ಮನೆಗಳಲ್ಲೇ ಅಂಬೇಡ್ಕರ್ ಜಯಂತಿ ಆಚರಣೆಗೆ ಕರೆ
Team Udayavani, Apr 14, 2020, 6:17 AM IST
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ| ಭೀಮ ರಾವ್ ಅಂಬೇಡ್ಕರ್ ಅವರ 129ನೇ ಜಯಂತಿಯನ್ನು ಕೋವಿಡ್ 19 ಸೋಂಕು ತಡೆ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯ ನಾಯಕರು, ಶಾಸಕರು, ಸಂಸದರು, ಎಲ್ಲ ಕಾರ್ಯಕರ್ತರು ತಮ್ಮ ಮನೆಗಳಲ್ಲೇ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಆಚರಣೆ ಮಾಡಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ.
ಅನುಕೂಲಕರ ಸ್ಥಳಗಳಲ್ಲಿ ಕನಿಷ್ಠ ಒಂದು ಗಂಟೆ ಕಾಲ ಅಂಬೇಡ್ಕರ್ ಅವರ ಜೀವನ ಚರಿತ್ರೆ, ಅವರ ಬದುಕು, ಸಾಧನೆಗಳ ಕುರಿತ ಪುಸ್ತಕವನ್ನು ಅಧ್ಯಯನ ಮಾಡಬೇಕು. ನಮ್ಮ ಮನೆಗಳಿರುವ ಕ್ಷೇತ್ರದಲ್ಲಿ, ಬೀದಿಯಲ್ಲಿ ಸಾಮಾಜಿಕ ಅಂತರದೊಂದಿಗೆ ಕಾನೂನು, ನಿಯಮಗಳಿಗೆ ಭಂಗವಾಗದಂತೆ ಕೋವಿಡ್ 19 ಮುಕ್ತ ಕ್ಷೇತ್ರಕ್ಕೆ ಸಂಕಲ್ಪ ಮಾಡಬೇಕು ಎಂದು ತಿಳಿಸಿದ್ದಾರೆ.
ಮಂಗಳವಾರ ಸಂಜೆಯೊಳಗೆ ಕಾರ್ಯಕರ್ತರು ತಮ್ಮ ಸಾಮರ್ಥಯಕ್ಕನುಸಾರವಾಗಿ ಬಡವರು, ಕಾರ್ಮಿಕರ ಮನೆಗಳಿಗೆ ತೆರಳಿ ಆಹಾರ ಪೊಟ್ಟಣ, ದಿನಸಿ ಕಿಟ್, ಮಾಸ್ಕ್ ತಲುಪಿಸಬೇಕು. ಹಾಗೆಯೇ ಸಂಜೆಯೊಳಗೆ ವೀಡಿಯೋ ಸಂವಾದದ ಮೂಲಕ ಅಂಬೇಡ್ಕರ್ ಅವರ ಬಗ್ಗೆ ಭಾಷಣ, ಸಂವಾದ ಕಾರ್ಯಕ್ರಮಗಳನ್ನು ನಡೆಸಬಹುದು ಎಂದು ಅವರು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.