ರೈತರಿಗೆ ಕಣ್ಣೀರು ತರಿಸಿದ ಕೋವಿಡ್ 19


Team Udayavani, Mar 29, 2020, 4:19 PM IST

bk-tdy-1

ಬಾಗಲಕೋಟೆ: ಕೋವಿಡ್ 19 ಮಹಾಮಾರಿ ರೋಗದ ಭೀತಿಯನ್ನಷ್ಟೇ ಮೂಡಿಸಿಲ್ಲ. ಬಡವರ ಬದುಕು ದುಸ್ತರಗೊಳಿಸಿದೆ. ಅದರಲ್ಲೂ ಹೊಲದಲ್ಲಿ ಕಷ್ಟುಪಟ್ಟು ವಿವಿಧ ಬೆಳೆ ಬೆಳೆದವರ ಕಣ್ಣಂಚಿನಲ್ಲೀಗ ನೀರು ತರಿಸುತ್ತಿದೆ.

ರೈತರು ತಾವು ಬೆಳೆದ ಬೆಳೆ ಮಾರುಕಟ್ಟೆಗೆ ಕಳುಹಿಸಲು ಆಗುತ್ತಿಲ್ಲ. ಏನೇನೋ ಸರ್ಕಸ್‌ ಮಾಡಿ, ಮಾರುಕಟ್ಟೆಗೆ ತಂದರೂ, ಆ ಬೆಳೆ ಕೇಳುವವರು ದಿಕ್ಕಿಲ್ಲ. ಹೀಗಾಗಿ ರೈತರು, ಕಳೆದ ವರ್ಷ ಪ್ರವಾಹದಿಂದ ಸಂಕಷ್ಟ ಎದುರಿಸಿದರೆ, ಈಗ ಕೋವಿಡ್ 19  ಭೀತಿ ಬದುಕು ಬರಡುಗೊಳಿಸುತ್ತಿದೆ.

ಕಲ್ಲಂಗಡಿ ಬೆಳೆದವರ ಕಣ್ಣಲ್ಲಿ ನೀರು: ಜಿಲ್ಲೆ, ತೋಟಗಾರಿಕೆ ಬೆಳೆಗೆ ಪ್ರಸಿದ್ಧಿ ಪಡೆದಿದ್ದು, ಸುಮಾರು 52 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಪ್ರತಿವರ್ಷ ವಿವಿಧ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ಜನರ ಹೊಟ್ಟೆ ತಂಪಾಗಿಡಲು ಕಲ್ಲಂಗಡಿ ಬೆಳೆಯುವುದು ಜಿಲ್ಲೆಯ ರೈತರ ಪಾರಂಪರಿಕ ಬೆಳೆಯಾಗಿದೆ. ಸಾಳಗುಂದಿ, ಕದಾಂಪುರ, ಛಬ್ಬಿ, ಕಲಾದಗಿ ಹೀಗೆ ವಿವಿಧ ಭಾಗದಲ್ಲಿ ಕಲ್ಲಂಗಡಿ ಅತಿ ಹೆಚ್ಚು ಬೆಳೆಯುತ್ತಾರೆ. ಅದರಲ್ಲೂ ಆಲಮಟ್ಟಿ ಜಲಾಶಯದ ಹಿನ್ನೀರ ಪ್ರದೇಶಕ್ಕೆ ಹೊಂದಿಕೊಂಡಿರುವ ಭೂಮಿಗಳು, ಕಲ್ಲಂಗಡಿ, ದಾಳಿಂಬೆ, ಶೇಂಗಾ ಹೀಗೆ ಹಲವು ಬೆಳೆಗೆ ಪ್ರಸಿದ್ಧಿಯಾಗಿವೆ. ಸಾಳಗುಂದಿ ಮತ್ತು ಕದಾಂಪುರ ಎರಡೇ ಗ್ರಾಮದಲ್ಲಿ ಸುಮಾರು 25 ಎಕರೆಗೂ ಅಧಿಕ ಕಲ್ಲಂಗಡಿ ಬೆಳೆದಿದ್ದು, ಅದೀಗ ಕಟಾವಿಗೆ ಬಂದಿದೆ. ಆದರೆ, ಇಡೀ ಮಾರುಕಟ್ಟೆಯೇ ಸ್ತಬ್ಧಗೊಂಡಿದ್ದರಿಂದ ರೈತ ಕಂಗಾಲಾಗಿ, ಕಣ್ಣೀರು ಹಾಕುವ ಪರಿಸ್ಥಿತಿ ತಲುಪಿದ್ದಾನೆ.

ಮುಂಬೈ-ಹೈದ್ರಾಬಾದ್‌ಗೆ: ಜಿಲ್ಲೆಯಲ್ಲಿ ಬೆಳೆಯುವ ಕಲ್ಲಂಗಡಿ, ದಾಳಿಂಬೆ ಬೆಳೆಗಳನ್ನು ಪುಣೆ, ಮುಂಬೈ ಹಾಗೂ ಹೈದ್ರಾಬಾದ್‌ ಮಾರುಕಟ್ಟೆಗೆ ಅತಿಹೆಚ್ಚು ಕಳುಹಿಸಲಾಗುತ್ತಿತ್ತು. ಬೇಸಿಗೆ ಆರಂಭಗೊಳ್ಳುವ ಮುಂಚೆಯೇ ರೈತರು, ಕಲ್ಲಂಗಡಿ ಬೆಳೆದು, ಬೇಸಿಗೆ ಅವಧಿಯಲ್ಲಿ ಜನರು ಹೆಚ್ಚಾಗಿ ಇಷ್ಟಪಡುವ ಕಾರಣ, ದೇಶದ ವಿವಿಧೆಡೆ ಕಳುಹಿಸಲಾಗುತ್ತಿತ್ತು. ಜತೆಗೆ ಜಿಲ್ಲೆಯ ವರ್ತಕರೂ, ಮುಂಗಡವಾಗಿ ಬೇಡಿಕೆ ಇಡುತ್ತಿದ್ದರು. ಕೆಲವರು ಬಡಾವಣೆಗೆ ತಿರುಗಿ ಮಾರಾಟ ಮಾಡಿದರೆ, ಇನ್ನೂ ಹಲವರು ರಸ್ತೆಯ ಪಕ್ಕದಲ್ಲಿ ಜ್ಯೂಸ್‌ ಅಂಗಡಿ ಹಾಕಿಕೊಂಡು ಕಲ್ಲಂಗಡಿ ಜ್ಯೂಸ್‌ ಮಾರಾಟ ಮಾಡುತ್ತಿದ್ದರು. ಈ ಎಲ್ಲ ಅಂಗಡಿಗಳಿಗೂ ಜಿಲ್ಲೆಯ ರೈತರು ಬೆಳೆದ ಕಲ್ಲಂಗಡಿಯೇ ಬಳಕೆಯಾಗುತ್ತಿತ್ತು. ಆದರೆ, ಇದೀಗ ಕೊರೊನಾ ತಂದ ಲಾಕ್‌ಡೌನ್‌ ಘೋಷಣೆ, ರೈತರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ.

2ರಿಂದ 3 ಎಕರೆ ಕಲ್ಲಂಗಡಿ ಬೆಳೆದರೆ, ಅದು ಬೇಸಿಗೆ ಅವಧಿಯಲ್ಲಿ 4ರಿಂದ 5 ಲಕ್ಷ ಆದಾಯ ತಂದು ಕೊಡುತ್ತಿತ್ತು. ವ್ಯಾಪಾರಸ್ಥರು ಒಂದು ಕೆ.ಜಿ. ಕಲ್ಲಂಗಡಿಯನ್ನು 10ರಿಂದ 15 ರೂ.ಗೆ ಪಡೆದು, ಅದರಿಂದ 50ರಿಂದ 60 ರೂ. ಲಾಭ ಮಾಡಿಕೊಳ್ಳುತ್ತಿದ್ದರು. ಇನ್ನು ದಾಳಿಂಬೆ ಅಂತೂ, 4 ಎಕರೆ ಬೆಳೆದಿದ್ದರೆ ಆ ರೈತ, 6ರಿಂದ 7 ಲಕ್ಷ ಗಳಿಸುತ್ತಿದ್ದ. ಅದಕ್ಕೆಲ್ಲ ಈ ಬಾರಿ, ಕೋವಿಡ್ 19  ಬರೆ ಎಳೆದಿದೆ.

 

ನಾನು 3 ಎಕರೆ ಕಲ್ಲಂಗಡಿ ಬೆಳೆದಿದ್ದೇನೆ. ಬೇಸಿಗೆ ಅವಧಿಯೇ ಈ ಬೆಳೆಗೆ ಹೆಚ್ಚು ಬೇಡಿಕೆ ಇರುತ್ತದೆ. ಪ್ರತಿವರ್ಷ, ಹೈದ್ರಾಬಾದ್‌, ಮುಂಬೈಗೆಲ್ಲ ಕಳುಹಿಸುತ್ತಿದ್ದೆ. ಬಾಗಲಕೋಟೆಯ ವ್ಯಾಪಾರಸ್ಥರೂ ನಮ್ಮ ತೋಟಕ್ಕೆ ಬಂದು ಖರೀದಿ ಮಾಡುತ್ತಿದ್ದರು. ಈ ಬಾರಿ ಸ್ಥಳೀಯ ಹಾಗೂ ಹೊರ ರಾಜ್ಯದ ವ್ಯಾಪಾರಸ್ಥರೂ ಬರುತ್ತಿಲ್ಲ. ಕೋವಿಡ್ 19  ಎಂಬ ಭೀತಿ, ರೈತರಿಗೆ ಕಣ್ಣೀರು ತರಿಸುತ್ತಿದೆ. ಹಾಕಿದ ಹಣವೂ ಬರಲ್ಲ.  ಸುರೇಶ ಬಣಕಾರ, ಸಾಳಗುಂದಿ ರೈತ

 

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

festcide

Feticide: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಪತ್ತೆ

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

1-MLP

BJP:ಮಹಾಲಿಂಗಪುರ ಪುರಸಭೆಯ 4 ಸದಸ್ಯರು, 3 ಮುಖಂಡರು ಪಕ್ಷದಿಂದ ಉಚ್ಛಾಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.