ಆರೋಗ್ಯ ಯೋಧರು: ಹೆತ್ತವರಿಗೆ ಸುಳ್ಳು ಹೇಳಿ, ಕೋವಿಡ್ ಹೋರಾಟಕ್ಕೆ
Team Udayavani, Apr 15, 2020, 11:33 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಮೈಕ್ರೋಬಯಾಲಜಿ ವಿಭಾಗದಲ್ಲಿ ಪಿಎಚ್.ಡಿ. ಪೂರ್ಣಗೊಳಿಸಿ, ಆ ಯುವಕ 6 ತಿಂಗಳ ಹಿಂದಷ್ಟೇ ತೆಲಂಗಾಣದಲ್ಲಿನ ಸ್ವಗ್ರಾಮಕ್ಕೆ ಮರಳಿದ್ದರು. ತಮ್ಮ ಹೊಲದಲ್ಲಿ ದುಡಿಯುತ್ತಾ ಹೆತ್ತವರಿಗೆ ಸಹಾಯ ಮಾಡುತ್ತಿದ್ದ 29 ವರ್ಷದ ರಾಮಕೃಷ್ಣ ಅವರಿಗೆ ಇತ್ತೀಚೆಗೆ ವಿವಿಯ ಸಂಶೋಧನಾ ವಿಭಾಗದ ಗೈಡ್ನಿಂದ ಕರೆಯೊಂದು ಬಂತು. ಇದಾದ ಒಂದೇ ಗಂಟೆಯಲ್ಲಿ ರಾಮಕೃಷ್ಣ ಬಟ್ಟೆ-ಬರೆಯೊಂದಿಗೆ ಹೊರಟು ನಿಂತಿದ್ದರು.
ಅಪ್ಪ-ಅಮ್ಮನಿಗೆ ಆತಂಕ… ಯಾಕೆ, ಎಲ್ಲಿಗೆ ಹೋಗುತ್ತಿದ್ದಿಯಾ, ಯಾರದ್ದು ಫೋನ್ ಎಂಬ ಪ್ರಶ್ನೆಗಳ ಸುರಿಮಳೆ. ಸತ್ಯ ಹೇಳಿದರೆ ಹೆತ್ತವರು ಒಪ್ಪಲಿಕ್ಕಿಲ್ಲ ಎಂಬ ಭಾವನೆಯಿಂದ ರಾಮಕೃಷ್ಣ, ನಾನು ಹೈದರಾಬಾದ್ಗೆ ತೆರಳಿ ಗೆಳೆಯನ ಮನೆಯಲ್ಲಿ ಥೀಸೀಸ್ ಬರೆಯಲು ನಿರ್ಧರಿಸಿದ್ದೇನೆ ಎಂದು ಹೇಳಿ, ಹೇಗೋ ಕಷ್ಟಪಟ್ಟು ಹೋಗಿ ತಲುಪಿದ್ದು 1,500 ಕಿ.ಮೀ. ದೂರದ ಲಕ್ನೋಗೆ.
ಅಂದ ಹಾಗೆ, ರಾಮಕೃಷ್ಣಗೆ ಕರೆ ಬಂದಿದ್ದೇ ಲಕ್ನೋದಿಂದ. ಕೋವಿಡ್ 19 ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಸ್ಯಾಂಪಲ್ ಗಳ ಪರೀಕ್ಷೆಗೆ ಹೆಚ್ಚಿನ ಸಿಬ್ಬಂದಿಯ ಅಗತ್ಯವಿದ್ದು, ತಾವು ಕೂಡಲೇ ಹೊರಟುಬಂದರೆ ಬಹಳ ಸಹಾಯವಾಗುತ್ತದೆ ಎಂದು ಕರೆ ಮಾಡಿದ್ದ ಗೈಡ್ ತಿಳಿಸಿದ್ದರು. ಯುದ್ಧದ ಸಮಯದಲ್ಲಿ ಯೋಧರಿಗೆ ಕರೆ ಬಂದಂತೆ, ರಾಮಕೃಷ್ಣ ಅವರೂ ಹಿಂದೆ – ಮುಂದೆ ಯೋಚಿಸದೇ ತಕ್ಷಣ ಲಕ್ನೋಗೆ ತೆರಳಿದ್ದರು. ಇವರ ಕಾರ್ಯಕ್ಕೆ ಈಗ ಎಲ್ಲೆಡೆಯಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thumbe: ಅಗೆದಲ್ಲಿ ಕಡೆಗೂ ಡಾಮರು
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್ ತಯಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.