ಹಾಸ್ಟೆಲ್‌ಗ‌ಳು ಬಂದ್‌;ಅಂಗವಿಕಲ ಮಕ್ಕಳು ಮನೆಗೆ


Team Udayavani, Apr 3, 2020, 11:52 AM IST

ಹಾಸ್ಟೆಲ್‌ಗ‌ಳು ಬಂದ್‌;ಅಂಗವಿಕಲ ಮಕ್ಕಳು ಮನೆಗೆ

ಹುಬ್ಬಳ್ಳಿ: ಕೋವಿಡ್ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಗರದ ಅಂಗವಿಕಲ ವಿದ್ಯಾರ್ಥಿನಿಲಯಗಳನ್ನು ಬಂದ್‌ ಮಾಡಲಾಗಿದ್ದು, ಅಲ್ಲಿದ್ದ ಎಲ್ಲ ಮಕ್ಕಳನ್ನು ಅವರವರ ಮನೆಗಳಿಗೆ ಕಳುಹಿಸಲಾಗಿದೆ.

ಇಲ್ಲಿನ ಆನಂದನಗರ ರಸ್ತೆಯಲ್ಲಿರುವ ಅಂಧಮಕ್ಕಳ ಸರಕಾರಿ ಪಾಠಶಾಲೆಯಲ್ಲಿ 1 ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ.16ರಿಂದ 23ರವರೆಗೆ ಪರೀಕ್ಷೆಗಳನ್ನು ನಡೆಸಿ 23ರಿಂದ ಮಕ್ಕಳನ್ನು ಮನೆಗಳಿಗೆ ಕಳುಹಿಸಿಕೊಡಲಾಯಿತು. ಏಳನೇ ತರಗತಿ ಪರೀಕ್ಷೆ ಕುರಿತು ಮಕ್ಕಳಿಗೆ ನಂತರ ತಿಳಿಸಲಾಗುವುದು ಎಂದು ತಿಳಿಸಲಾಗಿತ್ತು. ಮಾ.31ರೊಳಗೆ ವಿದ್ಯಾರ್ಥಿ ನಿಲಯವನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿದೆ. ಇಲ್ಲಿ 1ರಿಂದ 7ನೇ ತರಗತಿವರೆಗೆ ಒಟ್ಟು 42 ಜನ ವಿದ್ಯಾರ್ಥಿಗಳು ಹಾಗೂ ಏಳು ಜನ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದರು. 23 ರಂದು ಕೇವಲ ಅಗತ್ಯ ಕಾರ್ಯಕ್ಕೆಂದು ಇಬ್ಬರನ್ನು ಮಾತ್ರ ಇಡಲಾಗಿದ್ದು, 31ರಂದು ಅವರನ್ನೂ ಮನೆಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಮುಖೋಪಾಧ್ಯಾಯ ಅಣ್ಣಪ್ಪ ಕೋಳಿ ಮಾಹಿತಿ ನೀಡಿದರು.

ಇಲ್ಲಿನ ವಿಶ್ವಧರ್ಮ ಅಂಗವಿಕಲರ ಮಕ್ಕಳ ಶಾಲೆಯಲ್ಲಿ ಐವರು ವಿದ್ಯಾರ್ಥಿಗಳಿದ್ದಾರೆ. ಈ ಪೈಕಿ ಮೂವರು ವಿದ್ಯಾರ್ಥಿಗಳು ಬನಹಟ್ಟಿಯವರಾಗಿದ್ದು, ಒಬ್ಬ ವಿದ್ಯಾರ್ಥಿ ಅಫಜಲ್ಪುರ ಹಾಗೂ ಇನ್ನೊಬ್ಬ ವಿದ್ಯಾರ್ಥಿನಿ ಬೀದರ ಬಳಿಯ ಹಳ್ಳಿಗೆ ಸೇರಿದವಳು. ಲಾಕ್‌ ಡೌನ್‌ ಆಗುವ ಪೂರ್ವದಲ್ಲಿ ಮಾ.23ರಂದು ಒಟ್ಟು 112 ವಿದ್ಯಾರ್ಥಿಗಳನ್ನು ಅವರ ಮನೆಗಳಿಗೆ ಕಳುಹಿಸಿಕೊಡಲಾಗಿದ್ದು, ಎಂಟು ವಿದ್ಯಾರ್ಥಿಗಳಷ್ಟೇ ಸದ್ಯ ಉಳಿದುಕೊಂಡಿದ್ದಾರೆ. ಬೀದರ, ಅಫಜಲಪುರ ಹಾಗೂ ಬನಹಟ್ಟಿ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿಗಳ ಪರವಾನಗಿ ಪಡೆದು ಅವರ ಮನೆಗಳಿಗೆ ಕಳುಹಿಸಿಕೊಡಲಾಗುವುದು ಎಂದು ಸಂಸ್ಥೆ ಮುಖ್ಯಸ್ಥ ಐ.ಕೆ.ಲಕ್ಕುಂಡಿ ಮಾಹಿತಿ ನೀಡಿದರು.

ಇನ್ನು ನೇಕಾರ ನಗರದ ವಿಶ್ವಧರ್ಮ ಶಾಲೆಯಲ್ಲಿ 89 ವಿದ್ಯಾರ್ಥಿಗಳಿದ್ದು, ಈಗಾಗಲೇ ಅಲ್ಲಿನ 83 ವಿದ್ಯಾರ್ಥಿಗಳನ್ನು ಅವರ ಮನೆಗಳಿಗೆ ಕಳುಹಿಸಿಕೊಡಲಾಗಿದೆ. ಇನ್ನುಳಿದ ಆರು ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ವ್ಯವಸ್ಥೆ ಮಾಡುವ ಮೂಲಕ ನೋಡಿ ಕೊಳ್ಳಲಾಗುತ್ತಿದೆ ಎಂದು ಸಂಸ್ಥೆಯ ಮೇಲ್ವಿಚಾರಕಿ ಯಶೋಧಾ ಅವರು ಮಾಹಿತಿ ನೀಡಿದರು.

ಫಲಿತಾಂಶ ಸಿದ್ದ : ಇಲ್ಲಿನ ಆನಂದನಗರ ಅಂಧಮಕ್ಕಳ ಶಾಲೆಯ 1ರಿಂದ 6ನೇ ತರಗತಿ ಮಕ್ಕಳ ಫಲಿತಾಂಶ ಈಗಾಗಲೇ ಸಿದ್ದಪಡಿಸಲಾಗುತ್ತಿದ್ದು, ಇದೀಗ ಸರಕಾರ ಏಳನೇ ತರಗತಿ ಪರೀಕ್ಷೆಗಳನ್ನೂ ರದ್ದುಪಡಿಸಿದೆ. ಆ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಕೂಡಲೇ ಸಿದ್ದಪಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಲಾಗುವುದು. ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ 23ರಂದು ಎಲ್ಲ ಮಕ್ಕಳನ್ನು ಅವರ ಮನೆಗಳಿಗೆ ಕಳುಹಿಸಿಕೊಡಲಾಗಿದ್ದು, ಸದ್ಯ ವಿದ್ಯಾರ್ಥಿನಿಲಯವನ್ನು ಸರಕಾರದ ಆದೇಶದಂತೆ ಬಂದ್‌ ಮಾಡಲಾಗಿದೆ. -ಅಣ್ಣಪ್ಪ ಕೋಳಿ, ಮುಖೋಪಾಧ್ಯಾಯ, ಸರಕಾರಿ ಅಂಧಮಕ್ಕಳ ಶಾಲೆ

ಪರವಾನಿಗೆಗೆ ಕಾಯುತ್ತಿದ್ದೇವೆ : ಇಲ್ಲಿನ ಗಬ್ಬೂರನಲ್ಲಿರುವ ವಿಶ್ವಧರ್ಮ ಅಂಗವಿಕಲರ ಮಕ್ಕಳ ಶಾಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಈಗಾಗಲೇ ಅವರವರ ಮನೆಗಳಿಗೆ ಕಳುಹಿಸಿಕೊಡಲಾಗಿದೆ. ಇನ್ನುಳಿದ ಐವರು ವಿದ್ಯಾರ್ಥಿಗಳನ್ನು ಕಳುಹಿಸಿಕೊಡಲು ಜಿಲ್ಲಾಧಿಕಾರಿಗಳ ಪರವಾನಿಗೆಗೆ ಕಾಯುತ್ತಿದ್ದೇವೆ. ಈ ನಿಟ್ಟಿನಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಾಗುವುದು. – ಐ.ಕೆ.ಲಕ್ಕುಂಡಿ, ವಿಶ್ವಧರ್ಮ ಅಂಗವಿಕಲ ಸಂಸ್ಥೆಯ ಮುಖ್ಯಸ್ಥ

 

­-ಬಸವರಾಜ ಹೂಗಾರ

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.