ರೇಷ್ಮೆಗೂಡು ಹರಾಜು ವ್ಯವಸ್ಥೆಗೆ ಸೂಚನೆ
Team Udayavani, Apr 9, 2020, 5:44 PM IST
ರಾಮನಗರ: ಕೋವಿಡ್ 19 ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾಮನಗರ ರೇಷ್ಮೆ ಗೂಡು ಮಾರುಕಟ್ಟೆಗೆ ಸಂಬಂಧಿಸಿದಂತೆ ಮೂರು ಸ್ಥಳಗಳಲ್ಲಿ ಗೂಡು ಹರಾಜಿಗೆ ವ್ಯವಸ್ಥೆ ಕೈಗೊಳ್ಳುವಂತೆ ರೇಷ್ಮೆ, ತೋಟಗಾರಿಕೆ ಹಾಗೂ ಪೌರಾಡಳಿತ ಸಚಿವ ನಾರಾಯಣ ಗೌಡ ರೇಷ್ಮೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.
ಬುಧವಾರ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಇಲ್ಲಿನ ರೇಷ್ಮೆ ಗೂಡು ಮಾರುಕಟ್ಟೆಗೆ ಭೇಟಿ ನೀಡಿದ್ದ ಅವರು ಅಧಿಕಾರಿಗಳೊಂದಿಗೆ ಮಾತನಾಡಿದರು. ರೇಷ್ಮೆ ಬೆಳೆಗಾರರು ನಷ್ಟಕ್ಕೆ ಒಳಗಾಗಬಾರದು ಎಂಬ ಉದ್ದೇಶಕ್ಕೆ ಗೂಡು ಮರಾಟಕ್ಕೆ ಅವಕಾಶ ಮಾಡಲಾಗಿದೆ. ಆದರೆ ಜನಸಂದಣಿಗೆ ಅವಕಾಶವಾಗಬಾರದು. ಹೀಗಾಗಿ ಹಾಲಿ ಮಾರುಕಟ್ಟೆಯ ಜೊತೆಗೆ ಇನ್ನೆರೆಡು ಕಡೆ ಹರಾಜಿಗೆ ವ್ಯವಸ್ಥೆ ಮಾಡಿ ಎಂದು ಸೂಚನೆ ಕೊಟ್ಟರು.
ಮಾರುಕಟ್ಟೆ ಹೊರತು ಪಡಿಸಿ ಬೇರೆ ಕಡೆ ಹರಾಜಿಗೆ ವ್ಯವಸ್ಥೆಯಾದರೆ ಅಂತರ ಕಾಯ್ದುಕೊಳ್ಳುವುದು ಸಾಧ್ಯವಿಲ್ಲ ಎಂದು ಅಧಿಕಾರಿಗಳ ಮಾತಿಗೆ ಸಚಿವರು ಸೊಪ್ಪು ಹಾಕಲಿಲ್ಲ. ಸೋಂಕು ಹರಡದಂತೆ ಎಲ್ಲ ಕ್ರಮಗಳನ್ನು ಅನುಸರಿಸುವಂತೆ ತಿಳಿಸಿದರು.
ರೇಷ್ಮೆ ಇಲಾಖೆ ಉಪನಿರ್ದೇಶಕ ಮಹೇಂದ್ರ, ಮಾರುಕಟ್ಟೆ ಉಪನಿರ್ದೇಶಕ ಮುನಿಬಸಯ್ಯ ಮತ್ತು ಅಧಿಕಾರಿಗಳು ಮಾತನಾಡಿ, ಚನ್ನಪಟ್ಟಣ, ಕನಕಪುರದಿಂದ ಬರುವ ರೇಷ್ಮೆಯನ್ನು ಆಯಾ ತಾಲೂಕುಗಳಲ್ಲೇ ಮಾರಾಟ ಮಾಡಲು ಮಾಡಿರುವ ವ್ಯವಸ್ಥೆ ಬಗ್ಗೆ ಮಾಹಿತಿ ಕೊಟ್ಟರು.
ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಕೆ.ಎಚ್. ರವಿ, ನಗರಾಭಿವೃದ್ಧಿ ಕೋಶದ ನಿರ್ದೇಶಕ ಮಾಯಣ್ಣ ಗೌಡ, ನಗರಸಭೆ ಆಯುಕ್ತ ಬಿ.ಶುಭಾ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.