್, ಜಾಕೆಟ್‌ ಹೊರತಾಗಿ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಇಂಥ ಕೊರತೆಗಳ ಮಧ್ಯೆ, ಅಲ್ಪ ಸಂಬಳ ಪಡೆದರೂ ಮಹಾನಗರ ಪಾಲಿಕೆಯ 530 ಪೌರಕಾರ್ಮಿಕರು ಸೈನಿಕರಂತೆ ದೇಶದ ವೈರಿ ಎನಿಸಿರುವ ಕೋವಿಡ್‌-19  ವಿರುದ್ಧ ಹೋರಾಟದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ.

ಇನ್ನು ರೋಗ ಸೋಂಕು ಹರಡದಂತೆ ಕಳೆದ ಎರಡು ದಿನಗಳಿಂದ ನಗರ ಸಾರ್ವಜನಿಕ ಸ್ಥಳಗಳಲ್ಲಿ ರಸಾಯನಿಕ ಮಿಶ್ರಣದ ಕ್ರಿಮಿನಾಶಕ ಸಿಂಪರಣೆಗೆ ಮುಂದಾಗಿದ್ದಾರೆ. ಈ ಮಹತ್ಕಾರ್ಯದ ಮುಂಚೂಣಿಯಲ್ಲಿ ನಿಂತಿರುವ ಅಗ್ನಿಶಾಮಕ ದಳದ ಸಿಬ್ಬಂದಿಗೂ ಪೌರ ಕಾರ್ಮಿಕರು ಸಹಕಾರ ನೀಡುತ್ತಿದ್ದಾರೆ. ಬಸ್‌ ನಿಲ್ದಾಣ, ಜಿಲ್ಲಾ ಧಿಕಾರಿ ಕಚೇರಿ, ಮಹಾತ್ಮಾ ಗಾಂಧಿಧೀಜಿ ವೃತ್ತ, ಎಲ್‌.ಬಿ.ಶಾಸ್ತ್ರೀ ಮಾರುಕಟ್ಟೆ ಪ್ರದೇಶ, ಶ್ರೀ ಸಿದ್ದೇಶ್ವರ ದೇವಾಲಯ ಮಾರ್ಗ ಹಾಗೂ ವಿವಿಧ ಮಾರ್ಗಗಳಲ್ಲಿ ಇರುವ ಖಾಸಗಿ ವಾಣಿಜ್ಯ ಸಂಕಿರಣಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಮುಂದಾಗಿದ್ದಾರೆ.

ನಮ್ಮ ಜೀವಕ್ಕಿಂತ ಜನರ ಜೀವ ಮುಖ್ಯ ಎಂದು ರೋಗಕಾರಕ ಪ್ರದೇಶದಲ್ಲಿ ಕೆಲಸ ಮಾಡುವ ನಮ್ಮ ಬದುಕು ದುಸ್ತರವಾಗಿದೆ. ಸರ್ಕಾರ ಪೌರ ಕಾರ್ಮಿಕರ ಗೌರಯುತ ಬದುಕಿಗೆ ಆಸರೆಯಾಗಲಿ. –ಹೆಸರು ಹೇಳಲು ಇಚ್ಛಿಸದ,ಪೌರಕಾರ್ಮಿಕ

 

 

-ಜಿ.ಎಸ್‌.ಕಮತರ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.