![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 7, 2020, 3:52 PM IST
ಸಿಂದಗಿ: ಕೊರೊನಾ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್ಡೌನ್ ಹಿನ್ನೆಲೆಯಲ್ಲಿ ತಾಲೂಕಿನ ಬಿಸನಾಳ, ಆಹೇರಿ ಗ್ರಾಮಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ
ಬೆಳೆದಿರುವ ಕುಂಬಳಕಾಯಿ ಮಾರಾಟವಾಗದೆ ತೋಟದಲ್ಲಿಯೇ ಕೊಳೆಯುತ್ತಿದೆ. ತಾಲೂಕಿನ ಮೋರಟಗಿ ಭಾಗದ ಬಿಸನಾಳ, ಆಹೇರಿ ಹಾಗೂ ಇತರ ಗ್ರಾಮಗಳಲ್ಲಿ 20ಕ್ಕೂ ಹೆಚ್ಚು ರೈತರು 50 ಏಕರೆಯಲ್ಲಿ ಕುಂಬಳಕಾಯಿ ಬೆಳೆದಿದ್ದು, ಮಾರುಕಟ್ಟೆ ಸಾಗಾಣಿಕೆ ಮಾಡಲು ಆಗದೆ ಇರುವುದರಿಂದ ಕುಂಬಳಕಾಯಿ ಬೆಳೆದ ರೈತರು ಕಂಗಾಲಾಗಿದ್ದಾರೆ. ಪ್ರತಿ ಎಕರೆಗೆ 90 ಸಾವಿರ ರೂ. ಲಾಭ ಪಡೆಯುವ ರೈತರು ಇಂದು ಅವರಿಗೆ ಮಾರುಕಟ್ಟೆ ಸಾಗಾಣಿಕೆ ಮಾಡಲು ಆಗದೇ
ಇರುವುದರಿಂದ ನಷ್ಟ ಅನುಭವಿಸುವಂತಾಗಿದೆ.
ಸಾಲ ಮಾಡಿ ಬೆಳೆದ ಕುಂಬಳಕಾಯಿಯನ್ನು ಅನಿವಾರ್ಯವಾಗಿ ಗ್ರಾಮಗಳಲ್ಲಿ ಉಚಿತವಾಗಿ ಹಂಚಲಾಗುತ್ತಿದೆ ಎಂದು ರೈತರಾದ ಬಸಲಿಂಗಪ್ಪ
ಪಾಟೀಲ, ಬುಕರಾಯಗೌಡ ಬಿರಾದಾರ, ಶರಣಪ್ಪ ಪಾಟೀಲ, ಚನ್ನಬಸಪ್ಪ ಬಿರಾದಾರ, ಮಲಗೊಂಡಪ್ಪ ಪಾಟೀಲ, ಶಂಕರಗೌಡ ಬಿರಾದಾರ, ಬಾಳಪ್ಪ
ಪಾಟೀಲ, ಯಲ್ಲಪ್ಪ ಬಿರಾದಾರ, ರೇವಣಸಿದ್ದಪ್ಪ ಪೂಜಾರಿ, ಸಿದ್ರಾಮಪ್ಪ ಪಾಟೀಲ, ಶರಣಪ್ಪ ಪೂಜಾರಿ, ಶರಣಪ್ಪ ಮಂಗಾಳಿ, ಚಂದಪ್ಪ ಬಿರಾದಾರ, ರೇವಣಸಿದ್ದಪ್ಪ ಜೇರಟಗಿ, ಅಮೋಘಸಿದ್ದ ಅಳಲು ತೋಡಿಕೊಂಡಿದ್ದಾರೆ.
ತೋಟಗಾರಿಕೆ ಬೆಳೆ ಬೆಳೆದ ರೈತರು ಆತ್ಮ ಸ್ಥೈರ್ಯ ಕಳೆದುಕೊಳ್ಳಬೇಡಿ. ತಾವು ಬೆಳೆದ ಬೆಳೆಗಳ ಮಾಹಿತಿ ನೀಡಿ. ಸೂಕ್ತ ಮಾರುಕಟ್ಟೆ
ತಿಳಿದುಕೊಳ್ಳೋಣ. ಸಾಗಾಣಿಕೆಗೆ ಅನುಮತಿ ನೀಡಲಾಗುವುದು. ಯಾವುದು ತೊಂದರೆ ಆಗುವುದಿಲ್ಲ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅಮೋಘಿ ಹಿರೇಕುರಬರ ಹೇಳಿದ್ದಾರೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.