ದ.ಕ. ಕ್ಲಸ್ಟರ್‌ ಹಾಟ್‌ಸ್ಪಾಟ್‌; ಉಡುಪಿ: ಆರೆಂಜ್‌ ಝೋನ್‌


Team Udayavani, Apr 16, 2020, 5:00 PM IST

ದ.ಕ. ಕ್ಲಸ್ಟರ್‌ ಹಾಟ್‌ಸ್ಪಾಟ್‌; ಉಡುಪಿ: ಆರೆಂಜ್‌ ಝೋನ್‌

ಉಡುಪಿ / ಮಂಗಳೂರು: ಕೋವಿಡ್ ನಿಯಂತ್ರಣದಲ್ಲಿ ಉಡುಪಿ ಜಿಲ್ಲೆ ಆರೆಂಜ್‌ ಝೋನ್‌ ಮತ್ತು ನಾನ್‌ಹಾಟ್‌ಸ್ಪಾಟ್‌ ಆಗಿ ಹಾಗೂ ದ.ಕ. ಜಿಲ್ಲೆ ಕ್ಲಸ್ಟರ್‌ ಹಾಟ್‌ಸ್ಪಾಟ್‌ ಆಗಿ ಗುರುತಿಸಿಕೊಂಡಿದೆ.

ಗ್ರೀನ್‌ ಝೋನ್‌ ಅಂದರೆ ಒಂದೇ ಒಂದು ಪಾಸಿಟಿವ್‌ ಪ್ರಕರಣ ಇಲ್ಲದ ಲಕ್ಷಣ. ಹೆಚ್ಚು ಪ್ರಕರಣಗಳು ದಾಖಲಾಗಿದ್ದರೆ ರೆಡ್‌ ಝೋನ್‌ ಎಂದು ಗುರುತಿಸಲಾಗುತ್ತದೆ. ಆರೆಂಜ್‌ ಝೋನ್‌ ಅತ್ತ ಸಂಪೂರ್ಣ ಮುಕ್ತವೂ ಅಲ್ಲದ, ಇತ್ತ ಅತಿ ಅಪಾಯಕಾರಿ ಹಂತವೂ ಅಲ್ಲದ ಸ್ಥಿತಿ. ಆದರೆ ಜಾಗೃತರಾಗಬೇಕಾದ ಸೂಚನೆ ಇದೆ.

ಉಡುಪಿ ಜಿಲ್ಲೆಯಲ್ಲಿ ಮೊದಲ ಮೂರು ಪಾಸಿಟಿವ್‌ ಪ್ರಕರಣದ ಬಳಿಕ ಅವರಿಂದ ಸಂಪರ್ಕಕ್ಕೆ ಒಳಗಾದ ಯಾರೊಬ್ಬರಿಗೂ ಸೋಂಕು ತಗಲದಂತೆ ನೋಡಿಕೊಂಡಿದ್ದು ಆರೆಂಜ್‌ ಝೋನ್‌ ಪ್ರಾಪ್ತವಾಗಲು ಕಾರಣವಾಗಿದೆ. ಇಲ್ಲಿ ಸಮುದಾಯಕ್ಕೆ ಸೋಂಕು ತಗುಲಿಲ್ಲ.

ಕೋವಿಡ್ ಪಾಸಿಟಿವ್‌ ಸಂಪರ್ಕಕ್ಕೆ ಬಂದವರಲ್ಲದೆ ಮೂರನೆಯ ಸಂಪರ್ಕದವರ ಗಂಟಲು ದ್ರವವನ್ನೂ ಸಂಗ್ರಹಿಸಲಾಗುತ್ತಿದೆ. ಬುಧವಾರ 106, ಮಂಗಳವಾರ 108 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಸತತ 17 ದಿನಗಳಿಂದ ಯಾವುದೇ ಪಾಸಿಟಿವ್‌ ಪ್ರಕರಣಗಳು ದಾಖಲಾಗಿಲ್ಲ. 28 ದಿನಗಳು ಇದೇ ರೀತಿ ಮುಂದುವರಿದರೆ ಉಡುಪಿ ಕೋವಿಡ್ ಮುಕ್ತ ಜಿಲ್ಲೆ ಆಗಲಿದೆ.

ಗಡಿ ಬಂದ್‌ಗೆ ಇನ್ನಷ್ಟು ಆದ್ಯತೆ
ನಮ್ಮ ಜಿಲ್ಲೆ ಸುರಕ್ಷಿತವಾಗಿದ್ದರೂ ಗಡಿಯ ಬಂದೋಬಸ್ತನ್ನು ಇನ್ನಷ್ಟು ಬಿಗಿಗೊಳಿಸಲು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದೇವೆ. ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಜನರು ಬಂದು ಅವರ ಆರೋಗ್ಯದಲ್ಲಿ ಸಮಸ್ಯೆ ಇದ್ದರೆ ಕಷ್ಟವಾಗುತ್ತದೆ. ಹಾಗೋ ಹೀಗೋ ಬಂದವರಿಗೆ ಮನೆಯಲ್ಲಿ ಕ್ವಾರಂಟೈನ್‌ನಲ್ಲಿರಲು ತಿಳಿಸಿದ್ದೇವೆ. ಅಗತ್ಯವಿದ್ದರೆ ಮಾದರಿ ಪರೀಕ್ಷೆಗಳನ್ನೂ ನಡೆಸುತ್ತಿದ್ದೇವೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್‌ಚಂದ್ರ  ಸೂಡ ತಿಳಿಸಿದ್ದಾರೆ.

ನಿಯಮ ಬದಲಾವಣೆ ಇಲ್ಲ
ದ.ಕ. ಜಿಲ್ಲೆಯಲ್ಲಿ ಒಟ್ಟು 12 ಪ್ರಕರಣಗಳು ಪತ್ತೆಯಾಗಿದ್ದು, 9 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸತತ 17 ದಿನಗಳಿಂದ ಹೊಸ ಪ್ರಕರಣಗಳು ದಾಖಲಾಗಿಲ್ಲ. ಮೂವರು ಚಿಕಿತ್ಸೆ ಪಡೆಯುತ್ತಿರುವುದರಿಂದ ಜಿಲ್ಲೆಯನ್ನು ಕ್ಲಸ್ಟರ್‌ ಹಾಟ್‌ಸ್ಪಾಟ್‌ ಎಂದು ಗುರುತಿಸಲಾಗಿದೆ. ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್‌ ಆಯುಕ್ತ ಡಾ| ಪಿ.ಎಸ್‌. ಹರ್ಷ ಅವರು, ಜಿಲ್ಲೆ ಯಾವುದೇ ಝೋನ್‌ನಲ್ಲಿ ಬಂದರೂ ನಗರ ವ್ಯಾಪ್ತಿಯಲ್ಲಿ ಲಾಕ್‌ಡೌನ್‌ ನಿಯಮಾವಳಿಗಳನ್ನು ಬದಲಿಸುವುದಿಲ್ಲ. ಈವರೆಗೆ ಯಾವ ರೀತಿಯ ಕಾನೂನು ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೋ, ಅವುಗಳೇ ಮುಂದುವರಿಯಲಿವೆ. ಜನರು ಮನೆಯೊಳಗಿದ್ದು, ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕಿಳಿಸಲು ಹಾಗೂ ಹೊಸ ಪ್ರಕರಣಗಳು ಪತ್ತೆಯಾಗದಂತೆ ಮಾಡಲು ಸಹಕರಿಸಬೇಕು. ಅವಶ್ಯವಿಲ್ಲದಿಲ್ಲರೆ ಹೊರಗೆ ಬಾರದೆ ಲಾಕ್‌ಡೌನ್‌ ಯಶಸ್ವಿಯಾಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಕಾಸರಗೋಡು ಹಾಟ್‌ಸ್ಪಾಟ್‌
ಒಂದು ಪ್ರಕರಣ ಮಾತ್ರ ಪತ್ತೆಯಾಗಿರುವ ಕೊಡಗು ಜಿಲ್ಲೆ ಆರೆಂಜ್‌ ಝೋನ್‌ನಲ್ಲಿ ಸೇರ್ಪಡೆಯಾಗಿದೆ. ಆದರೆ, ಇನ್ನೂ ಹಲವು ಪಾಸಿಟಿವ್‌ ಪ್ರಕರಣಗಳಿರುವ ಕಾಸರಗೋಡು ಜಿಲ್ಲೆ ಹಾಟ್‌ಸ್ಪಾಟ್‌ ಎಂದು ಗುರುತಿಸಿಕೊಂಡಿದೆ.

ಎ. 20: ಹೊಸ ಮಾರ್ಗದರ್ಶಿ ಸೂತ್ರ
ಲಾಕ್‌ಡೌನ್‌ ಮೇ 3ರ ವರೆಗೆ ಮುಂದುವರಿಯಲಿದ್ದು, ಎ. 20ರಂದು ಸರಕಾರ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಿದೆ. ಆಗ ಗ್ರಾಮೀಣ ಪ್ರದೇಶಕ್ಕೆ ಸಂಬಂಧಿಸಿ ರಿಯಾಯಿತಿಗಳು ದೊರೆಯಬಹುದು. ಅಲ್ಲಿಯವರೆಗೆ ಯಥಾಸ್ಥಿತಿ ಮುಂದುವರಿಯಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದ್ದಾರೆ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pan-Adhar

Scheme: ದಂಡ ಸಹಿತ ಪಾನ್‌-ಆಧಾರ್‌ ಜೋಡಿಸಿದವರು ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ!

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.