ಶಿವಮೊಗ್ಗ ಪಾಲಿಕೆ: 219.07 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ


Team Udayavani, Mar 29, 2020, 4:02 PM IST

ಶಿವಮೊಗ್ಗ ಪಾಲಿಕೆ: 219.07 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ

ಶಿವಮೊಗ್ಗ: ಒಂದೆಡೆ ಅನಿವಾರ್ಯ, ಮತ್ತೂಂದೆಡೆ ಇಂತಹ ಸಮಯದಲ್ಲಿ ಇದು ಬೇಕೆ? ಎಂಬ ಸಂದಿಗ್ಧತೆ ನಡುವೆ ಶನಿವಾರ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ 2020-21ನೇ ಸಾಲಿನಲ್ಲಿ 219.07 ಲಕ್ಷ ರೂ.ಗಳ ಉಳಿತಾಯ ಬಜೆಟ್‌ ಮಂಡನೆಯಾಗಿದೆ.

ಪ್ರಸಕ್ತ ಈ ಸಾಲಿನಲ್ಲಿ ಒಟ್ಟು ಜಮೆ 27953.80 ಲಕ್ಷ ರೂ. ಗಳಾಗಿದ್ದು, ಇದರಲ್ಲಿ 10185.65 ಆರಂಭಿಕ ಶುಲ್ಕ 10750.91 ಲಕ್ಷ ರೂ. ರಾಜಸ್ವ ಜಮೆಗಳಾಗಿರುತ್ತವೆ. 5444 ಲಕ್ಷ ರೂ ಬಡಾವಳ ಜಮೆ ಒಳಗೊಂಡಿದ್ದು, 1573.24 ಅಸಾಧಾರಣ ಜಮೆಯಾಗಿರುತ್ತದೆ. ಒಟ್ಟು ವೆಚ್ಚ 27734.10 ಲಕ್ಷ ರೂ. ಗಳಾಗಿದ್ದು, 9567.24 ಲಕ್ಷ ರೂ ರಾಜಸ್ವ ವೆಚ್ಚವಾಗಿದೆ. 16598 ಲಕ್ಷ ರೂ. ಬಂಡವಾಳ ವೆಚ್ಚ, 1568.24 ಲಕ್ಷ ರೂ. ಅಸಾಧಾರಣ ವೆಚ್ಚವಾಗಿದ್ದು, ಒಟ್ಟಾರೆ 2020-21ನೇ ಸಾಲಿನ ಶಿವಮೊಗ್ಗ ಮಹಾನಗರ ಪಾಲಿಕೆಯು 219.70 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡಿಸಲಾಗಿದೆ.

ಮೇಯರ್‌ ಸುವರ್ಣ ಶಂಕರ್‌ ಅಧ್ಯಕ್ಷತೆಯಲ್ಲಿ ಇಂದು ಆರಂಭ ಗೊಂಡ ಆಯವ್ಯಯ ಭಾಷಣಕ್ಕೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕೊರೊನಾದಂತಹ ಕಾಯಿಲೆಯ ಇಂತಹ ಸಂದರ್ಭದಲ್ಲಿ ಬಜೆಟ್‌ ಮಂಡನೆ ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಎಚ್‌.ಸಿ. ಯೋಗೇಶ್‌, ರಮೇಶ್‌ ಹೆಗ್ಡೆ, ನಾಗರಾಜ್‌ ಕಂಕಾರಿ, ಸತ್ಯನಾರಾಯಣ್‌ ಸೇರಿದಂತೆ ಹಲವರು ಆಕ್ಷೇಪಿಸಿದರು. ಮಾತಿಗೆ ಮಾತಿಗೆ ಬೆಳೆದ ಸಂದರ್ಭದಲ್ಲಿ ಪ್ರಸಕ್ತ ಬಜೆಟ್‌ ಮಂಡನೆಯ ಅನಿವಾರ್ಯತೆಯ ಬಗ್ಗೆ ಆಯುಕ್ತ ಚಿದಾನಂದ ವಟಾರೆ ಮಾಹಿತಿ ನೀಡಲು ಮುಂದಾದರು.

ಈ ಸಂದರ್ಭದಲ್ಲಿ ಪ್ರತಿ ಪಕ್ಷದ ಸದಸ್ಯರು ಸಭಾ ತ್ಯಾಗ ಮಾಡಿದರು. ಈ ಮಾರ್ಚ್‌ ತಿಂಗಳ ಅಂತ್ಯದೊಳಗೆ ಬಜೆಟ್‌ ಮಂಡಿಸುವುದು ಆದ್ಯ ಕರ್ತವ್ಯ. ಪ್ರಸಕ್ತ ಸನ್ನಿವೇಶದಲ್ಲಿ ಅಗತ್ಯವಿರುವ ಕೆಮಿಕಲ್ಸ್‌ ಹಾಗೂ ಮತ್ತಿತರರ ಸಾಮಗ್ರಿಕೊಳ್ಳಲು, ಸಿಬ್ಬಂದಿಗಳ ವೇತನ ನೀಡುವಿಕೆಗೆ ಬಜೆಟ್‌ ಮಂಡನೆ ಅನಿವಾರ್ಯ ಎಂದು ಚಿದಾನಂದ ವಾಟಾರೆ ತಿಳಿಸಿದರು. ಉಪಮೇಯರ್‌ ಸುರೇಖಾ ಮುರುಳೀಧರ್‌, ಹಣಕಾಸು ಕಂದಾಯ ತೆರಿಗೆ ನಿರ್ಧರಣೆ ಸ್ಥಾಯಿ ಸಮಿತಿ ಅಧಕ್ಷ ವಿಶ್ವನಾಥ್‌ ಮಾತನಾಡಿದರು. ಮೇಯರ್‌ ಸುವರ್ಣ ಶಂಕರ್‌ ಇದ್ದರು.

ಪ್ರತಿಭಟನೆ: ಮಹಾನಗರ ಪಾಲಿಕೆಯ 2020 21ನೇ ಸಾಲಿನ ಆಯವ್ಯಯ ಮಂಡನೆ ಮಾಡುವುದಕ್ಕೆ ಪಾಲಿಕೆಯ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿ ಮೇಯರ್‌ ಮುಂಭಾಗ ಪ್ರತಿಭಟನೆ ನಡೆಸಿದರು. ಮೂರು ತಿಂಗಳಿಂದ ಸಾಮಾನ್ಯ ಸಭೆ ಸಹ ಕರೆದಿಲ್ಲ. ಸಭೆ ಕರೆಯುವಂತೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಅಲ್ಲದೆ ಈ ಬಾರಿ ಬಜೆಟ್‌ನಲ್ಲಿ ಯಾವುದೇ ಹೊಸಯೋಜನೆ ಇಲ್ಲ. ಇದೊಂದು ಬೋಗಸ್‌ ಬಜೆಟ್‌ ಆಗಿದೆ ಎಂದು ವಿಪಕ್ಷ ಸದಸ್ಯರು ಆರೋಪಿಸಿದರು. ಪಾಲಿಕೆ ವಿಪಕ್ಷ ನಾಯಕ ಎಚ್‌ .ಸಿ. ಯೋಗೇಶ್‌, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸದಸ್ಯರಾದ ರಮೇಶ್‌ ಹೆಗ್ಡೆ, ನಾಗರಾಜ್‌ ಕಂಕಾರಿ, ರೇಖಾ ರಂಗನಾಥ್‌, ಆರ್‌.ಸಿ. ನಾಯ್ಕ, ಯಮುನಾ ರಂಗೇಗೌಡ ಮತ್ತಿತರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಿಪಕ್ಷ ಸದಸ್ಯರ ತೀವ್ರ ಗದ್ದಲದ ನಡುವೆಯೇ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ವಿಶ್ವನಾಥ್‌, 2020 21 ನೇ ಸಾಲಿನ ಪಾಲಿಕೆ ಬಜೆಟ್‌ ಮಂಡಿಸಿದರು.

 

ಕಳೆದ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ 18 ಕೋಟಿ ಮೊತ್ತದ ಯಾವ ಯೋಜನೆಗಳನ್ನು ಅನುಷ್ಠಾನ ಮಾಡಿಲ್ಲ. ಈ ಬಾರಿ ಮತ್ತೆ 19.5 ಕೋಟಿ ಹೊಸ ಯೋಜನೆ ಘೋಷಿಸಿದ್ದಾರೆ. ಬಿಜೆಪಿಗೆ ಘೋಷಿಸುವ ಚಟವಿದೆಯೇ ಹೊರತು, ಅನುಷ್ಠಾನ ಮಾಡುವ ಹಠ ಇಲ್ಲ. ಮೊದಲು ಹಿಂದಿನ ವರ್ಷದ ಯೋಜನೆಗಳ ಅನುಷ್ಠಾನ ಮಾಡಲಿ. ನಂತರ ಹೊಸ ಯೋಜನೆ ಜಾರಿ ಮಾಡಲಿ.  -ಎಚ್‌.ಸಿ. ಯೋಗೀಶ್‌, ವಿಪಕ್ಷ ನಾಯಕ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

Theerathalli

Shivamogga: ತೀರ್ಥಹಳ್ಳಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ಹೃದಯಘಾತದಿಂದ ನಿಧನ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.