ವಾರದ ಬಳಿಕ ವಹಿವಾಟಿಗೆ ಎಪಿಎಂಸಿ ಮುಕ್ತ


Team Udayavani, Mar 31, 2020, 12:48 PM IST

ವಾರದ ಬಳಿಕ ವಹಿವಾಟಿಗೆ ಎಪಿಎಂಸಿ ಮುಕ್ತ

ಸಾಂದರ್ಭಿಕ ಚಿತ್ರ

ರಾಯಚೂರು: ಕೋವಿಡ್19 ಎಫೆಕ್ಟ್ ನಿಂದ ಒಂದು ವಾರಗಳ ಸ್ಥಗಿತಗೊಂಡಿದ್ದ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸೋಮವಾರದಿಂದ ಕಾರ್ಯಾರಂಭಿಸಿದೆ. ಆದರೆ, ಮೊದಲ ದಿನ ಮಾಹಿತಿ ಕೊರತೆಯಿಂದ ಸಾಕಷ್ಟು ರೈತರು ಬಂದಿರಲಿಲ್ಲ.

ರಾಜ್ಯದಲ್ಲೇ ದೊಡ್ಡ ಮಾರುಕಟ್ಟೆ ಎನಿಸಿಕೊಂಡ ಈ ಎಪಿಎಂಸಿಯಲ್ಲಿ ನಿತ್ಯ ಏನಿಲ್ಲವೆಂದರೂ ಎರಡರಿಂದ ಎರಡೂವರೆ ಕೋಟಿ ವಹಿವಾಟು ನಡೆಯುತ್ತದೆ. ಅಲ್ಲದೇ, ಈಗ ಬೆಳೆ ಕಟಾವಾಗಿದ್ದು, ರೈತರು ಅದನ್ನು ಇಟ್ಟುಕೊಳ್ಳುವುದು ಕಷ್ಟವಾಗುತ್ತಿದೆ. ಮೆಣಸಿನಕಾಯಿ ಬೆಳೆದ ರೈತರಂತೂ ಕೋಲ್ಡ್‌ ಸ್ಟೋರೇಜ್‌ಗಳಲ್ಲಿ ತುಂಬಿಸಿದ್ದಾರೆ. ಕೋವಿಡ್19 ಭೀತಿ ಇನ್ನೂ ಹಾಗೆ ಇರುವ ಕಾರಣ ಜಿಲ್ಲಾ ಧಿಕಾರಿ ಸೂಕ್ತ ನಿರ್ದೇಶನ ನೀಡಿದ್ದು, ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ವರ್ತಕರು ಕೂಡ ತಮ್ಮ ಹಮಾಲಿಗಳಿಗೆ ಸೂಚನೆ ನೀಡಿದ್ದಾರೆ. ರೈತರು ಮಾರುಕಟ್ಟೆಗೆ ಬಂದ ಮೇಲೆ ವಾಸ್ತವ ಸ್ಥಿತಿ ಅರಿವಾಗಲಿದೆ. ಜಿಲ್ಲೆಗೆ ಈವರೆಗೆ 174 ಜನ ವಿದೇಶದಿಂದ ಹಿಂದಿರುಗಿದ್ದು, ಅವರು ಮತ್ತು ಅವರ ಕುಟುಂಬದ 719ರನ್ನು ಹೋಮ್‌ ಕ್ವಾರಂಟೈನ್‌ ನಲ್ಲಿ ಇಡಲಾಗಿದೆ. ಈವರೆಗೆ 9 ಮಾದರಿಗಳನ್ನು ಲ್ಯಾಬ್‌ಗ ಕಳುಹಿಸಿದ್ದು, ಅದರಲ್ಲಿ 5 ನೆಗೆಟಿವ್‌ ಬಂದರೆ, ಎರಡು ತಿರಸ್ಕೃತಗೊಂಡಿವೆ. ಇನ್ನೆರಡು ಬರಬೇಕಿದೆ. ಆರು ಜನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಇನ್ನೂ ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ಸರಕು ಸಾಗಣೆಗೆ ಅವಕಾಶ ನೀಡಿದ್ದು, ಪಾಸ್‌ಗಳನ್ನು ಪಡೆದು ಓಡಾಡುವ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ನಗರದಲ್ಲೂ ಜನ ಸಂಚಾರ ತುಸು ಹೆಚ್ಚಾಗಿದ್ದು, ಎಲ್ಲರೂ ವ್ಯಾಪಾರ, ವಹಿವಾಟಿನ ಉದ್ದೇಶಕ್ಕೆ ಪಾಸ್‌ ಪಡೆದು ಸಂಚರಿಸುತ್ತಿದ್ದಾರೆ. ಅನಗತ್ಯವಾಗಿ ಜನ ಓಡಾಡುವುದಕ್ಕೆ ಅವಕಾಶ ನೀಡಿಲ್ಲ.

ಪೆಟ್ರೋಲ್‌ ಬಂಕ್‌ಗಳಲ್ಲಿ 200 ರೂ. ಗಿಂತ ಅಧಿಕ ಪೆಟ್ರೋಲ್‌, 500 ರೂ.ಗಿಂತ ಅಧಿಕ ಡೀಸೆಲ್‌ ಹಾಕಿಸಬೇಕು ಎಂದರೂ ಕೆಲವೆಡೆ ಬೇಕಾಬಿಟ್ಟಿ ಹಾಕಲಾಗುತ್ತಿತ್ತು. ಕ್ಯಾನ್‌ ಗಳಲ್ಲಿ ಹಾಕಬಾರದು ಎಂದರೂ ಆದೇಶ ಮೀರಲಾಯಿತು. ಪಾಸ್‌ ಇದ್ದವರಿಗೆ ಮಾತ್ರ ಪೆಟ್ರೋಲ್‌ ಹಾಕಲಾಯಿತು. ನಾನಾ ಕೆಲಸಗಳಿಗಾಗಿ ಜಿಲ್ಲಾಡಳಿತ ಕಚೇರಿಗೆ ಅಗಮಿಸಿದ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಕಾರಣ ಪೊಲೀಸರು ಲಾಠಿ ಬೀಸಿ ಚದುರಿಸಿದ ಪ್ರಸಂಗ ನಡೆಯಿತು.

ಡ್ರೋಣ್‌ ಬಳಕೆ: ಮುಖ್ಯ ರಸ್ತೆಗಳು ಭಣಗುಡುತ್ತಿದ್ದರೂ ಬಡಾವಣೆಗಳಲ್ಲಿ ಜನ ರಾಜಾರೋಷವಾಗಿ ಗುಂಪಾಗಿ ಕೂಡುವುದು, ಓಡಾಡುವುದು ಮಾಡುತ್ತಿದ್ದಾರೆ. ಪೊಲೀಸರು ಪೆಟ್ರೋಲಿಂಗ್‌ ಮಾಡಿದಾಗ ಮಾತ್ರ ಚದುರುವುದು ಅವರು ಮುಂದೆ ಹೋಗುತ್ತಿದ್ದಂತೆ ಪುನಃ ಜಮಾಯಿಸುವುದನ್ನು ಗಮನಿಸಿದ ಪೊಲೀಸ್‌ ಇಲಾಖೆ ಡ್ರೋಣ್‌ ಮೂಲಕ ಜನರ ಚಲನ ವಲನ ಸೆರೆ ಹಿಡಿಯಲು ಮುಂದಾಗಿದೆ. ಸಿಯಾತಲಾಬ್‌ನಲ್ಲಿ ಎಸ್‌ಪಿ ಡಾ.ಸಿ.ಬಿ.ವೇದಮೂರ್ತಿ ಡ್ರೋಣ್‌ಗೆ ಚಾಲನೆ ನೀಡಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.