ಪಾಲಿಕೆ ಸಿಬ್ಬಂದಿ-ಪೌರ ಕಾರ್ಮಿಕರ ಆರೋಗ್ಯ ತಪಾಸಣೆ

ಕ್ವಾರಂಟೈನ್‌ ಪ್ರದೇಶದಲ್ಲಿ ಔಷಧ ಸಿಂಪಡಣೆ

Team Udayavani, Apr 11, 2020, 3:38 PM IST

11-April-21

ಕಲಬುರಗಿ: ಇಂದಿರಾ ಗಾಂಧಿ ಸ್ಮಾರಕ ಭವನದ ಸಭಾಂಗಣದಲ್ಲಿ ಪಾಲಿಕೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.

ಕಲಬುರಗಿ: ಮಹಾಮಾರಿ ಕೊರೊನಾ ಸೋಂಕಿನ ಭೀತಿ ನಡುವೆ ಕರ್ತವ್ಯದಲ್ಲಿ ತೊಡಗಿರುವ ಮಹಾನಗರ ಪಾಲಿಕೆ ಸಿಬ್ಬಂದಿ ಮತ್ತು ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ಆರಂಭಿಸಲಾಗಿದೆ. ನಗರದ ಇಂದಿರಾ ಗಾಂಧಿ ಸ್ಮಾರಕ ಭವನದ ಸಭಾಂಗಣದಲ್ಲಿ ಮಹಾನಗರ ಪಾಲಿಕೆ, ಯುನೈಟೆಡ್‌ ಆಸ್ಪತ್ರೆ, ಬಿಯಿಂಗ್‌ ಹುಮನ್‌ ಟ್ರಸ್ಟ್‌ ಸಹಯೋಗದಲ್ಲಿ ಆರೋಗ್ಯ ಶಿಬಿರ ಆಯೋಜಿಸಲಾಗಿದ್ದು, ಶುಕ್ರವಾರ 200 ಸಿಬ್ಬಂದಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.

ಕೊರೊನಾ ತಲ್ಲಣವನ್ನು ಲೆಕ್ಕಿಸದೇ ಪಾಲಿಕೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಗರಾದ್ಯಂತ ಸ್ವಚ್ಛಗೊಳಿಸುವುದು, ಕಸ ಸಂಗ್ರಹ, ಚರಂಡಿ ಸ್ವತ್ಛತೆ, ತ್ಯಾಜ್ಯ ವಿಲೇವಾರಿ ಮಾತ್ರವಲ್ಲದೇ ಕೊರೊನಾ ಸೋಂಕಿತರ ವಾಸವಿರುವ ಪ್ರದೇಶ ಹಾಗೂ ಕ್ವಾರಂಟೈನ್‌ ಮನೆಗಳ ಸುತ್ತಲೂ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ನಿರೀಕ್ಷಕರು, ಪೌರ ಕಾರ್ಮಿಕರು,
ಕಸ ವಿಲೇವಾರಿ ವಾಹನ ಚಾಲಕರು, ಕ್ಲಿನರ್‌ ಗಳು ಸೇರಿದಂತೆ ಒಟ್ಟಾರೆ 1300 ಜನ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮ ಹಾಗೂ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಎಲ್ಲ ಸಿಬ್ಬಂದಿಗೂ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ, ಪರಿಸರ ಅಭಿಯಂತರರಾದ ಮುನಾಫ್‌ ಪಟೇಲ್‌, ಪರಿಸರ ಅಭಿಯಂತರ ಚೇತನ್‌ ನಾಯಕ್‌, ಆರೋಗ್ಯ ನಿರೀಕ್ಷಕ ದೀಪಕ್‌ ಚವ್ಹಾಣ, ಬಿಯಿಂಗ್‌ ಹುಮನ್‌ ಟ್ರಸ್ಟ್‌ ಅಧ್ಯಕ್ಷ ಸಾದಿಕ್‌ ಅಲಿ ದೇಶಮುಖ, ಉಪಾಧ್ಯಕ್ಷ ಅಭಿಷೇಕ ಕಾಂಬ್ಳೆ, ನವೀನ್‌ಕುಮಾರ ಮತ್ತಿತರರು ಇದ್ದರು.

ಕ್ವಾರಂಟೈನ್‌ ಮನೆಗಳಲ್ಲಿ ಔಷಧಿ: ಕೊರೊನಾ ನಿಯಂತ್ರಿಸಲು ಶಂಕಿತ ವ್ಯಕ್ತಿಗಳನ್ನು ಹೋಂ ಕ್ವಾರಂಟೈನ್‌ ಮಾಡಲಾಗುತ್ತಿದೆ. ನಗರದಲ್ಲಿ 70 ಕ್ವಾರಂಟೈನ್‌ ಮನೆಗಳಿದ್ದು, ಮನೆಗಳು
ಮತ್ತು ಸುತ್ತ-ಮುತ್ತಲಿನ ಪ್ರದೇಶದಲ್ಲಿ ಪೌರ ಕಾರ್ಮಿಕರು ಔಷಧಿ ಸಿಂಪಡಿಸುತ್ತಿದ್ದಾರೆ. ಅಲ್ಲದೇ, ಆಯಾ ಮನೆಗಳಿಂದ ಕಸ ಸಂಗ್ರಹವನ್ನು ಪೌರ ಕಾರ್ಮಿಕರು ಮಾಡುತ್ತಿದ್ದಾರೆ. ಕ್ವಾರಂಟೈನ್‌ ಪ್ರದೇಶದಲ್ಲಿ ಕಾರ್ಯ ನಿರ್ವಹಣೆಗೆ ಹತ್ತು ಕಾರ್ಮಿಕರನ್ನು ನಿಯೋಜಿಸಲಾಗಿದ್ದು, ರಕ್ಷಣೆಗೆ ಅಗತ್ಯವಾದ ಉಡುಪು, ಗ್ಲೌಸ್‌, ಶೂ, ಮಾಸ್ಕ್ ಮತ್ತು ವಿಶೇಷ ಕನ್ನಡಕ ಹಾಗೂ ಸ್ಯಾನಿಟೈಜರ್‌ ವಿತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

KSRT

ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಎಳ್ಳು-ನೀರು?

1-frrr

BJP; ಈ ವಾರವೇ ರಾಜ್ಯ ಅಖಾಡಕ್ಕೆ ವರಿಷ್ಠರ ಪ್ರವೇಶ

Parliment New

ಅಭಿವೃದ್ಧಿ, ಜನಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಸಲ್ಲದು

Sea-Ambu

Coastal: ಮೀನುಗಾರರ ಬೇಡಿಕೆಯಾದ ಸೀ ಆ್ಯಂಬುಲೆನ್ಸ್‌ ಯೋಜನೆಗೆ ಆರಂಭಿಕ ಹಿನ್ನಡೆ

Kharge-akhil

Delhi stampede: ಕಾಲ್ತುಳಿತಕ್ಕೆ ಸರಕಾರದ ನಿರ್ಲಕ್ಷ್ಯ ಕಾರಣ: ವಿಪಕ್ಷಗಳ ಆರೋಪ

highcourt

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Jammu–Fire-LOC

Line of Control: ಭಾರತ, ಪಾಕ್‌ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

KSRT

ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಎಳ್ಳು-ನೀರು?

1-frrr

BJP; ಈ ವಾರವೇ ರಾಜ್ಯ ಅಖಾಡಕ್ಕೆ ವರಿಷ್ಠರ ಪ್ರವೇಶ

Parliment New

ಅಭಿವೃದ್ಧಿ, ಜನಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಸಲ್ಲದು

Sea-Ambu

Coastal: ಮೀನುಗಾರರ ಬೇಡಿಕೆಯಾದ ಸೀ ಆ್ಯಂಬುಲೆನ್ಸ್‌ ಯೋಜನೆಗೆ ಆರಂಭಿಕ ಹಿನ್ನಡೆ

Kharge-akhil

Delhi stampede: ಕಾಲ್ತುಳಿತಕ್ಕೆ ಸರಕಾರದ ನಿರ್ಲಕ್ಷ್ಯ ಕಾರಣ: ವಿಪಕ್ಷಗಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.