ಮನೋಸ್ಥೈರ್ಯ ಕುಗ್ಗಬಾರದು: ತಜ್ಞರ ಅಭಿಮತ


Team Udayavani, Apr 16, 2020, 10:48 AM IST

ಮನೋಸ್ಥೈರ್ಯ ಕುಗ್ಗಬಾರದು: ತಜ್ಞರ ಅಭಿಮತ

ಸಾಂದರ್ಭಿಕ ಚಿತ್ರ

ಬೆಂಗಳೂರು: ಲಾಕ್‌ಡೌನ್‌ ಅವಧಿಯಲ್ಲಿ ರಾಜಧಾನಿಯಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರ ಮನೋಸ್ಥೈರ್ಯ ಕುಗ್ಗದಂತೆ ತಡೆಯಲು ಅಗತ್ಯವಿರುವ
ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು. ಹಾಗೆಯೇ ಎಲ್ಲರ ಆರೋಗ್ಯ ತಪಾಸಣೆ ನಡೆಸಿ ಸೋಂಕು ಕಾಣಿಸಿಕೊಳ್ಳದಿದ್ದರೆ ಸುರಕ್ಷಿತವಾಗಿ ಅವರ ಸ್ವಂತ ಊರುಗಳಿಗೆ ಕಳುಹಿಸುವ ವ್ಯವಸ್ಥೆ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ತಜ್ಞರಿಂದ ವ್ಯಕ್ತವಾಗಿದೆ.

ಅಸಂಘಟಿತ ವಲಯದ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ದುಡಿಮೆ ಇಲ್ಲದೆ ಹಣ ಸಿಗುತ್ತಿಲ್ಲ. ಸರಿಯಾಗಿ ಊಟದ ವ್ಯವಸ್ಥೆಯೂ ಆಗುತ್ತಿಲ್ಲ. ಸೂಕ್ತ ವಸತಿ ಕೂಡ ಇಲ್ಲದವರು ತಮ್ಮ ಊರುಗಳಿಗೆ ತೆರಳಲು ಹಂಬಲಿಸಬಹುದು. ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಸೋಂಕು ಇಲ್ಲದಿರುವುದು ದೃಢಪಟ್ಟರೆ ಸಾಮಾಜಿಕ ಅಂತರ ಕಾಯ್ದುಕೊಂಡ ಸಾರಿಗೆ ವ್ಯವಸ್ಥೆಯಡಿ ಅವರನ್ನು ಸುರಕ್ಷಿತವಾಗಿ ಸ್ವಂತ ಊರುಗಳಿಗೆ ಕಳುಹಿಸಿಕೊಡುವುದು ಸೂಕ್ತವೆನಿಸಿದೆ. ಅವರು ತಮ್ಮ ಊರಿನಲ್ಲಿ ತಮಗೆ ಗೊತ್ತಿರುವ ಕೆಲಸದಲ್ಲಿ ತೊಡಗಿಸಿಕೊಂಡು ನೆಮ್ಮದಿಯ ಜೀವನ ನಡೆಸಲು ಅನುಕೂಲವಾಗಬಹುದು ಎಂದು “ಸಿವಿಕ್‌’ ಸಂಸ್ಥೆಯ ಕಾರ್ಯನಿರ್ವಾಹಕ ಟ್ರಸ್ಟಿ ಕಾತ್ಯಾಯಿನಿ ಚಾಮರಾಜ್‌ ಅಭಿಪ್ರಾಯಪಡುತ್ತಾರೆ.

ಮಾಸಿಕ ಮನೆ ಬಾಡಿಗೆಗೆ ಮಾಲೀಕರು ಒತ್ತಡ ಹಾಕಬಾರದು ಎಂದು ಸರ್ಕಾರ ಸೂಚಿಸಿದ್ದರೂ ಹಲವೆಡೆ ಕೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರಿಗೆ ಬಾಡಿಗೆ ಹಣಕ್ಕಾಗಿ ಒತ್ತಡ ಹೇರಲಾಗುತ್ತಿದೆ. ಬಹಳಷ್ಟು ಕಡೆ ದುಡಿಮೆ ಇಲ್ಲದ ಕಾರಣ ಗುತ್ತಿಗೆದಾರರು ಕೂಲಿ ಕಾರ್ಮಿಕರಿಗೆ ವೇತನ ನೀಡುತ್ತಿಲ್ಲ. ಅಲ್ಲದೇ ನಿಯಮಿತವಾಗಿ ಈ ಕಾರ್ಮಿಕರಿಗೆ ಊಟ ಸಿಗುತ್ತಿಲ್ಲ. ಊಟ, ಹಣ, ವಸತಿ ಸೌಲಭ್ಯವಿಲ್ಲದೆ ಸಂಕಷ್ಟದಲ್ಲಿರುವ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ಇಚ್ಛಿಸಬಹುದು. ಹಾಗಾಗಿ ಅವರಿಗೆ ಇಲ್ಲೇ ತೊಂದರೆಯಿಲ್ಲದೆ ಕಾಲ ಕಳೆಯುವ ವ್ಯವಸ್ಥೆ ಕಲ್ಪಿಸುವಂತಾಗಬೇಕು ಎನ್ನುತ್ತಾರೆ.

ಆಪ್ತ ಸಮಾಲೋಚನೆ ಅಗತ್ಯ: ನಗರದಲ್ಲಿನ ವಲಸೆ ಕಾರ್ಮಿಕರಿಗೆ ಸದ್ಯದ ಲಾಕ್‌ಡೌನ್‌ ಅವಧಿ ಕಳೆಯುವುದು ಸವಾಲಾಗಿದ್ದರೆ ಮತ್ತೂಂದೆಡೆ ಲಾಕ್‌ಡೌನ್‌ ಮುಗಿದ ನಂತರ ಭವಿಷ್ಯವೇನು ಎಂಬ ಆತಂಕವಿರುತ್ತದೆ. ಅವರ ಜೀವನೋಪಾಯಕ್ಕೆ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿ ಮುಂದುವರಿಯಬೇಕು ಎಂದು ನಿವೃತ್ತ ಐಎಎಸ್‌ ಅಧಕಾರಿ ಮದನ್‌ ಗೋಪಾಲ್‌ ಹೇಳುತ್ತಾರೆ.

ಬೆಂಗಳೂರು ನಗರದಲ್ಲಿ ಬಿಹಾರ, ಒಡಿಶಾ ಸೇರಿದಂತೆ ಇತರೆ ಭಾಗದ ಕಾರ್ಮಿಕರು ನೆಲೆಸಿದ್ದಾರೆ. ಲಾಕ್‌ಡೌನ್‌ ಅವಧಿಯಲ್ಲಿ ಅವರ ಮನೋಸ್ಥೈರ್ಯ ಕುಗ್ಗದಂತೆ
ತಡೆಯಲು ಗಮನ ಹರಿಸಬೇಕು. ಮುಖ್ಯವಾಗಿ ತಮ್ಮ ಕುಟುಂಬದವರೊಂದಿಗೆ ನಿರಂತರವಾಗಿ ಆಡಿಯೋ, ವಿಡಿಯೋ ಸಂವಾದದ ಮೂಲಕ ಮಾತುಕತೆ ನಡೆಸುವ ವ್ಯವಸ್ಥೆ ಕಲ್ಪಿಸಬೇಕು. ನಗರದಲ್ಲಿರುವ ಆ ರಾಜ್ಯಗಳ ಸಂಘ- ಸಂಸ್ಥೆಗಳೊಂದಿಗೆ ಸಂಪರ್ಕಿಸಿ ವ್ಯವಹರಿಸಲು ಅವಕಾಶ ನೀಡಬೇಕು. ಇದರಿಂದ ವಲಸೆ ಕಾರ್ಮಿಕರಿಗೂ ಒಂದಿಷ್ಟು ನೆರವಾಗಲಿದೆ ಎಂದು ಅಭಿಪ್ರಾಯಪಡುತ್ತಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.