ರಾಜ್ಯ ಸಂಕಷ್ಟದಲ್ಲಿದ್ದರೆ ಸಚಿವರ ಮೋಜು, ಮಸ್ತಿ


Team Udayavani, Apr 14, 2020, 3:18 PM IST

ರಾಜ್ಯ ಸಂಕಷ್ಟದಲ್ಲಿದ್ದರೆ ಸಚಿವರ ಮೋಜು, ಮಸ್ತಿ

ನೆಲಮಂಗಲ: ರಾಜ್ಯವೇ ಸಂಕಷ್ಟದಲ್ಲಿ ಸಿಲುಕಿರುವಾಗ ಜವಾಬ್ದಾರಿಯುತ ಸಚಿವ ಡಾ.ಸುಧಾಕರ್‌ ಮತ್ತು ಸಿ.ಟಿ.ರವಿ ಬೇಜವಾಬ್ದಾರಿತನ ತೋರುತ್ತಿರುವುದು ಅಕ್ಷಮ್ಯ. ಪ್ರಪಂಚಕ್ಕೆ ಪಾಠ ಹೇಳುತ್ತಿರುವ ದೇಶ ನಮ್ಮದು. ಸಚಿವರ ನಡತೆಯಿಂದಾಗಿ ನೈತಿಕ ಹೊಣೆ ಹೊತ್ತು ಸ್ವಯಂ ಪ್ರೇರಣೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿ ಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದರು.

ತಾಲೂಕಿನ ಜಕ್ಕಸಂದ್ರ ಮತ್ತು ಅರಿಶಿನ ಕುಂಟೆ ಗ್ರಾಮಗಳಲ್ಲಿ ಮಾಜಿ ಸಚಿವ ಅಂಜನ ಮೂರ್ತಿ ನೇತೃತ್ವದಲ್ಲಿ ಸ್ಥಳೀಯ ಕಾಂಗ್ರೆಸ್‌ ಮುಖಂಡರು ಹಮ್ಮಿಕೊಂಡಿದ್ದ ಆಹಾರ ಪದಾರ್ಥಗಳ ಕಿಟ್‌ ವಿತರಿಸಿ ಮಾತನಾಡಿದರು. ರಾಜ್ಯ ಸೇರಿದಂತೆ ರಾಷ್ಟ್ರ ಕೊರೊನಾದಿಂದ ತತ್ತರಿಸಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಕೊರೊನಾ ಹೋರಾಟದ ಟೀಮ್‌ ಲೀಡರ್‌ ಎಂದೆ ಬಿಂಬಿಸಿಕೊಂಡಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌ ಈಜುಕೊಳದಲ್ಲಿ ಈಜಾಡುತ್ತ ಸಮಯ ಕಳೆಯುತ್ತಿದ್ದರೆ, ಸಚಿವ ಸಿ.ಟಿ.ರವಿ ತಮ್ಮ ಮುದ್ದಿನ ನಾಯಿಗೆ ಸ್ನಾನ ಮಾಡಿಸಿಕೊಂಡು ಕುಳಿತಿರುವುದು ಅವರು ಜವಾಬ್ದಾರಿ ತೋರುತ್ತದೆ. ಬಿಜೆಪಿ ಸರಕಾರದ ಸಚಿವರ ವರ್ತನೆ ಸಹಿಸಲಾಗದು. ಪ್ರಧಾನಿಯವರಿಗೆ ರಕ್ಷಣೆ ಸಚಿವರಿಗೆ ವೈಯಕ್ತಿಕವಾಗಿ ವಿಮಾನಗಳಿದ್ದರೂ ಎಲ್ಲಿಯೂ ಹೋಗದೆ ತಾವಿರುವಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಹೇಳಿದಂತೆ ದೇಶದ ಪ್ರತಿಯೊಬ್ಬರು ಚಪ್ಪಾಳೆ ಹೊಡೆದಿದ್ದೇವೆ, ದೀಪ ಹಚ್ಚಿದ್ದೇವೆ ಹಾಗೂ ಒಂದು ಹೊತ್ತು ಊಟ ಬಿಟ್ಟಿದ್ದಾರೆ. ಆದರೆ ಸಚಿವರು ಮಾತ್ರ ಈಜಾಡುತ್ತ ಕಾಲಕಳೆಯುತ್ತಿರುವುದು ಬೇಸರದ ಸಂಗತಿ. ಅವರು ರಾಜೀನಾಮೆ ನೀಡದಿದ್ದರೆ, ಮುಖ್ಯಮಂತ್ರಿಗಳೇ ಅವರ ರಾಜೀನಾಮೆ ಪಡೆಯುತ್ತಾರೆ. ಅವರ ಪಕ್ಷದ ಕೇಂದ್ರ ನಾಯಕರೇ ಉತ್ತರಿಸಬೇಕು. ಇಲ್ಲವಾದಲ್ಲಿ ರಾಜ್ಯಪಾಲರು ವಜಾಗೊಳಿಸಬೇಕು ಎಂದು ಕಿಡಿಕಾರಿದರು.

ಸರಕಾರ ಜನರಿಗೆ ದವಸ ಧಾನ್ಯಗಳನ್ನು ನೀಡುವ ಬದಲಿಗೆ ಮುಂದಿನ ದಿನಗಳಲ್ಲಿ ರೈತರಿಂದಲೇ ಸ್ಥಳೀಯವಾಗಿ ಖರೀದಿಸಿ ತರಕಾರಿ ಹಣ್ಣು ಹಂಚಬೇಕು. ಇದರಿಂದ ರೈತರನ್ನು ಬದುಕಿಸುವಂತಹ ಕೆಲಸ ಮಾಡಬೇಕು. ರಾಜ್ಯದ ಉದ್ದಗಲಕ್ಕೆ ಪಕ್ಷದ ಕಾರ್ಯಕರ್ತರು ಮುಖಂಡರು ಸ್ವ ಇಚ್ಛೆಯಿಂದ ಸಹಕಾರಕ್ಕೆ ಮುಂದಾಗುವ ಮೂಲಕ ಮಾನವೀಯತೆ ಮೆರೆಯುತ್ತಿರುವುದಕ್ಕೆ ಅಭಿನಂದನೆಗಳು, ತಾಲೂಕಿನ ಕಾಂಗ್ರೆಸ್‌ ಮುಖಂಡರು, ಮಾಜಿ ಸಚಿವ ಅಂಜನಮೂರ್ತಿ ಅವರ ನೇತೃತ್ವದಲ್ಲಿ ಬಡ ಕೂಲಿಕಾರ್ಮಿಕರು ಮತ್ತು ಗ್ರಾಮೀಣ ಜನರಿಗೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥ ನೀಡಿ ಸಂಕಷ್ಟಕ್ಕೆ ಸ್ಪಂದಿಸುತ್ತಿರುವುದು ಉತ್ತಮ ಕೆಲಸ. ಪಕ್ಷದ ಕಾರ್ಯಕರ್ತರು ತಮ್ಮ ಗ್ರಾಮಗಳ ಜನರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಎಂದು ಕರೆ ನೀಡಿದರು. ಮಾಜಿ ಸಚಿವ ಅಂಜನ ಮೂರ್ತಿ, ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ, ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ರಂಗನಾಥ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮುನಿಶಾಮಪ್ಪ, ಬ್ಲಾಕ್‌ ಕಾಂಗ್ರೇಸ್‌ ಅಧ್ಯಕ್ಷ ನಾಗರಾಜು, ಸಿ.ಆರ್‌. ಗೌಡ, ಮುಂಖಡ ಚಿಕ್ಕನಾಗಯ್ಯ, ಸೈಯದ್‌ ಖಲೀಮುಲ್ಲಾ, ಮಿಲ್ಟ್ರಿ ಮೂರ್ತಿ, ಶಿವಣ್ಣ, ಸಿ ಎಂ.ಗೌಡ ಮತ್ತಿತರರಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.