ದಕ್ಷಿಣ ಏಷ್ಯಾ ಆರ್ಥಿಕತೆಗೆ ಕೋವಿಡ್‌ ಪ್ರಹಾರ


Team Udayavani, Apr 15, 2020, 12:30 PM IST

ದಕ್ಷಿಣ ಏಷ್ಯಾ ಆರ್ಥಿಕತೆಗೆ ಕೋವಿಡ್‌ ಪ್ರಹಾರ

ಹೊಸದಿಲ್ಲಿ: ಕೋವಿಡ್‌ ಇಡೀ ಜಗತ್ತಿನ ಆರ್ಥಿಕತೆಯನ್ನು ಅಸ್ತವ್ಯಸ್ತಗೊಳಿಸಿದೆ. ಅದರಲ್ಲೂ ಬಡ ದೇಶಗಳ ಆರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ದಕ್ಷಿಣ ಏಷ್ಯಾದ ದೇಶಗಳೂ ಅತ್ಯಂತ ಕಠಿನ ದಿನಗಳನ್ನು ಕಾಣಲಿವೆ ಎಂದು ವಿಶ್ವಬ್ಯಾಂಕ್‌ ವರದಿಯೊಂದು ಹೇಳಿದೆ.

ಭಾರತ, ಬಾಂಗ್ಲಾದೇಶ, ಶ್ರೀಲಂಕ, ಪಾಕಿಸ್ಥಾನ ಈ ಮುಂತಾದ ದೇಶಗಳು ದಕ್ಷಿಣ ಏಷ್ಯಾದಲ್ಲಿ ಬರುತ್ತವೆ. ಈ ಪೈಕಿ 130 ಕೋಟಿ ಜನಸಂಖ್ಯೆಯನ್ನು ಹೊಂದಿರುವ ಭಾರತವೇ ದಕ್ಷಿಣ ಏಷ್ಯಾದಲ್ಲಿ ದೊಡ್ಡ ಆರ್ಥಿಕ ಶಕ್ತಿ. 180 ಕೋಟಿ ಜನರು ದಕ್ಷಿಣ ಏಷ್ಯಾದಲ್ಲಿ ವಾಸವಾಗಿದ್ದಾರೆ ಮತ್ತು ಕೆಲವು ಅತಿ ಜನನಿಬಿಡ ನಗರಗಳು ಈ ದೇಶಗಳಲ್ಲಿವೆ. ಕೋವಿಡ್‌ ಪಶ್ಚಾತ್‌ ಪರಿಣಾಮ ಈ ದೇಶಗಳ ಮೇಲೆ ಹೆಚ್ಚಿರಲಿದೆ. ಪ್ರವಾಸೋದ್ಯಮ ಬಹುತೇಕ ನೆಲಕಚ್ಚಿದೆ. ಪೂರೈಕೆ ಸರಪಣಿ ಅಸ್ತವ್ಯಸ್ತಗೊಂಡಿದೆ. ಜವುಳಿ ಬೇಡಿಕೆ ಪಾತಾಳಕ್ಕಿಳಿದಿದೆ. ಬಳಕೆದಾರರ ಮತ್ತು ಹೂಡಿಕೆದಾರರ ವಿಶ್ವಾಸಾರ್ಹತೆ ಕುಸಿದಿದೆ. ಈ ಪರಿಸ್ಥಿತಿಯಿಂದ ಚೇತರಿಸಿಕೊಳ್ಳಲು ಈ ದೇಶಗಳಿಗೆ ದಶಕಗಳೇ ಬೇಕಾಗಬಹುದು. ಇದರ ಪರಿಣಾಮವಾಗಿ ಬಡತನ ಹೆಚ್ಚಲಿದೆ ಎನ್ನಲಾಗಿದೆ.

ಕುಸಿದ ಆರ್ಥಿಕ ಮುಂಗಾಣ್ಕೆ
ದಕ್ಷಿಣ ಏಷ್ಯಾದ ಆರ್ಥಿಕ ಅಭಿವೃದ್ಧಿಯ ಮುಂಗಾಣ್ಕೆಯನ್ನು ವಿಶ್ವಬ್ಯಾಂಕ್‌ ಪರಿಷ್ಕರಿಸಿದೆ. ಶೇ. 2.8 ಇದ್ದ ಅಭಿವೃದ್ಧಿ ಮುಂಗಾಣ್ಕೆ ದರ ಶೇ. 1.8ಕೆ ಕುಸಿದಿದೆ. ವೈರಸ್‌ ಹಾವಳಿಗಿಂತ ಮುಂಚೆ ವಿಶ್ವಬ್ಯಾಂಕ್‌ ದಕ್ಷಿಣ ಏಷ್ಯಾ ಶೇ. 6.3 ದರದಲ್ಲಿ ಅಭಿವೃದ್ಧಿ ಸಾಧಿಸಲಿದೆ ಎಂದು ಅಂದಾಜಿಸಿತ್ತು. ಸಣ್ಣ ದ್ವೀಪಗಳ ಗುಚ್ಚವಾಗಿರುವ ಮಾಲ್ದೀವ್ಸ್‌ನ ಆರ್ಥಿಕತೆ ಇನ್ನಿಲ್ಲದಂತೆ ನೆಲಕಚ್ಚಲಿದೆ.

ಪ್ರವಾಸೋದ್ಯಮ ಈ ದೇಶದ ಪ್ರಮುಖ ಆದಾಯ ಮೂಲ. ಈಗ ಪ್ರವಾಸೋದ್ಯಮ ಬಹುತೇಕ ಸ್ತಬ್ಧಗೊಂಡಿದ್ದು, ಅಲ್ಲಿಯ ಆರ್ಥಿಕತೆ ಶೇ. 13ರಷ್ಟು ಕುಸಿತ ಕಾಣಲಿದೆ ಎಂದು ಅಂದಾಜಿಸಿದೆ. ಭಾರತದ ಅಭಿವೃದ್ಧಿ ದರ ಹಾಲಿ ಹಣಕಾಸು ವರ್ಷದಲ್ಲಿ ಶೇ.5ರಿಂದ ಶೇ.1.3ಕ್ಕಿಳಿಯಲಿದೆ.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.