ಎರಡಂಕಿಗೇರಿದ ಸೋಂಕಿತರ ಸಾವಿನ ಸಂಖ್ಯೆ

ಸೋಂಕಿಗೊಳಗಾದವರ ಸಂಖ್ಯೆ 260, ಗುಣಮುಖ 71

Team Udayavani, Apr 15, 2020, 7:57 AM IST

ಎರಡಂಕಿಗೇರಿದ ಸೋಂಕಿತರ ಸಾವಿನ ಸಂಖ್ಯೆ

ಬೆಂಗಳೂರು: ಮೈಸೂರು ರಸ್ತೆಯ ಟಿಪ್ಪು ನಗರದಲ್ಲಿ ಸೇವಾನಿರತ ಆರೋಗ್ಯ ಕಾರ್ಯಕರ್ತರು.

ಬೆಂಗಳೂರು: ಕೋವಿಡ್-19 ವೈರಸ್‌ ಸೋಂಕಿಗೆ ಮಂಗಳವಾರ ಬೆಂಗಳೂರಿನಲ್ಲಿ ಮತ್ತೂಬ್ಬ ವೃದ್ಧನ ಸಾವಾಗಿದೆ. ಜತೆಗೆ ಉಸಿರಾಟ ಸಮಸ್ಯೆಯಿಂದ ವಿಜಯಪುರದಲ್ಲಿ ಭಾನುವಾರ ಮೃತನಾಗಿದ್ದ ವೃದ್ಧನಿಗೂ ಕೋವಿಡ್-19 ವೈರಸ್‌ ಸೋಂಕು ತಗುಲಿತ್ತು ಎಂದು ಪರೀಕ್ಷೆಯಿಂದ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಜೀವ ಕಳೆದುಕೊಂಡವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ವಿಜಯಪುರದ ಮೃತ ವೃದ್ಧರನ್ನು ಹೊರತು ಪಡಿಸಿ ರಾಜ್ಯದ ವಿವಿಧೆಡೆ ಹೊಸದಾಗಿ 11 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ. ಮಂಗಳವಾರ ಬೆಂಗಳೂರು ನಗರ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳ ತಲಾ ಮೂರು ಮಂದಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ ಬಹುತೇಕರು ಯಾವುದೇ ವಿದೇಶ ಸಂಪರ್ಕ, ದೆಹಲಿ ಪ್ರವಾಸ ಮಾಡಿಲ್ಲ, ಸೋಂಕಿತರ ಸಂಪರ್ಕದಿಂದಲೇ ಸೋಂಕು ತಗುಲಿದೆ. ಇನ್ನು ಮೃತ ಕಲಬುರಗಿ ವೃದ್ಧನನ್ನು ಹೊರತು ಪಡಿಸಿ ಬಾಕಿ 10 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಈ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದವರ ಪತ್ತೆ ಕಾರ್ಯ ನಡೆದಿದ್ದು, ಎಲ್ಲರ ಸೋಂಕು ಪರೀಕ್ಷೆಯನ್ನು ಆರೋಗ್ಯ ಇಲಾಖೆ ಮಾಡಲಿದೆ.

ಒಂದು ಸಾವು, ಮೊತ್ತೂಂದು ದೃಢ: ಸೋಮವಾರ ಕಲಬುರಗಿ, ಬೆಂಗಳೂರಿನಲ್ಲಿ ತಲಾ ಒಬ್ಬರು ಸೋಂಕಿತರು ಮೃತ ರಾಗಿ ಸೋಂಕಿನಿಂದ ಸತ್ತವರ ಸಂಖ್ಯೆ 8 ಇತ್ತು. ಮಂಗಳವಾರ ಮತ್ತೆ ಬೆಂಗಳೂರಿನ ಒಬ್ಬ ವೃದ್ಧ ಮೃತಪಟ್ಟಿದ್ದಾರೆ ಹಾಗೂ ವಿಜಯಪುರದಲ್ಲಿ ಭಾನುವಾರ ತೀವ್ರ ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿದ್ದ ವೃದ್ಧನಿಗೂ ಸೋಂಕು ತಗುಲಿತ್ತು ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.

ಇತ್ತೀಚೆಗೆ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಬೆಂಗಳೂರಿನ 76 ವರ್ಷದ ವೃದ್ಧನಿಗೆ ಕೋವಿಡ್-19 ಸೋಂಕು ಪರೀಕ್ಷೆ ಮಾಡಲಾಗಿತ್ತು. ಏಪ್ರಿಲ್‌ 12 ರಂದು ಸೋಂಕು ದೃಢವಾದ ಹಿನ್ನೆಲೆ ಬೆಂಗಳೂರಿನ ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಚೇತರಿಕೆ ಕಾಣದೆ ವೃದ್ಧ ಮಂಗಳವಾರ ನಿಧನರಾದರು.

ಇನ್ನು ವಿಜಯಪುರದ ವೃದ್ಧನ ಪತ್ನಿಗೆ ಈ ಮುಂಚೆಯೇ ಸೋಂಕು ದೃಢಪಟ್ಟಿದ್ದು, ಇಂದಿಗೂ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯಿಂದ ಮೃತ ವೃದ್ಧನಿಗೆ ಸೋಂಕು ತಗುಲಿತ್ತು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ವಿಜಯಪುರದಲ್ಲಿ ಕೋವಿಡ್-19 ವೈರಸ್‌ಗೆ ಮೊದಲ ಬಲಿ ಹಾಗೂ ಬೆಂಗಳೂರಿನಲ್ಲಿ ಮೂರನೇ ಬಲಿಯಾಗಿದೆ. ಇನ್ನು ಮೃತರ ಅಂತ್ಯಕ್ರಿಯೆಯನ್ನು ಕೇಂದ್ರ ಸರ್ಕಾರದ ಸೂಚನೆಯಂತೆ ಮುಂಜಾಗ್ರತಾ ಕ್ರಮಗಳೊಂದಿಗೆ ಮಾಡಲಾಗಿದೆ.

11 ಮಂದಿ ಗುಣಮುಖರಾಗಿ ಮನೆಗೆ: ಮಂಗಳವಾರ ರಾಜ್ಯದ ವಿವಿಧೆಡೆ 11 ಮಂದಿ ಕೋವಿಡ್-19 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಮುಂದಿನ 14 ದಿನ ಮನೆಯಲ್ಲಿ ಕ್ವಾರಂಟೈನ್‌ ಇರಲು ವೈದ್ಯರು ಸೂಚಿಸಿದ್ದಾರೆ. ಇಲ್ಲಿಯವರೆಗೂ ರಾಜ್ಯದಲ್ಲಿ 71 ಮಂದಿ ಸೋಂಕಿತರು ಗುಣಮುಖರಾದಂತಾಗಿದೆ. ಇನ್ನೂ 179 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಮಂದಿ ಮೃತರಾಗಿದ್ದಾರೆ.

ಮಂಗಳವಾರ ಸೋಂಕು ದೃಢಪಟ್ಟವರು
? ಬಾಗಲಕೋಟೆಯಲ್ಲಿ ಸೋಂಕಿನಿಂದ ಮೃತನಾಗಿರುವ ವೃದ್ಧನಿಂದ ಸೋಂಕು ತಗುಲಿಸಿಕೊಂಡಿದ್ದ ನೆರೆಮನೆಯ ವ್ಯಕ್ತಿಯ ಸಂಪರ್ಕ ಹೊಂದಿದ 43 ವರ್ಷದ ಪುರುಷ, 32 ವರ್ಷದ ಮಹಿಳೆಗೆ ಸೋಂಕು. ಬಾಗಲಕೋಟೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

? ಬಾಗಲಕೋಟೆಯಲ್ಲಿ ಸೋಂಕಿನಿಂದ ಮೃತನಾಗಿರುವ ವೃದ್ಧನಿಂದ ನೆರೆಮನೆಯ 39 ವರ್ಷದ ಮಹಿಳೆಗೂ ಸೋಂಕು ತಗುಲಿದೆ. ಬಾಗಲಕೋಟೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

? ಚಿಕ್ಕಬಳ್ಳಾಪುರದಲ್ಲಿ ಯಾವುದೇ ವಿದೇಶ ಪ್ರಯಾಣ, ಸೋಂಕಿತರ ಸಂಪರ್ಕ ಹೊಂದಿರದ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ 65 ವರ್ಷದ ವೃದ್ಧನಿಗೆ ಸೋಂಕು. ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ
ನೀಡಲಾಗುತ್ತಿದೆ.

? ಹಿಂದೂಪುರದಿಂದ ಏಪ್ರಿಲ್‌ 7ರಂದು ದ್ವಿಚಕ್ರ ವಾಹನದಲ್ಲಿ ಪ್ರಯಾಣ ಮಾಡಿದ ಹಿನ್ನೆಲೆ ಹೊಂದಿರುವ 26 ವರ್ಷದ ಯುವಕನಿಗೆ ಸೋಂಕು ತಗುಲಿದೆ. ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

? ಕಲಬುರಗಿಯಲ್ಲಿ ಇತ್ತೀಚೆಗೆ ಸೋಂಕಿನಿಂದ ಸಾವಿಗೀಡಾಗಿದ್ದ ವೃದ್ಧನ (ಸೋಂಕಿತ 177)ನೇರ ಸಂಪರ್ಕ ಹೊಂದಿದ್ದ 10 ವರ್ಷದ ಬಾಲಕಿ ಹಾಗೂ 35 ವರ್ಷದ ಮಹಿಳೆಗೆ ಸೋಂಕು. ಕಲಬುರಗಿ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

? ಕಲಬುರಗಿಯಲ್ಲಿ ಇತ್ತೀಚೆಗೆ ಸೋಂಕಿನಿಂದ ಸಾವಿಗೀಡಾಗಿದ್ದ ಪುರುಷನ (ಸೋಂಕಿತ -205) ನೇರ ಸಂಪರ್ಕ ಹೊಂದಿದ್ದ 51 ವರ್ಷದ ಪುರುಷನಿಗೆ ಸೋಂಕು. ಕಲಬುರಗಿ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

? ವಿಜಯಪುರದಲ್ಲಿ ಸೋಂಕಿನಿಂದ ಮೃತರಾದ ವೃದ್ಧ. ಕೇಂದ್ರ ಸರ್ಕಾರದ ಸೂಚನೆಯಂತೆ ಅಂತ್ಯಕ್ರಿಯೆ ಮಾಡಲಾಗಿದೆ.

? ಬೆಳಗಾವಿಯಲ್ಲಿ ಇತ್ತೀಚೆಗೆ ದೆಹಲಿ ಪ್ರಯಾಣ ಮಾಡಿರುವ ಹಿನ್ನೆಲೆ ಹೊಂದಿರುವ 33 ವರ್ಷದ ಪುರುಷನಿಗೆ ಸೋಂಕು. ಬೆಳಗಾವಿ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ
ನೀಡಲಾಗುತ್ತಿದೆ.

? ಬೆಂಗಳೂರಿನಲ್ಲಿ ನಿಜಾಮುದ್ದೀನ್‌ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿ ಸೋಂಕಿಗೊಳಗಾಗಿದ್ದ ವ್ಯಕ್ತಿಯಿಂದ 35 ವರ್ಷದ ಮಹಿಳೆಗೆ ಸೋಂಕು
ತಗುಲಿದೆ. ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

? ಉತ್ತರ ಕನ್ನಡದ ಭಟ್ಕಳದಲ್ಲಿ ಇತ್ತೀಚೆಗೆ ದುಬೈ ನಿಂದ ಮರಳಿ ಸೋಂಕಿತೆಯಾಗಿದ್ದ ಮಹಿಳೆಯ 36 ವರ್ಷದ ಗಂಡನಿಗೂ ಸೋಂಕು ತಗುಲಿದೆ. ಉತ್ತರ ಕನ್ನಡದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನ ಸೋಂಕಿತರ ಸಂಖ್ಯೆ 69ಕ್ಕೆ ಇಳಿಮುಖ
ರಾಜ್ಯದಲ್ಲಿ ಈ ಹಿಂದೆ ಯಾರಿಗಾದರೂ ಕೊರೊನಾ ಸೋಂಕು ದೃಢಪಟ್ಟರೆ ಕೂಡಲೇ ಸಮೀಪದ ಕೊರೊನಾ ಚಿಕಿತ್ಸೆಗೆ ನಿಗದಿಪಡಿಸಿದ್ದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಂತೆಯೇ ಆ ಸೋಂಕಿತರನ್ನು ಆಸ್ಪತ್ರೆ ಇರುವ  ಜಿಲ್ಲೆಯ ಸೋಂಕಿತರ ಪಟ್ಟಿಗೆ ಸೇರಿಸಲಾಗುತ್ತಿತ್ತು. ಸದ್ಯ ರಾಜ್ಯದ ಎಲ್ಲಾ ಕೊರೊನಾ ವೈರಸ್‌ ಸೋಂಕಿತರನ್ನು ಅವರ ವಾಸಸ್ಥಳದ ಆಧಾರದಲ್ಲಿ ವರ್ಗೀಕರಿಸಿ ಜಿಲ್ಲಾವಾರು ನೂತನ ಪಟ್ಟಿಯನ್ನು ಆರೋಗ್ಯ ಇಲಾಖೆ ನೀಡಿದೆ. ಈ ವರ್ಗಿಕರಣ
ದಿಂದ ಬೆಂಗಳೂರಿನ ಸೋಂಕಿತರ ಸಂಖ್ಯೆ 69ಕ್ಕೆ ಇಳಿಮುಖವಾಗಿದೆ. ಜತೆಗೆ ಕೆಲ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಇಳಿಕೆ – ಏರಿಕೆಯಾಗಿದೆ.

ವಾಟ್ಸ್‌ಆ್ಯಪ್‌ ಹೆಲ್ಪ್ ಡೆಸ್ಕ್
ಕೋವಿಡ್-19 ಕುರಿತ ಅಧಿಕೃತ ಮಾಹಿತಿಯನ್ನು ಜನಸಾಮಾನ್ಯರು ಪಡೆದುಕೊಳ್ಳಲು ರಾಜ್ಯ ಸರಕಾರ ವಾಟ್ಸ್‌ಆ್ಯಪ್‌ ಕೊರೊನಾ ಹೆಲ್ಪ್ ಡೆಸ್ಕ್ ಸೇವೆ ಆರಂಭಿಸಿದೆ. ಸಾರ್ವಜನಿಕರು 87509 71717 ಸಂಖ್ಯೆಗೆ ವಾಟ್ಸ್‌ಆ್ಯಪ್‌ ಮೂಲಕ ‘ಏಜಿ’ ಎಂದು ಸಂದೇಶ ಕಳುಹಿಸಿದರೆ ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿಯ ಮಾಹಿತಿ ಬರುತ್ತದೆ.

ಮೃತಪಟ್ಟವರ ಜಿಲ್ಲಾವಾರು ಅಂಕಿಅಂಶ‌
? ಬೆಂಗಳೂರು – 3
? ಕಲಬುರಗಿ – 3
? ಬಾಗಲಕೋಟೆ – 1
? ಗದಗ – 1
? ವಿಜಯಪುರ – 1
? ತುಮಕೂರು -1
? ಒಟ್ಟು – 10

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.