![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 30, 2020, 8:41 AM IST
ನವದೆಹಲಿ: ದೇಶದಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆರ್.ಬಿ.ಐ ಗವರ್ನರ್ ಶಕ್ತಿಕಾಂತ್ ದಾಸ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಗಾಗಿ ಡಿಜಿಟಲ್ ಪೇಮೆಂಟ್ ವಿಧಾನಗಳನ್ನು ಬಳಸಿ ಎಂದು ಸಾರ್ವಜನಿಕರಿಗೆ ಕರೆನೀಡಿದ್ದಾರೆ.
ರಾಷ್ಟ್ರಾದ್ಯಂತ 1,100ಕ್ಕೂ ಹೆಚ್ಚು ಕೋವಿಡ್ 19 ಸೋಂಕು ಪೀಡಿತ ಪ್ರಕರಣಗಳು ವರದಿಯಾಗಿದ್ದು ಮಾತ್ರವಲ್ಲದೆ 29 ಜನರು ಈ ಮಾರಾಣಾಂತಿಕ ವೈರಸ್ ಗೆ ಬಲಿಯಾಗಿದ್ದಾರೆ. ಈ ಸೋಂಕು 3ನೇ ಹಂತಕ್ಕೂ ಕಾಲಿರಿಸಿ ಸಾಮೂದಾಯಿಕವಾಗಿ ಹರಡುವ ಭೀತಿ ಹಿನ್ನಲೆಯಲ್ಲಿ ಆರ್.ಬಿ.ಐ ಗವರ್ನರ್ ಈ ಮನವಿ ಮಾಡಿದ್ದಾರೆ.
ಸಾಮೂದಾಯಿಕವಾಗಿ ಈ ಸೋಂಕು ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಭಾರತದಾದ್ಯಂತ 21 ದಿನಗಳ ಲಾಕ್ ಡೌನ್ ಮಾಡಿ ಆದೇಶ ಹೋರಡಿಸಿದೆ. ಮಾತ್ರವಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕೂಡ ಮನವಿ ಮಾಡಿತ್ತು.
ಹೀಗಾಗಿ ಆರ್.ಬಿ.ಐ ಗವರ್ನರ್ ಶಕ್ತಿಕಾಂತ್ ದಾಸ್ ವಿಡಿಯೋ ಸಂದೇಶ ನೀಡಿದ್ದು, ಜಗತ್ತಿನಾದ್ಯಂತ ಇಂದು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಸೋಂಕನ್ನು ತಡೆಗಟ್ಟಲು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಸಾರ್ವಜನಿಕರು ತೆಗೆದುಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಇದರ ಒಂದು ಪ್ರಮುಖ ಭಾಗ. ಅದಕ್ಕಾಗಿ ಯಾವುದೇ ರೀತಿಯ ಬ್ಯಾಂಕಿಂಗ್ ವಹಿವಾಟುವಿಗಾಗಿ ಮೊಬೈಲ್ ಮೂಲಕ ಡಿಜಿಟಲ್ ಪೇಮೆಂಟ್ ವಿಧಾನ ಬಳಸಿ. ‘ಪೇ ಡಿಜಿಟಲ್ ಸ್ಟೇ ಸೇಫ್’ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
RBI Governor @DasShaktikanta message on safety measures during difficult times!
Pay digital, stay safe!#rbitoday #rbigovernor #COVID19#IndiaFightsCoronavirus#StayCleanStaySafeGoDigital pic.twitter.com/MEe68lr5kc— ReserveBankOfIndia (@RBI) March 27, 2020
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.